ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಆಯೋಜನೆ: ನಾಳೆ ಬಾಗಲಕೋಟೆಯಲ್ಲಿ ಟ್ಯಾಲೆಂಟ್ ಸರ್ಚ್ ಎಕ್ಸಾಂ

ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಆಯೋಜನೆ: ನಾಳೆ ಬಾಗಲಕೋಟೆಯಲ್ಲಿ ಟ್ಯಾಲೆಂಟ್ ಸರ್ಚ್ ಎಕ್ಸಾಂ

ಮುದ್ದೇಬಿಹಾಳ : ಇಲ್ಲಿಗೆ ಸಮೀಪದ ನಾಗರಬೆಟ್ಟದ ಗುಡ್ಡದ ಹತ್ತಿರ ಇರುವ ಆಕ್ಸ್ಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸ್ಫರ್ಡ್ ಪಾಟೀಲ್ಸ್ ಸೈನ್ಸ್ ಪಿಯು ಕಾಲೇಜು ವತಿಯಿಂದ ಫೆ.8ರಂದು ಮಧ್ಯಾಹ್ನ 12ಕ್ಕೆ

ಬಾಗಲಕೋಟೆ ನವನಗರದ ಕಾಳಿದಾಸ ವೃತ್ತದ ಹತ್ತಿರ ಇರುವ ಕಾಳಿದಾಸ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಮೊದಲ ಬಾರಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ‘ಆಕ್ಸ್ಫರ್ಡ್ ಪಾಟೀಲ್ಸ್ ಟ್ಯಾಲೆಂಟ್ ಸರ್ಚ್ ಎಕ್ಸಾಮ್-2026’ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಆಡಳಿತಾಧಿಕಾರಿ ಅಮಿತಗೌಡ ಎಂ.ಪಾಟೀಲ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಪಠ್ಯಕ್ರಮ,ಐಸಿಎಸ್‌ಇ, ಸಿಬಿಎಸ್‌ಇ ಪಠ್ಯಕ್ರಮದಲ್ಲಿ ಓದುತ್ತಿರುವ ಕನ್ನಡ ಮತ್ತು ಆಂಗ್ಲ ಮಾಧ್ಯಮದವರಿಗೆ ಈ ಸ್ಪರ್ಧಾಪರೀಕ್ಷೆ ನಡೆಯುತ್ತದೆ. ವಿಜೇತರಿಗೆ ಪ್ರಥಮ 75,000 ರೂ., ದ್ವಿತೀಯ 50,000 ರೂ., ತೃತೀಯ 30,000 .ನಾಲ್ಕನೇ ಬಹುಮಾನ 15,000, ಐದನೇ ಬಹುಮಾನ 10,000 ,ಆರನೇ ಬಹುಮಾನ 5,000 ರೂ. ಬಹುಮಾನ ನೀಡಲಾಗುತ್ತದೆ. ಇದಲ್ಲದೆ 1-6 ಸ್ಥಾನಗಳ ನಂತರ ಹೆಚ್ಚು ಅಂಕ ಗಳಿಸುವ ಮೊದಲ 10 ವಿದ್ಯಾರ್ಥಿಗಳಿಗೆ ತಲಾ 1000 ರೂ. ಸಮಾಧಾನಕರ ಬಹುಮಾನ ನೀಡಲಾಗುತ್ತದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಶಾಲೆಯ ಐಡಿ ಕಾರ್ಡ್ ಅಥವಾ ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು. ಆಸಕ್ತರು ತಮ್ಮ ಹೆಸರು ನೋಂದಾಯಿಸಲು ವಿದ್ಯಾರ್ಥಿ ಹೆಸರು- ತರಗತಿ-ಶಾಲೆ-ವಿಳಾಸ-ಮೊಬೈಲ್ ನಂಬರ್ ಮಾಹಿತಿ ಎಸ್‌ಎಂಎಸ್ ಸಂದೇಶದ ಮೂಲಕ ಮೊ.9380095756 , 7483147040, 8310035858, 8971769144 ಸಂಖ್ಯೆ ಸಂಪರ್ಕಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಪರೀಕ್ಷೆ ದಿನದಂದೇ ವಿದ್ಯಾರ್ಥಿಗಳು ನೇರವಾಗಿ ಪರೀಕ್ಷಾ ಸ್ಥಳಕ್ಕೆ ಬಂದು ಹೆಸರು ನೋಂದಾಯಿಸಲು ಅವಕಾಶವಿದೆ. ಅಂದು ಬೆಳಗ್ಗೆ 10 ಗಂಟೆಗೂ ಮುನ್ನ ಪರೀಕ್ಷಾ ಸ್ಥಳಕ್ಕೆ ಆಗಮಿಸಬೇಕು ಎಂದು ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನ ಶಾಖೆ : ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್ ಪದವಿ ಪೂರ್ವ ವಿಜ್ಞಾನ ಕಾಲೇಜಿನ ನೂತನ ಶಾಖೆಯನ್ನು ಬಾಗಲಕೋಟೆ ನಗರದಲ್ಲಿ ಶೀಘ್ರದಲ್ಲಿ ಆರಂಭಿಸಲಾಗುವುದು ಎಂದು ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ತಿಳಿಸಿದ್ದಾರೆ.

Latest News

Il Aumento dei Siti di Casinò Crypto Mobili: Una Nuova Età nel Gioco Online

In tempi recenti, il panorama digitale ha assistito modifiche estese, in

ವಿಜ್ಞಾನ ಶಿಕ್ಷಕಿ ಸಂಧ್ಯಾಗೆ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ

ವಿಜ್ಞಾನ ಶಿಕ್ಷಕಿ ಸಂಧ್ಯಾಗೆ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ

ಮುದ್ದೇಬಿಹಾಳ : ಕರ್ನಾಟಕ ಜ್ಞಾನ ವಿಜ್ಞಾನ ಸಮೀತಿ ವಿಜಯಪುರ ಜಿಲ್ಲಾ ಘಟಕದಿಂದ ಕೊಡಮಾಡುವ ರಾಜ್ಯಮಟ್ಟದ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ

ನವಜೀವನೋತ್ಸವ ಕಾರ್ಯಕ್ರಮ:                                    ಕುಡಿತ ಬಿಟ್ಟವರು ಮತ್ತೆ ಅದರತ್ತ ಹೊರಳಬೇಡಿ – ಮೋಹನ್‌ನಾಯ್ಕ

ನವಜೀವನೋತ್ಸವ ಕಾರ್ಯಕ್ರಮ: ಕುಡಿತ ಬಿಟ್ಟವರು ಮತ್ತೆ ಅದರತ್ತ ಹೊರಳಬೇಡಿ – ಮೋಹನ್‌ನಾಯ್ಕ

ಮುದ್ದೇಬಿಹಾಳ : ಯಾವುದೋ ಕಾರಣದಿಂದಾಗ ಕುಡಿತದ ದಾಸರಾಗಿದ್ದುಕೊಂಡು ಮನ,ಮನೆಯ ಸ್ಥಿತಿಯನ್ನು ಹಾಳುಮಾಡಿಕೊಂಡಿದ್ದವರು ಮದ್ಯವರ್ಜನ ಶಿಬಿರದ ಮೂಲಕ ಸುಧಾರಣೆ ಕಂಡಿದ್ದೀರಿ.ಇದೀಗ ನವಜೀವನ ಸಮೀತಿಯ ಸದಸ್ಯರಾಗಿದ್ದೀರಿ.ಪಾನಮುಕ್ತರು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮುಖ್ಯಸ್ಥರಾದ ಡಾ.ವೀರೇಂದ್ರ ಹೆಗ್ಗಡೆ ಅವರು ಪ್ರಮಾಣ ಪತ್ರಗಳನ್ನು ನಿಮಗೆ ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮೋಹನ್ ನಾಯ್ಕ ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನವಜೀವನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮತ್ತೆ ಕುಡಿತಕ್ಕೆ

ಪ್ರೊ.ರವಿ ಕಟ್ಟಿಮನಿ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಫುಲೆ ಪ್ರಶಸ್ತಿ

ಪ್ರೊ.ರವಿ ಕಟ್ಟಿಮನಿ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಫುಲೆ ಪ್ರಶಸ್ತಿ

ಮುದ್ದೇಬಿಹಾಳ : ಕರ್ನಾಟಕ ಜ್ಞಾನ ವಿಜ್ಞಾನ ಪರಿಷತ್ತು (ರಿ)ಬೆಂಗಳೂರು ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಕೊಡಮಾಡುವ ಶಿಕ್ಷಕರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಗೆ ಹಡಲಗೇರಿಯ ವಸತಿಯುಕ್ತ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ರವಿ ಕಟ್ಟಿಮನಿ ಆಯ್ಕೆಯಾಗಿದ್ದಾರೆ. ವಿಜಯಪುರ ಜಿಲ್ಲೆ ತಿಡಗುಂದಿಯ ಕಾಯಕಯೋಗಿ ರಾಮಾಯಣ ಶಿಕ್ಷಣ ಸಂಸ್ಥೆಯ ಮಾನಸ ಗಂಗೋತ್ರಿ ವಸತಿ ಶಾಲೆಯಲ್ಲಿ ಫೆ.8 ರಂದು ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ