ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ

ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಸಭೆಯ ಬಳಿಕ ಘೋಷಣೆ ಮಾಡಿರುವ ೩೩೦೦ ರೂ.ಬೆಲೆ ನೀಡಲಾಗುತ್ತದೆ.ಹೋರಾಟ ಸ್ಥಗಿತಗೊಳಿಸಿ ಕಾರ್ಖಾನೆಗೆ ಕಬ್ಬು ಪೂರೈಸುವಂತೆ ತಹಶೀಲ್ದಾರ್‌ರು ಮಾಡಿದ ಮನವಿಗೆ ರೈತರು ಸ್ಪಂದಿಸಿಲ್ಲ.

ತಾಲ್ಲೂಕಿನ ತಂಗಡಗಿ ಸಮೀಪದ ಅಮರಗೋಳ ಕ್ರಾಸನಲ್ಲಿ ನಾಲ್ಕು ದಿನಗಳಿಂದ ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸಿರುವ ಹೋರಾಟದ ಸ್ಥಳಕ್ಕೆ ಶುಕ್ರವಾರ ಸಂಜೆ ತಹಶೀಲ್ದಾರ್ ಕೀರ್ತಿ ಚಾಲಕ ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿದರು.ಮುಖ್ಯಮಂತ್ರಿಗಳು ಈಗಾಗಲೇ ಕಬ್ಬಿಗೆ ಬೆಂಬಲ ಬೆಲೆಯನ್ನಾಗಿ ನೀಡುವುದಾಗಿ ಘೋಷಣೆ ಮಾಡಿದ್ದು ಹೋರಾಟ ಹಿಂಪಡೆದುಕೊಳ್ಳುವAತೆ ಮನವಿ ಮಾಡಿದರು.
ಇದಕ್ಕೆ ಒಪ್ಪದ ಕರ್ನಾಟಕ ರಾಜ್ಯ ರೈತ ಸಂಘದ ತಾಳಿಕೋಟಿ ಅಧ್ಯಕ್ಷ ಬಾಲಪ್ಪ ಲಿಂಗದಳ್ಳಿ, ನಮಗೆ ಅಧಿಕೃತ ಆದೇಶ ಕಾರ್ಖಾನೆಯವರಿಂದ ಬರಬೇಕು.ಅಲ್ಲಿಯವರೆಗೂ ಹೋರಾಟ ಮುಂದುವರೆಸುವುದಾಗಿ ತಿಳಿಸಿದರು.ರೈತರ ಮುಖಂಡರು ಲಿಖಿತ ಆದೇಶ ಕಾರ್ಖಾನೆಯವರು ನೀಡಿದ್ದಲ್ಲಿ ಹೋರಾಟ ಹಿಂದಕ್ಕೆ ಪಡೆದು ಕಬ್ಬು ಪೂರೈಕೆಗೆ ಮುಂದಾಗುವುದಾಗಿ ತಿಳಿಸಿದ್ದರಿಂದ ತಹಶೀಲ್ದಾರರು ವಾಪಸ್ ಆಗಬೇಕಾಯಿತು.
ಕಾರ್ಖಾನೆಯವರು, ನಮಗೆ ಲಿಖಿತ ಆದೇಶ ಈವರೆಗೂ ಬಂದಿಲ್ಲ ಎಂದು ತಿಳಿಸಿದ್ದರಿಂದ ಹೋರಾಟ ಮುಂದುವರೆದಿದೆ. ಸಿಪಿಐ ಮೊಹ್ಮದಫಸಿವುದ್ದೀನ, ಪಿಎಸ್‌ಐ ಸಂಜಯ ತಿಪರೆಡ್ಡಿ, ರೈತ ಮುಖಂಡರಾದ ಸಂಗಪ್ಪ ಬಾಗೇವಾಡಿ, ಗುರುಸಂಗಪ್ಪ ಹಂಡರಗಲ್, ರಾಜು ತಿಳಗೂಳ,ಶಿವು ಕನ್ನೊಳ್ಳಿ, ಶಿವನಗೌಡ ಜಲಪೂರ ಇದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ