Take action against schools that start unlicensed residential schools: Prabhu Gowda B Pothareddy

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಹುಣಸಗಿ: ಸುರಪುರ ತಾಲೂಕಿನಾದ್ಯಂತ ವಸತಿಸಹಿತ ನಡೆಸುತ್ತಿರುವ ಖಾಸಗಿ ಶಾಲೆಗಳ ಮಾನ್ಯತೆಯನ್ನು ಹಿಂಪಡೆಯುವಂತೆ ಜಯ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ. ಬಿ. ಪೋತರೆಡ್ಡಿ ಆಗ್ರಹಿಸಿದ್ದಾರೆ.

ಸುರಪುರ ಮತ್ತು ಹುಣಸಗಿ ತಾಲೂಕಿನ ಖಾಸಗಿ ಶಾಲೆಗಳಲ್ಲಿ ಪರವಾನಿಗೆ ಇಲ್ಲದೇ ವಸತಿ ರಹಿತ ಶಾಲೆಗಳನ್ನು ಪ್ರಾರಂಭಿಸಿರುವ ಶಾಲೆಯ ಆಡಳಿತ ಮಂಡಳಿಗಳ ಹಗಲು ದರೋಡೆ ವಿರುದ್ಧ ಧ್ವನಿಯತ್ತಿರುವ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ. ಬಿ. ಪೋತರೆಡ್ಡಿ ಈ ವಿಷಯ ಕುರಿತು ಕ್ಷೇತ್ರಶಿಕ್ಷಣ ಇಲಾಖೆಯ ಅಧಿಕಾರಿಗೆ ಮನವಿ ನೀಡಿದ್ದಾರೆ.

ಈ ವಿಷಯದ ಬಗ್ಗೆ ಮಾತನಾಡಿದ ಅವರು ಸುರಪುರ ಮತ್ತು ಹುಣಸಗಿ ತಾಲೂಕಿನಾಧ್ಯಂತ ಕಾನೂನು ಬಾಹಿರವಾಗಿ ಸರಕಾರದಿಂದ ಯಾವುದೇ ರೀತಿಯಾಗಿ ಪರವಾನಿಗೆ ಪಡೆಯದೆ ವಸತಿ ಸಹಿತಿ ಖಾಸಗಿ ಶಾಲೆಗಳಲ್ಲಿ ಪಾಲಕರಿಂದ ಹೆಚ್ಚಿನ ಶುಲ್ಕ ವಸುಲಿಗೆ ಇಳಿದಿವೆ. ಈ ಕುರಿತು ಹಲವು ಬಾರಿ ಪೋಷಕರು ನನ್ನ ಗಮನಕ್ಕೆ ತಂದಿದ್ದು, ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯನ್ನು ನೀಡಿದ್ದು , ಅಲ್ಲದೇ ಕಳೆದ ಕೆಲವು ತಿಂಗಳುಗಳ ಹಿಂದೆ ಪರವಾನಿಗೆ ಇಲ್ಲದೇ ವಸತಿ ಸಹಿತ ಶಾಲೆಯನ್ನು ನಡೆಸುತ್ತಿದ್ದ ಶ್ರೀ ಖಾಸ್ಗತೇಶ್ವರ ಪ್ರೌಢ ಶಾಲೆ ಹುಣಸಗಿ ಶಾಲೆಗೆ ಭೇಟಿ ನೀಡಿದ್ದ ಶಿಕ್ಷಣ ಇಲಾಖೆಯ ತಂಡ ಆ ಶಾಲೆಯ ಪರವಾನಿಗೆಯನ್ನು ರದ್ದು ಮಾಡಿದೆ. ಅದೇ ರೀತಿಯಾಗಿ ಇನ್ನೂ ಕೂಡ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಹಲವು
ಶಾಲೆಗಳು ಪರವಾನಿಗೆ ಇಲ್ಲದೇ ವಸತಿ ಸಹಿತ ಖಾಸಗಿ ಶಾಲೆಗಳನ್ನು ನಡೆಸುತ್ತಿದ್ದು, ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ ಶಿಸ್ತು ಕ್ರಮ ಜರುಗಿಸುವಲ್ಲಿ ಶಾಲಾ ಆಡಳಿತ ಮಂಡಳಿಯವರ ಆಮೀಷಕ್ಕೆ ಬಲಿಯಾಗದೆ ಮತ್ತು ಮಲತಾಯಿ ಧೋರಣೆಯನ್ನು ಅನುಸರಿಸದೇ ಕ್ರಮ ವಹಿಸಬೇಕೇಂದು ಆಗ್ರಹಿಸಿದ್ದರೆ. ಇಲ್ಲವಾದಲ್ಲಿ ಬಡ ಪೋಷಕರಿಂದ ಹೆಚ್ಚಿನ ಶುಲ್ಕಗಳನ್ನು ಪಡೆಯುತ್ತಿರುವ ಶಾಲೆಗಳ ವಿರುದ್ಧ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.

ಮುಂತಾದ ಶಾಲೆಗಳು ಶಿಕ್ಷಣ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಕಾನೂನುಬಾಹಿರವಾಗಿ ವಸತಿ ಸಹಿತ ಶಿಕ್ಷಣ ಆರಂಭಿಸಿದ್ದರೆಂದು ಅವರು ಆರೋಪಿಸಿದ್ದಾರೆ.

ಜೀನಿಯಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಾವಿನಗಿಡದ ತಾಂಡ, ಪುರಾನಾಯಕ್ ಕಿರಿಯ ಪ್ರಾಥಮಿಕ ಶಾಲೆ ಕೊಡೇಕಲ್ ಆರ್ ಟಿ ಜೆ ಸೂಲ್ ಗಣೇಶ್ ಪಬ್ಲಿಕ್ ಸ್ಕೂಲ್ ಕೋಳಿಹಾಳ ಬಸವೇಶ್ವರ್ ಸ್ಕೂಲ್ ಮುದನೂರು, ಆರ್ಶೀವಾದ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹುಣಸಗಿ ವಿದ್ಯಾ ವಿಕಾಸ ಶಾಲೆ ಎಲ್ ಪಿ ಎಸ್ ಕುಪ್ಪಿ ಕ್ರಾಸ್ ಹುಣಸಗಿ, ರಾಮಲಿಂಗೇಶ್ವರ ಹಿರಿಯ ಪ್ರಾಥಮಿಕ ಶಾಲೆ ಗುಳಬಾಳ, ಕನಕದಾಸ ಕಿರಿಯ ಪ್ರಾಥಮಿಕ ಶಾಲೆ ಯಡಹಳ್ಳಿ, ರೇವಣಸಿದ್ದೇಶ್ವರ ಕಿರಿಯ ಪ್ರಾರ್ಥಮಿಕ ಶಾಲೆ ಯಡಹಳ್ಳಿ, ಶೆಟ್ಟಿ ಕಾಂಪಿಟೇಟಿವ್ ಸ್ಕೂಲ್ ಸುರಪುರ , ವಿದ್ಯಾ ವಿಕಾಸ್ ಸ್ಕೂಲ್ ಕೆಂಭಾವಿ, ಶ್ರೀ ಸಾಯಿ ಪಬ್ಲಿಕ್ ಸ್ಕೂಲ್ ಕೆಂಭಾವಿ, ಬ್ರಿಲಿಯಂಟ್ ಸ್ಕೂಲ್ ಕೆಂಭಾವಿ, ನಂದನ್ ಸ್ಕೂಲ್, ಕೆಂಭಾವಿ ಶ್ರೀ ವಿದ್ಯಾಲಕ್ಷ್ಮಿ ಪಬ್ಲಿಕ್ ಸ್ಕೂಲ್ ಕೆಂಭಾವಿ , ಹೋಲಿ ಫೇಥ ಸ್ಕೂಲ್ ಕೆಂಭಾವಿ.

ವರದಿಗಾರ : ಶಿವು ರಾಠೋಡ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ