Take action against schools that start unlicensed residential schools: Prabhu Gowda B Pothareddy

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಹುಣಸಗಿ: ಸುರಪುರ ತಾಲೂಕಿನಾದ್ಯಂತ ವಸತಿಸಹಿತ ನಡೆಸುತ್ತಿರುವ ಖಾಸಗಿ ಶಾಲೆಗಳ ಮಾನ್ಯತೆಯನ್ನು ಹಿಂಪಡೆಯುವಂತೆ ಜಯ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ. ಬಿ. ಪೋತರೆಡ್ಡಿ ಆಗ್ರಹಿಸಿದ್ದಾರೆ.

ಸುರಪುರ ಮತ್ತು ಹುಣಸಗಿ ತಾಲೂಕಿನ ಖಾಸಗಿ ಶಾಲೆಗಳಲ್ಲಿ ಪರವಾನಿಗೆ ಇಲ್ಲದೇ ವಸತಿ ರಹಿತ ಶಾಲೆಗಳನ್ನು ಪ್ರಾರಂಭಿಸಿರುವ ಶಾಲೆಯ ಆಡಳಿತ ಮಂಡಳಿಗಳ ಹಗಲು ದರೋಡೆ ವಿರುದ್ಧ ಧ್ವನಿಯತ್ತಿರುವ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ. ಬಿ. ಪೋತರೆಡ್ಡಿ ಈ ವಿಷಯ ಕುರಿತು ಕ್ಷೇತ್ರಶಿಕ್ಷಣ ಇಲಾಖೆಯ ಅಧಿಕಾರಿಗೆ ಮನವಿ ನೀಡಿದ್ದಾರೆ.

ಈ ವಿಷಯದ ಬಗ್ಗೆ ಮಾತನಾಡಿದ ಅವರು ಸುರಪುರ ಮತ್ತು ಹುಣಸಗಿ ತಾಲೂಕಿನಾಧ್ಯಂತ ಕಾನೂನು ಬಾಹಿರವಾಗಿ ಸರಕಾರದಿಂದ ಯಾವುದೇ ರೀತಿಯಾಗಿ ಪರವಾನಿಗೆ ಪಡೆಯದೆ ವಸತಿ ಸಹಿತಿ ಖಾಸಗಿ ಶಾಲೆಗಳಲ್ಲಿ ಪಾಲಕರಿಂದ ಹೆಚ್ಚಿನ ಶುಲ್ಕ ವಸುಲಿಗೆ ಇಳಿದಿವೆ. ಈ ಕುರಿತು ಹಲವು ಬಾರಿ ಪೋಷಕರು ನನ್ನ ಗಮನಕ್ಕೆ ತಂದಿದ್ದು, ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯನ್ನು ನೀಡಿದ್ದು , ಅಲ್ಲದೇ ಕಳೆದ ಕೆಲವು ತಿಂಗಳುಗಳ ಹಿಂದೆ ಪರವಾನಿಗೆ ಇಲ್ಲದೇ ವಸತಿ ಸಹಿತ ಶಾಲೆಯನ್ನು ನಡೆಸುತ್ತಿದ್ದ ಶ್ರೀ ಖಾಸ್ಗತೇಶ್ವರ ಪ್ರೌಢ ಶಾಲೆ ಹುಣಸಗಿ ಶಾಲೆಗೆ ಭೇಟಿ ನೀಡಿದ್ದ ಶಿಕ್ಷಣ ಇಲಾಖೆಯ ತಂಡ ಆ ಶಾಲೆಯ ಪರವಾನಿಗೆಯನ್ನು ರದ್ದು ಮಾಡಿದೆ. ಅದೇ ರೀತಿಯಾಗಿ ಇನ್ನೂ ಕೂಡ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಹಲವು
ಶಾಲೆಗಳು ಪರವಾನಿಗೆ ಇಲ್ಲದೇ ವಸತಿ ಸಹಿತ ಖಾಸಗಿ ಶಾಲೆಗಳನ್ನು ನಡೆಸುತ್ತಿದ್ದು, ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ ಶಿಸ್ತು ಕ್ರಮ ಜರುಗಿಸುವಲ್ಲಿ ಶಾಲಾ ಆಡಳಿತ ಮಂಡಳಿಯವರ ಆಮೀಷಕ್ಕೆ ಬಲಿಯಾಗದೆ ಮತ್ತು ಮಲತಾಯಿ ಧೋರಣೆಯನ್ನು ಅನುಸರಿಸದೇ ಕ್ರಮ ವಹಿಸಬೇಕೇಂದು ಆಗ್ರಹಿಸಿದ್ದರೆ. ಇಲ್ಲವಾದಲ್ಲಿ ಬಡ ಪೋಷಕರಿಂದ ಹೆಚ್ಚಿನ ಶುಲ್ಕಗಳನ್ನು ಪಡೆಯುತ್ತಿರುವ ಶಾಲೆಗಳ ವಿರುದ್ಧ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.

ಮುಂತಾದ ಶಾಲೆಗಳು ಶಿಕ್ಷಣ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಕಾನೂನುಬಾಹಿರವಾಗಿ ವಸತಿ ಸಹಿತ ಶಿಕ್ಷಣ ಆರಂಭಿಸಿದ್ದರೆಂದು ಅವರು ಆರೋಪಿಸಿದ್ದಾರೆ.

ಜೀನಿಯಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಾವಿನಗಿಡದ ತಾಂಡ, ಪುರಾನಾಯಕ್ ಕಿರಿಯ ಪ್ರಾಥಮಿಕ ಶಾಲೆ ಕೊಡೇಕಲ್ ಆರ್ ಟಿ ಜೆ ಸೂಲ್ ಗಣೇಶ್ ಪಬ್ಲಿಕ್ ಸ್ಕೂಲ್ ಕೋಳಿಹಾಳ ಬಸವೇಶ್ವರ್ ಸ್ಕೂಲ್ ಮುದನೂರು, ಆರ್ಶೀವಾದ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹುಣಸಗಿ ವಿದ್ಯಾ ವಿಕಾಸ ಶಾಲೆ ಎಲ್ ಪಿ ಎಸ್ ಕುಪ್ಪಿ ಕ್ರಾಸ್ ಹುಣಸಗಿ, ರಾಮಲಿಂಗೇಶ್ವರ ಹಿರಿಯ ಪ್ರಾಥಮಿಕ ಶಾಲೆ ಗುಳಬಾಳ, ಕನಕದಾಸ ಕಿರಿಯ ಪ್ರಾಥಮಿಕ ಶಾಲೆ ಯಡಹಳ್ಳಿ, ರೇವಣಸಿದ್ದೇಶ್ವರ ಕಿರಿಯ ಪ್ರಾರ್ಥಮಿಕ ಶಾಲೆ ಯಡಹಳ್ಳಿ, ಶೆಟ್ಟಿ ಕಾಂಪಿಟೇಟಿವ್ ಸ್ಕೂಲ್ ಸುರಪುರ , ವಿದ್ಯಾ ವಿಕಾಸ್ ಸ್ಕೂಲ್ ಕೆಂಭಾವಿ, ಶ್ರೀ ಸಾಯಿ ಪಬ್ಲಿಕ್ ಸ್ಕೂಲ್ ಕೆಂಭಾವಿ, ಬ್ರಿಲಿಯಂಟ್ ಸ್ಕೂಲ್ ಕೆಂಭಾವಿ, ನಂದನ್ ಸ್ಕೂಲ್, ಕೆಂಭಾವಿ ಶ್ರೀ ವಿದ್ಯಾಲಕ್ಷ್ಮಿ ಪಬ್ಲಿಕ್ ಸ್ಕೂಲ್ ಕೆಂಭಾವಿ , ಹೋಲಿ ಫೇಥ ಸ್ಕೂಲ್ ಕೆಂಭಾವಿ.

ವರದಿಗಾರ : ಶಿವು ರಾಠೋಡ

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ