ಸರ್ಕಾರಿ ಬಿಎಡ್ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳಿ

ಸರ್ಕಾರಿ ಬಿಎಡ್ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳಿ

ಮುದ್ದೇಬಿಹಾಳ : ತಾಲೂಕಿನಾದ್ಯಂತ ಪಿಯುಸಿ ಮತ್ತು ಪದವಿ ಕಾಲೇಜುಗಳ ಸಂಖ್ಯೆ ಸಾಕಷ್ಟು ಇದ್ದು ತಾಲ್ಲೂಕಿನಲ್ಲಿ ಸರ್ಕಾರಿ ಬಿಎಡ್ ಕಾಲೇಜು ಸ್ಥಾಪನೆಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಮುತ್ತು ಚಲವಾದಿ ಮಾತನಾಡಿ, ಪ್ರತಿ ವರ್ಷ ಇಲ್ಲಿಂದ ಸಾವಿರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು, ಪದವೀಧರರಾಗಿ ಹೊರಗೆ ಬರುತ್ತಿದ್ದಾರೆ. ವಿವಿಧ ಪದವಿಗಳನ್ನು ಪಡೆದ ವಿದ್ಯಾರ್ಥಿಗಳು ಹೈಸ್ಕೂಲು ಮತ್ತು ಕಾಲೇಜುಗಳಲ್ಲಿ ಶಿಕ್ಷಕರಾಗಲು ಬಯಸಿದರೆ ಅವರಿಗೆ ತಮ್ಮ ಪದವಿಯ ನಂತರದಲ್ಲಿ ಬಿ.ಎಡ್ ಶಿಕ್ಷಣವನ್ನು ಪಡೆಯಲೇಬೇಕು. ಖಾಸಗಿ ಶಿಕ್ಷಣ ಸಂಸ್ಥೆಯೊAದರ ಅಡಿಯಲ್ಲಿ ಬಿ.ಎಡ್ ಕಾಲೇಜು ಇದ್ದರೂ ಅಲ್ಲಿ ವಿಪರೀತ ಶುಲ್ಕವನ್ನು ಕಟ್ಟಿ ಪ್ರವೇಶ ಪಡೆಯಲು ಬಡ ವಿದ್ಯಾರ್ಥಿಗಳಿಗೆ ಅಸಾಧ್ಯವಾಗಿದೆ ಎಂದು ಹೇಳಿದರು.

ಇಷ್ಟೊಂದು ಪ್ರಮಾಣದಲ್ಲಿ ಪದವಿ ಕಾಲೇಜುಗಳಿದ್ದರೂ ಪದವಿ ನಂತರದ ಶಿಕ್ಷಣ ಸೌಲಭ್ಯ ಇಲ್ಲದ್ದರಿಂದ ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಅರ್ಧಕ್ಕೆ ತಮ್ಮ ಶಿಕ್ಷಣವನ್ನು ನಿಲ್ಲಿಸುತ್ತಿದ್ದಾರೆ.ಶಿಕ್ಷಕರಾಗುವ ಕನಸಿಗೆ ಇದು ಅಡ್ಡಿಯುಂಟಾಗಿದ್ದು ಚಳಿಗಾಲದ ಅಧಿವೇಶನದಲ್ಲಿ ಮುದ್ದೇಬಿಹಾಳಕ್ಕೆ ಸರಕಾರಿ ಬಿ.ಎಡ್ ಕಾಲೇಜು ಮಂಜೂರು ಮಾಡಿಸಿ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅನುಕೂಲ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಸಮಯದಲ್ಲಿ ವಿದ್ಯಾರ್ಥಿಗಳಾದ ಬಸವರಾಜ ಮಹಾಲಿಂಗಪೂರ, ಅನಿಲ ರಾಠೋಡ, ಬಸಮ್ಮ ಬಿರಾದಾರ, ಸಂಗಮ್ಮ ನಾಟೀಕಾರ, ಸಹನಾ ಕಲಾಲ, ಅನಿಸ ಮೋಮಿನ, ದ್ಯಾಮಕ್ಕ ವಾಲೀಕಾರ, ಭಾಗ್ಯಶ್ರೀ ಬಿರಾದಾರ, ರಾಧಿಕಾ ಮಾಡಗಿ, ಪ್ರಜ್ವಲ ಪಾಟೀಲ್ , ಶ್ರಾವಣಿ ಬಡಿಗೇರ, ಅರ್ಪಿತಾ ಮುಚಖಂಡಿ ಸೇರಿದಂತೆ ಇನ್ನಿತರ ಸಮುದಾಯಗಳ ವಿದ್ಯಾರ್ಥಿಗಳು ಇದ್ದರು.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.