Muddebihal: TAPCMS administration again to Manohar Matei 'Kai'

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ.

ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ.ಸೀತಿಮನಿ ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ ಆಯ್ಕೆ ಘೋಷಣೆ ಮಾಡಿದರು.ಅಧ್ಯಕ್ಷ ಸ್ಥಾನಕ್ಕೆ ಮುತ್ತಣ್ಣ ಮುತ್ತಣ್ಣವರ ಸೂಚಕರಾಗಿ, ನೀಲಕಂಠಗೌಡ ಗೌಡರ ಅನುಮೋದಕರಾಗಿ ಸಹಿ ಮಾಡಿದರು.ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಬಗಲಿ ಸೂಚಕರಾಗಿ,ಗುರಣ್ಣ ಹತ್ತೂರ ಅನುಮೋದಕರಾಗಿ ಸಹಿ ಮಾಡಿದರು.

ನಿರ್ದೇಶಕರಾದ ಬಸವರಾಜ ಇಸ್ಲಾಂಪೂರ,ಸುರೇಶ ಹಳೇಮನಿ, ಮಲ್ಲನಗೌಡ ಬಿರಾದಾರ,ಗುರುಲಿಂಗಪ್ಪ ಹಡ್ಲಗೇರಿ, ವನಮಾಲಾ ಮೇಟಿ, ಮಲ್ಲಮ್ಮ ಪಾಟೀಲ ಇದ್ದರು.

ಚುನಾವಣಾ ಕಾರ್ಯಕ್ಕೆ ಸಹಾಯಕ ಚುನಾವಣಾಧಿಕಾರಿ ಸಹಕಾರ ಇಲಾಖೆಯ ಅಧಿಕಾರಿ ಸಂತೋಷ ಇಲಕಲ್, ವ್ಯವಸ್ಥಾಪಕ ವಿ.ಎಸ್.ಉತ್ನಾಳ, ಸಹಾಯಕ ವ್ಯವಸ್ಥಾಪಕ ಗುರುರಾಜ ಕೋನರೆಡ್ಡಿ,ಸಿಬ್ಬಂದಿ ಎಂ.ಎA.ಪಾಟೀಲ,ಎಸ್.ಬಿ.ಚಿನಿವಾರ, ಸವಿತಾ ಚೌಧರಿ ಕಾರ್ಯನಿರ್ವಹಿಸಿದರು.

ರಹಸ್ಯ ಬಿಟ್ಟುಕೊಡದ ನಾಡಗೌಡ : ಟಿಎಪಿಸಿಎಂಎಸ್‌ನಲ್ಲಿ ಅಧಿಕಾರ ಹಂಚಿಕೆ ಸೂತ್ರವೇನಾದರೂ ನಡೆದಿದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕ ನಾಡಗೌಡರು, ಸದ್ಯಕ್ಕೆ ಅಧ್ಯಕ್ಷರಾಗಿ ಮೇಟಿ,ಉಪಾಧ್ಯಕ್ಷರಾಗಿ ಸೀತಿಮನಿ ಆಯ್ಕೆಯಾಗಿದ್ದಾರೆ. ಇವರು ಮುಂದುವರೆಯಲಿದ್ದಾರೆ.ಇವರು ಹೇಗೆ ಕೆಲಸ ಮಾಡಲಿದ್ದಾರೆ ಎಂಬುದನ್ನು ಗಮನಿಸುತ್ತೇವೆ.ಇದು ರಾಜಕಾರಣ, ಇಲ್ಲಿ ಏನು ನಡೆಯುತ್ತದೆ ಎಂದು ಹೇಳಲಾಗದು.ಒಪ್ಪಂದ ಸೂತ್ರದ ಕುರಿತು ಚರ್ಚೆ ನಡೆಸಿದ್ದೇವೆ.ಈಗಲೇ ಏನೂ ಹೇಳಲಾಗದು ಎಂದು ಅಧಿಕಾರ ಹಂಚಿಕೆ ಸೂತ್ರದ ರಹಸ್ಯವನ್ನು ನಾಡಗೌಡರು ಬಿಟ್ಟುಕೊಡಲಿಲ್ಲ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಮಾತನಾಡಿ, ಟಿಎಪಿಸಿಎಂಎಸ್‌ನಲ್ಲಿ ಶಾಸಕರ ನಿರ್ದೇಶನದಂತೆ ಕಾಂಗ್ರೆಸ್ ಪಕ್ಷದ ಬೆಂಬಲಿತರ ಕೈಗೆ ಅಧಿಕಾರ ಸಿಕ್ಕಿದೆ.ಮುಂಬರುವ ದಿನಗಳಲ್ಲಿ ರೈತರಿಗೆ ಅನುಕೂಲ ಒದಗಿಸುವ ಕಾರ್ಯ ಮಾಡಲಿ ಎಂದು ತಿಳಿಸಿದರು.ವಿಜಯೋತ್ಸವದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು,ಮೇಟಿ,ಸೀತಿಮನಿ ಅಭಿಮಾನಿಗಳು ಇದ್ದರು.

Latest News

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶೇ.90-95ಕ್ಕೂ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.