Take action against schools that start unlicensed residential schools: Prabhu Gowda B Pothareddy

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಹುಣಸಗಿ: ಸುರಪುರ ತಾಲೂಕಿನಾದ್ಯಂತ ವಸತಿಸಹಿತ ನಡೆಸುತ್ತಿರುವ ಖಾಸಗಿ ಶಾಲೆಗಳ ಮಾನ್ಯತೆಯನ್ನು ಹಿಂಪಡೆಯುವಂತೆ ಜಯ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ. ಬಿ. ಪೋತರೆಡ್ಡಿ ಆಗ್ರಹಿಸಿದ್ದಾರೆ.

ಸುರಪುರ ಮತ್ತು ಹುಣಸಗಿ ತಾಲೂಕಿನ ಖಾಸಗಿ ಶಾಲೆಗಳಲ್ಲಿ ಪರವಾನಿಗೆ ಇಲ್ಲದೇ ವಸತಿ ರಹಿತ ಶಾಲೆಗಳನ್ನು ಪ್ರಾರಂಭಿಸಿರುವ ಶಾಲೆಯ ಆಡಳಿತ ಮಂಡಳಿಗಳ ಹಗಲು ದರೋಡೆ ವಿರುದ್ಧ ಧ್ವನಿಯತ್ತಿರುವ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ. ಬಿ. ಪೋತರೆಡ್ಡಿ ಈ ವಿಷಯ ಕುರಿತು ಕ್ಷೇತ್ರಶಿಕ್ಷಣ ಇಲಾಖೆಯ ಅಧಿಕಾರಿಗೆ ಮನವಿ ನೀಡಿದ್ದಾರೆ.

ಈ ವಿಷಯದ ಬಗ್ಗೆ ಮಾತನಾಡಿದ ಅವರು ಸುರಪುರ ಮತ್ತು ಹುಣಸಗಿ ತಾಲೂಕಿನಾಧ್ಯಂತ ಕಾನೂನು ಬಾಹಿರವಾಗಿ ಸರಕಾರದಿಂದ ಯಾವುದೇ ರೀತಿಯಾಗಿ ಪರವಾನಿಗೆ ಪಡೆಯದೆ ವಸತಿ ಸಹಿತಿ ಖಾಸಗಿ ಶಾಲೆಗಳಲ್ಲಿ ಪಾಲಕರಿಂದ ಹೆಚ್ಚಿನ ಶುಲ್ಕ ವಸುಲಿಗೆ ಇಳಿದಿವೆ. ಈ ಕುರಿತು ಹಲವು ಬಾರಿ ಪೋಷಕರು ನನ್ನ ಗಮನಕ್ಕೆ ತಂದಿದ್ದು, ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯನ್ನು ನೀಡಿದ್ದು , ಅಲ್ಲದೇ ಕಳೆದ ಕೆಲವು ತಿಂಗಳುಗಳ ಹಿಂದೆ ಪರವಾನಿಗೆ ಇಲ್ಲದೇ ವಸತಿ ಸಹಿತ ಶಾಲೆಯನ್ನು ನಡೆಸುತ್ತಿದ್ದ ಶ್ರೀ ಖಾಸ್ಗತೇಶ್ವರ ಪ್ರೌಢ ಶಾಲೆ ಹುಣಸಗಿ ಶಾಲೆಗೆ ಭೇಟಿ ನೀಡಿದ್ದ ಶಿಕ್ಷಣ ಇಲಾಖೆಯ ತಂಡ ಆ ಶಾಲೆಯ ಪರವಾನಿಗೆಯನ್ನು ರದ್ದು ಮಾಡಿದೆ. ಅದೇ ರೀತಿಯಾಗಿ ಇನ್ನೂ ಕೂಡ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಹಲವು
ಶಾಲೆಗಳು ಪರವಾನಿಗೆ ಇಲ್ಲದೇ ವಸತಿ ಸಹಿತ ಖಾಸಗಿ ಶಾಲೆಗಳನ್ನು ನಡೆಸುತ್ತಿದ್ದು, ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ ಶಿಸ್ತು ಕ್ರಮ ಜರುಗಿಸುವಲ್ಲಿ ಶಾಲಾ ಆಡಳಿತ ಮಂಡಳಿಯವರ ಆಮೀಷಕ್ಕೆ ಬಲಿಯಾಗದೆ ಮತ್ತು ಮಲತಾಯಿ ಧೋರಣೆಯನ್ನು ಅನುಸರಿಸದೇ ಕ್ರಮ ವಹಿಸಬೇಕೇಂದು ಆಗ್ರಹಿಸಿದ್ದರೆ. ಇಲ್ಲವಾದಲ್ಲಿ ಬಡ ಪೋಷಕರಿಂದ ಹೆಚ್ಚಿನ ಶುಲ್ಕಗಳನ್ನು ಪಡೆಯುತ್ತಿರುವ ಶಾಲೆಗಳ ವಿರುದ್ಧ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.

ಮುಂತಾದ ಶಾಲೆಗಳು ಶಿಕ್ಷಣ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಕಾನೂನುಬಾಹಿರವಾಗಿ ವಸತಿ ಸಹಿತ ಶಿಕ್ಷಣ ಆರಂಭಿಸಿದ್ದರೆಂದು ಅವರು ಆರೋಪಿಸಿದ್ದಾರೆ.

ಜೀನಿಯಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಾವಿನಗಿಡದ ತಾಂಡ, ಪುರಾನಾಯಕ್ ಕಿರಿಯ ಪ್ರಾಥಮಿಕ ಶಾಲೆ ಕೊಡೇಕಲ್ ಆರ್ ಟಿ ಜೆ ಸೂಲ್ ಗಣೇಶ್ ಪಬ್ಲಿಕ್ ಸ್ಕೂಲ್ ಕೋಳಿಹಾಳ ಬಸವೇಶ್ವರ್ ಸ್ಕೂಲ್ ಮುದನೂರು, ಆರ್ಶೀವಾದ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹುಣಸಗಿ ವಿದ್ಯಾ ವಿಕಾಸ ಶಾಲೆ ಎಲ್ ಪಿ ಎಸ್ ಕುಪ್ಪಿ ಕ್ರಾಸ್ ಹುಣಸಗಿ, ರಾಮಲಿಂಗೇಶ್ವರ ಹಿರಿಯ ಪ್ರಾಥಮಿಕ ಶಾಲೆ ಗುಳಬಾಳ, ಕನಕದಾಸ ಕಿರಿಯ ಪ್ರಾಥಮಿಕ ಶಾಲೆ ಯಡಹಳ್ಳಿ, ರೇವಣಸಿದ್ದೇಶ್ವರ ಕಿರಿಯ ಪ್ರಾರ್ಥಮಿಕ ಶಾಲೆ ಯಡಹಳ್ಳಿ, ಶೆಟ್ಟಿ ಕಾಂಪಿಟೇಟಿವ್ ಸ್ಕೂಲ್ ಸುರಪುರ , ವಿದ್ಯಾ ವಿಕಾಸ್ ಸ್ಕೂಲ್ ಕೆಂಭಾವಿ, ಶ್ರೀ ಸಾಯಿ ಪಬ್ಲಿಕ್ ಸ್ಕೂಲ್ ಕೆಂಭಾವಿ, ಬ್ರಿಲಿಯಂಟ್ ಸ್ಕೂಲ್ ಕೆಂಭಾವಿ, ನಂದನ್ ಸ್ಕೂಲ್, ಕೆಂಭಾವಿ ಶ್ರೀ ವಿದ್ಯಾಲಕ್ಷ್ಮಿ ಪಬ್ಲಿಕ್ ಸ್ಕೂಲ್ ಕೆಂಭಾವಿ , ಹೋಲಿ ಫೇಥ ಸ್ಕೂಲ್ ಕೆಂಭಾವಿ.

ವರದಿಗಾರ : ಶಿವು ರಾಠೋಡ

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು