Take action against schools that start unlicensed residential schools: Prabhu Gowda B Pothareddy

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಹುಣಸಗಿ: ಸುರಪುರ ತಾಲೂಕಿನಾದ್ಯಂತ ವಸತಿಸಹಿತ ನಡೆಸುತ್ತಿರುವ ಖಾಸಗಿ ಶಾಲೆಗಳ ಮಾನ್ಯತೆಯನ್ನು ಹಿಂಪಡೆಯುವಂತೆ ಜಯ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ. ಬಿ. ಪೋತರೆಡ್ಡಿ ಆಗ್ರಹಿಸಿದ್ದಾರೆ.

ಸುರಪುರ ಮತ್ತು ಹುಣಸಗಿ ತಾಲೂಕಿನ ಖಾಸಗಿ ಶಾಲೆಗಳಲ್ಲಿ ಪರವಾನಿಗೆ ಇಲ್ಲದೇ ವಸತಿ ರಹಿತ ಶಾಲೆಗಳನ್ನು ಪ್ರಾರಂಭಿಸಿರುವ ಶಾಲೆಯ ಆಡಳಿತ ಮಂಡಳಿಗಳ ಹಗಲು ದರೋಡೆ ವಿರುದ್ಧ ಧ್ವನಿಯತ್ತಿರುವ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ. ಬಿ. ಪೋತರೆಡ್ಡಿ ಈ ವಿಷಯ ಕುರಿತು ಕ್ಷೇತ್ರಶಿಕ್ಷಣ ಇಲಾಖೆಯ ಅಧಿಕಾರಿಗೆ ಮನವಿ ನೀಡಿದ್ದಾರೆ.

ಈ ವಿಷಯದ ಬಗ್ಗೆ ಮಾತನಾಡಿದ ಅವರು ಸುರಪುರ ಮತ್ತು ಹುಣಸಗಿ ತಾಲೂಕಿನಾಧ್ಯಂತ ಕಾನೂನು ಬಾಹಿರವಾಗಿ ಸರಕಾರದಿಂದ ಯಾವುದೇ ರೀತಿಯಾಗಿ ಪರವಾನಿಗೆ ಪಡೆಯದೆ ವಸತಿ ಸಹಿತಿ ಖಾಸಗಿ ಶಾಲೆಗಳಲ್ಲಿ ಪಾಲಕರಿಂದ ಹೆಚ್ಚಿನ ಶುಲ್ಕ ವಸುಲಿಗೆ ಇಳಿದಿವೆ. ಈ ಕುರಿತು ಹಲವು ಬಾರಿ ಪೋಷಕರು ನನ್ನ ಗಮನಕ್ಕೆ ತಂದಿದ್ದು, ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯನ್ನು ನೀಡಿದ್ದು , ಅಲ್ಲದೇ ಕಳೆದ ಕೆಲವು ತಿಂಗಳುಗಳ ಹಿಂದೆ ಪರವಾನಿಗೆ ಇಲ್ಲದೇ ವಸತಿ ಸಹಿತ ಶಾಲೆಯನ್ನು ನಡೆಸುತ್ತಿದ್ದ ಶ್ರೀ ಖಾಸ್ಗತೇಶ್ವರ ಪ್ರೌಢ ಶಾಲೆ ಹುಣಸಗಿ ಶಾಲೆಗೆ ಭೇಟಿ ನೀಡಿದ್ದ ಶಿಕ್ಷಣ ಇಲಾಖೆಯ ತಂಡ ಆ ಶಾಲೆಯ ಪರವಾನಿಗೆಯನ್ನು ರದ್ದು ಮಾಡಿದೆ. ಅದೇ ರೀತಿಯಾಗಿ ಇನ್ನೂ ಕೂಡ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಹಲವು
ಶಾಲೆಗಳು ಪರವಾನಿಗೆ ಇಲ್ಲದೇ ವಸತಿ ಸಹಿತ ಖಾಸಗಿ ಶಾಲೆಗಳನ್ನು ನಡೆಸುತ್ತಿದ್ದು, ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ ಶಿಸ್ತು ಕ್ರಮ ಜರುಗಿಸುವಲ್ಲಿ ಶಾಲಾ ಆಡಳಿತ ಮಂಡಳಿಯವರ ಆಮೀಷಕ್ಕೆ ಬಲಿಯಾಗದೆ ಮತ್ತು ಮಲತಾಯಿ ಧೋರಣೆಯನ್ನು ಅನುಸರಿಸದೇ ಕ್ರಮ ವಹಿಸಬೇಕೇಂದು ಆಗ್ರಹಿಸಿದ್ದರೆ. ಇಲ್ಲವಾದಲ್ಲಿ ಬಡ ಪೋಷಕರಿಂದ ಹೆಚ್ಚಿನ ಶುಲ್ಕಗಳನ್ನು ಪಡೆಯುತ್ತಿರುವ ಶಾಲೆಗಳ ವಿರುದ್ಧ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.

ಮುಂತಾದ ಶಾಲೆಗಳು ಶಿಕ್ಷಣ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಕಾನೂನುಬಾಹಿರವಾಗಿ ವಸತಿ ಸಹಿತ ಶಿಕ್ಷಣ ಆರಂಭಿಸಿದ್ದರೆಂದು ಅವರು ಆರೋಪಿಸಿದ್ದಾರೆ.

ಜೀನಿಯಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಾವಿನಗಿಡದ ತಾಂಡ, ಪುರಾನಾಯಕ್ ಕಿರಿಯ ಪ್ರಾಥಮಿಕ ಶಾಲೆ ಕೊಡೇಕಲ್ ಆರ್ ಟಿ ಜೆ ಸೂಲ್ ಗಣೇಶ್ ಪಬ್ಲಿಕ್ ಸ್ಕೂಲ್ ಕೋಳಿಹಾಳ ಬಸವೇಶ್ವರ್ ಸ್ಕೂಲ್ ಮುದನೂರು, ಆರ್ಶೀವಾದ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹುಣಸಗಿ ವಿದ್ಯಾ ವಿಕಾಸ ಶಾಲೆ ಎಲ್ ಪಿ ಎಸ್ ಕುಪ್ಪಿ ಕ್ರಾಸ್ ಹುಣಸಗಿ, ರಾಮಲಿಂಗೇಶ್ವರ ಹಿರಿಯ ಪ್ರಾಥಮಿಕ ಶಾಲೆ ಗುಳಬಾಳ, ಕನಕದಾಸ ಕಿರಿಯ ಪ್ರಾಥಮಿಕ ಶಾಲೆ ಯಡಹಳ್ಳಿ, ರೇವಣಸಿದ್ದೇಶ್ವರ ಕಿರಿಯ ಪ್ರಾರ್ಥಮಿಕ ಶಾಲೆ ಯಡಹಳ್ಳಿ, ಶೆಟ್ಟಿ ಕಾಂಪಿಟೇಟಿವ್ ಸ್ಕೂಲ್ ಸುರಪುರ , ವಿದ್ಯಾ ವಿಕಾಸ್ ಸ್ಕೂಲ್ ಕೆಂಭಾವಿ, ಶ್ರೀ ಸಾಯಿ ಪಬ್ಲಿಕ್ ಸ್ಕೂಲ್ ಕೆಂಭಾವಿ, ಬ್ರಿಲಿಯಂಟ್ ಸ್ಕೂಲ್ ಕೆಂಭಾವಿ, ನಂದನ್ ಸ್ಕೂಲ್, ಕೆಂಭಾವಿ ಶ್ರೀ ವಿದ್ಯಾಲಕ್ಷ್ಮಿ ಪಬ್ಲಿಕ್ ಸ್ಕೂಲ್ ಕೆಂಭಾವಿ , ಹೋಲಿ ಫೇಥ ಸ್ಕೂಲ್ ಕೆಂಭಾವಿ.

ವರದಿಗಾರ : ಶಿವು ರಾಠೋಡ

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್