Take action against schools that start unlicensed residential schools: Prabhu Gowda B Pothareddy

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಹುಣಸಗಿ: ಸುರಪುರ ತಾಲೂಕಿನಾದ್ಯಂತ ವಸತಿಸಹಿತ ನಡೆಸುತ್ತಿರುವ ಖಾಸಗಿ ಶಾಲೆಗಳ ಮಾನ್ಯತೆಯನ್ನು ಹಿಂಪಡೆಯುವಂತೆ ಜಯ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ. ಬಿ. ಪೋತರೆಡ್ಡಿ ಆಗ್ರಹಿಸಿದ್ದಾರೆ.

ಸುರಪುರ ಮತ್ತು ಹುಣಸಗಿ ತಾಲೂಕಿನ ಖಾಸಗಿ ಶಾಲೆಗಳಲ್ಲಿ ಪರವಾನಿಗೆ ಇಲ್ಲದೇ ವಸತಿ ರಹಿತ ಶಾಲೆಗಳನ್ನು ಪ್ರಾರಂಭಿಸಿರುವ ಶಾಲೆಯ ಆಡಳಿತ ಮಂಡಳಿಗಳ ಹಗಲು ದರೋಡೆ ವಿರುದ್ಧ ಧ್ವನಿಯತ್ತಿರುವ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ. ಬಿ. ಪೋತರೆಡ್ಡಿ ಈ ವಿಷಯ ಕುರಿತು ಕ್ಷೇತ್ರಶಿಕ್ಷಣ ಇಲಾಖೆಯ ಅಧಿಕಾರಿಗೆ ಮನವಿ ನೀಡಿದ್ದಾರೆ.

ಈ ವಿಷಯದ ಬಗ್ಗೆ ಮಾತನಾಡಿದ ಅವರು ಸುರಪುರ ಮತ್ತು ಹುಣಸಗಿ ತಾಲೂಕಿನಾಧ್ಯಂತ ಕಾನೂನು ಬಾಹಿರವಾಗಿ ಸರಕಾರದಿಂದ ಯಾವುದೇ ರೀತಿಯಾಗಿ ಪರವಾನಿಗೆ ಪಡೆಯದೆ ವಸತಿ ಸಹಿತಿ ಖಾಸಗಿ ಶಾಲೆಗಳಲ್ಲಿ ಪಾಲಕರಿಂದ ಹೆಚ್ಚಿನ ಶುಲ್ಕ ವಸುಲಿಗೆ ಇಳಿದಿವೆ. ಈ ಕುರಿತು ಹಲವು ಬಾರಿ ಪೋಷಕರು ನನ್ನ ಗಮನಕ್ಕೆ ತಂದಿದ್ದು, ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯನ್ನು ನೀಡಿದ್ದು , ಅಲ್ಲದೇ ಕಳೆದ ಕೆಲವು ತಿಂಗಳುಗಳ ಹಿಂದೆ ಪರವಾನಿಗೆ ಇಲ್ಲದೇ ವಸತಿ ಸಹಿತ ಶಾಲೆಯನ್ನು ನಡೆಸುತ್ತಿದ್ದ ಶ್ರೀ ಖಾಸ್ಗತೇಶ್ವರ ಪ್ರೌಢ ಶಾಲೆ ಹುಣಸಗಿ ಶಾಲೆಗೆ ಭೇಟಿ ನೀಡಿದ್ದ ಶಿಕ್ಷಣ ಇಲಾಖೆಯ ತಂಡ ಆ ಶಾಲೆಯ ಪರವಾನಿಗೆಯನ್ನು ರದ್ದು ಮಾಡಿದೆ. ಅದೇ ರೀತಿಯಾಗಿ ಇನ್ನೂ ಕೂಡ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಹಲವು
ಶಾಲೆಗಳು ಪರವಾನಿಗೆ ಇಲ್ಲದೇ ವಸತಿ ಸಹಿತ ಖಾಸಗಿ ಶಾಲೆಗಳನ್ನು ನಡೆಸುತ್ತಿದ್ದು, ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ ಶಿಸ್ತು ಕ್ರಮ ಜರುಗಿಸುವಲ್ಲಿ ಶಾಲಾ ಆಡಳಿತ ಮಂಡಳಿಯವರ ಆಮೀಷಕ್ಕೆ ಬಲಿಯಾಗದೆ ಮತ್ತು ಮಲತಾಯಿ ಧೋರಣೆಯನ್ನು ಅನುಸರಿಸದೇ ಕ್ರಮ ವಹಿಸಬೇಕೇಂದು ಆಗ್ರಹಿಸಿದ್ದರೆ. ಇಲ್ಲವಾದಲ್ಲಿ ಬಡ ಪೋಷಕರಿಂದ ಹೆಚ್ಚಿನ ಶುಲ್ಕಗಳನ್ನು ಪಡೆಯುತ್ತಿರುವ ಶಾಲೆಗಳ ವಿರುದ್ಧ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.

ಮುಂತಾದ ಶಾಲೆಗಳು ಶಿಕ್ಷಣ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಕಾನೂನುಬಾಹಿರವಾಗಿ ವಸತಿ ಸಹಿತ ಶಿಕ್ಷಣ ಆರಂಭಿಸಿದ್ದರೆಂದು ಅವರು ಆರೋಪಿಸಿದ್ದಾರೆ.

ಜೀನಿಯಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಾವಿನಗಿಡದ ತಾಂಡ, ಪುರಾನಾಯಕ್ ಕಿರಿಯ ಪ್ರಾಥಮಿಕ ಶಾಲೆ ಕೊಡೇಕಲ್ ಆರ್ ಟಿ ಜೆ ಸೂಲ್ ಗಣೇಶ್ ಪಬ್ಲಿಕ್ ಸ್ಕೂಲ್ ಕೋಳಿಹಾಳ ಬಸವೇಶ್ವರ್ ಸ್ಕೂಲ್ ಮುದನೂರು, ಆರ್ಶೀವಾದ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹುಣಸಗಿ ವಿದ್ಯಾ ವಿಕಾಸ ಶಾಲೆ ಎಲ್ ಪಿ ಎಸ್ ಕುಪ್ಪಿ ಕ್ರಾಸ್ ಹುಣಸಗಿ, ರಾಮಲಿಂಗೇಶ್ವರ ಹಿರಿಯ ಪ್ರಾಥಮಿಕ ಶಾಲೆ ಗುಳಬಾಳ, ಕನಕದಾಸ ಕಿರಿಯ ಪ್ರಾಥಮಿಕ ಶಾಲೆ ಯಡಹಳ್ಳಿ, ರೇವಣಸಿದ್ದೇಶ್ವರ ಕಿರಿಯ ಪ್ರಾರ್ಥಮಿಕ ಶಾಲೆ ಯಡಹಳ್ಳಿ, ಶೆಟ್ಟಿ ಕಾಂಪಿಟೇಟಿವ್ ಸ್ಕೂಲ್ ಸುರಪುರ , ವಿದ್ಯಾ ವಿಕಾಸ್ ಸ್ಕೂಲ್ ಕೆಂಭಾವಿ, ಶ್ರೀ ಸಾಯಿ ಪಬ್ಲಿಕ್ ಸ್ಕೂಲ್ ಕೆಂಭಾವಿ, ಬ್ರಿಲಿಯಂಟ್ ಸ್ಕೂಲ್ ಕೆಂಭಾವಿ, ನಂದನ್ ಸ್ಕೂಲ್, ಕೆಂಭಾವಿ ಶ್ರೀ ವಿದ್ಯಾಲಕ್ಷ್ಮಿ ಪಬ್ಲಿಕ್ ಸ್ಕೂಲ್ ಕೆಂಭಾವಿ , ಹೋಲಿ ಫೇಥ ಸ್ಕೂಲ್ ಕೆಂಭಾವಿ.

ವರದಿಗಾರ : ಶಿವು ರಾಠೋಡ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ