ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ

ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಸಭೆಯ ಬಳಿಕ ಘೋಷಣೆ ಮಾಡಿರುವ ೩೩೦೦ ರೂ.ಬೆಲೆ ನೀಡಲಾಗುತ್ತದೆ.ಹೋರಾಟ ಸ್ಥಗಿತಗೊಳಿಸಿ ಕಾರ್ಖಾನೆಗೆ ಕಬ್ಬು ಪೂರೈಸುವಂತೆ ತಹಶೀಲ್ದಾರ್‌ರು ಮಾಡಿದ ಮನವಿಗೆ ರೈತರು ಸ್ಪಂದಿಸಿಲ್ಲ.

ತಾಲ್ಲೂಕಿನ ತಂಗಡಗಿ ಸಮೀಪದ ಅಮರಗೋಳ ಕ್ರಾಸನಲ್ಲಿ ನಾಲ್ಕು ದಿನಗಳಿಂದ ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸಿರುವ ಹೋರಾಟದ ಸ್ಥಳಕ್ಕೆ ಶುಕ್ರವಾರ ಸಂಜೆ ತಹಶೀಲ್ದಾರ್ ಕೀರ್ತಿ ಚಾಲಕ ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿದರು.ಮುಖ್ಯಮಂತ್ರಿಗಳು ಈಗಾಗಲೇ ಕಬ್ಬಿಗೆ ಬೆಂಬಲ ಬೆಲೆಯನ್ನಾಗಿ ನೀಡುವುದಾಗಿ ಘೋಷಣೆ ಮಾಡಿದ್ದು ಹೋರಾಟ ಹಿಂಪಡೆದುಕೊಳ್ಳುವAತೆ ಮನವಿ ಮಾಡಿದರು.
ಇದಕ್ಕೆ ಒಪ್ಪದ ಕರ್ನಾಟಕ ರಾಜ್ಯ ರೈತ ಸಂಘದ ತಾಳಿಕೋಟಿ ಅಧ್ಯಕ್ಷ ಬಾಲಪ್ಪ ಲಿಂಗದಳ್ಳಿ, ನಮಗೆ ಅಧಿಕೃತ ಆದೇಶ ಕಾರ್ಖಾನೆಯವರಿಂದ ಬರಬೇಕು.ಅಲ್ಲಿಯವರೆಗೂ ಹೋರಾಟ ಮುಂದುವರೆಸುವುದಾಗಿ ತಿಳಿಸಿದರು.ರೈತರ ಮುಖಂಡರು ಲಿಖಿತ ಆದೇಶ ಕಾರ್ಖಾನೆಯವರು ನೀಡಿದ್ದಲ್ಲಿ ಹೋರಾಟ ಹಿಂದಕ್ಕೆ ಪಡೆದು ಕಬ್ಬು ಪೂರೈಕೆಗೆ ಮುಂದಾಗುವುದಾಗಿ ತಿಳಿಸಿದ್ದರಿಂದ ತಹಶೀಲ್ದಾರರು ವಾಪಸ್ ಆಗಬೇಕಾಯಿತು.
ಕಾರ್ಖಾನೆಯವರು, ನಮಗೆ ಲಿಖಿತ ಆದೇಶ ಈವರೆಗೂ ಬಂದಿಲ್ಲ ಎಂದು ತಿಳಿಸಿದ್ದರಿಂದ ಹೋರಾಟ ಮುಂದುವರೆದಿದೆ. ಸಿಪಿಐ ಮೊಹ್ಮದಫಸಿವುದ್ದೀನ, ಪಿಎಸ್‌ಐ ಸಂಜಯ ತಿಪರೆಡ್ಡಿ, ರೈತ ಮುಖಂಡರಾದ ಸಂಗಪ್ಪ ಬಾಗೇವಾಡಿ, ಗುರುಸಂಗಪ್ಪ ಹಂಡರಗಲ್, ರಾಜು ತಿಳಗೂಳ,ಶಿವು ಕನ್ನೊಳ್ಳಿ, ಶಿವನಗೌಡ ಜಲಪೂರ ಇದ್ದರು.

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ