ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ

ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಸಭೆಯ ಬಳಿಕ ಘೋಷಣೆ ಮಾಡಿರುವ ೩೩೦೦ ರೂ.ಬೆಲೆ ನೀಡಲಾಗುತ್ತದೆ.ಹೋರಾಟ ಸ್ಥಗಿತಗೊಳಿಸಿ ಕಾರ್ಖಾನೆಗೆ ಕಬ್ಬು ಪೂರೈಸುವಂತೆ ತಹಶೀಲ್ದಾರ್‌ರು ಮಾಡಿದ ಮನವಿಗೆ ರೈತರು ಸ್ಪಂದಿಸಿಲ್ಲ.

ತಾಲ್ಲೂಕಿನ ತಂಗಡಗಿ ಸಮೀಪದ ಅಮರಗೋಳ ಕ್ರಾಸನಲ್ಲಿ ನಾಲ್ಕು ದಿನಗಳಿಂದ ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸಿರುವ ಹೋರಾಟದ ಸ್ಥಳಕ್ಕೆ ಶುಕ್ರವಾರ ಸಂಜೆ ತಹಶೀಲ್ದಾರ್ ಕೀರ್ತಿ ಚಾಲಕ ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿದರು.ಮುಖ್ಯಮಂತ್ರಿಗಳು ಈಗಾಗಲೇ ಕಬ್ಬಿಗೆ ಬೆಂಬಲ ಬೆಲೆಯನ್ನಾಗಿ ನೀಡುವುದಾಗಿ ಘೋಷಣೆ ಮಾಡಿದ್ದು ಹೋರಾಟ ಹಿಂಪಡೆದುಕೊಳ್ಳುವAತೆ ಮನವಿ ಮಾಡಿದರು.
ಇದಕ್ಕೆ ಒಪ್ಪದ ಕರ್ನಾಟಕ ರಾಜ್ಯ ರೈತ ಸಂಘದ ತಾಳಿಕೋಟಿ ಅಧ್ಯಕ್ಷ ಬಾಲಪ್ಪ ಲಿಂಗದಳ್ಳಿ, ನಮಗೆ ಅಧಿಕೃತ ಆದೇಶ ಕಾರ್ಖಾನೆಯವರಿಂದ ಬರಬೇಕು.ಅಲ್ಲಿಯವರೆಗೂ ಹೋರಾಟ ಮುಂದುವರೆಸುವುದಾಗಿ ತಿಳಿಸಿದರು.ರೈತರ ಮುಖಂಡರು ಲಿಖಿತ ಆದೇಶ ಕಾರ್ಖಾನೆಯವರು ನೀಡಿದ್ದಲ್ಲಿ ಹೋರಾಟ ಹಿಂದಕ್ಕೆ ಪಡೆದು ಕಬ್ಬು ಪೂರೈಕೆಗೆ ಮುಂದಾಗುವುದಾಗಿ ತಿಳಿಸಿದ್ದರಿಂದ ತಹಶೀಲ್ದಾರರು ವಾಪಸ್ ಆಗಬೇಕಾಯಿತು.
ಕಾರ್ಖಾನೆಯವರು, ನಮಗೆ ಲಿಖಿತ ಆದೇಶ ಈವರೆಗೂ ಬಂದಿಲ್ಲ ಎಂದು ತಿಳಿಸಿದ್ದರಿಂದ ಹೋರಾಟ ಮುಂದುವರೆದಿದೆ. ಸಿಪಿಐ ಮೊಹ್ಮದಫಸಿವುದ್ದೀನ, ಪಿಎಸ್‌ಐ ಸಂಜಯ ತಿಪರೆಡ್ಡಿ, ರೈತ ಮುಖಂಡರಾದ ಸಂಗಪ್ಪ ಬಾಗೇವಾಡಿ, ಗುರುಸಂಗಪ್ಪ ಹಂಡರಗಲ್, ರಾಜು ತಿಳಗೂಳ,ಶಿವು ಕನ್ನೊಳ್ಳಿ, ಶಿವನಗೌಡ ಜಲಪೂರ ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ