Muddebihal: TAPCMS administration again to Manohar Matei 'Kai'

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ.

ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ.ಸೀತಿಮನಿ ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ ಆಯ್ಕೆ ಘೋಷಣೆ ಮಾಡಿದರು.ಅಧ್ಯಕ್ಷ ಸ್ಥಾನಕ್ಕೆ ಮುತ್ತಣ್ಣ ಮುತ್ತಣ್ಣವರ ಸೂಚಕರಾಗಿ, ನೀಲಕಂಠಗೌಡ ಗೌಡರ ಅನುಮೋದಕರಾಗಿ ಸಹಿ ಮಾಡಿದರು.ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಬಗಲಿ ಸೂಚಕರಾಗಿ,ಗುರಣ್ಣ ಹತ್ತೂರ ಅನುಮೋದಕರಾಗಿ ಸಹಿ ಮಾಡಿದರು.

ನಿರ್ದೇಶಕರಾದ ಬಸವರಾಜ ಇಸ್ಲಾಂಪೂರ,ಸುರೇಶ ಹಳೇಮನಿ, ಮಲ್ಲನಗೌಡ ಬಿರಾದಾರ,ಗುರುಲಿಂಗಪ್ಪ ಹಡ್ಲಗೇರಿ, ವನಮಾಲಾ ಮೇಟಿ, ಮಲ್ಲಮ್ಮ ಪಾಟೀಲ ಇದ್ದರು.

ಚುನಾವಣಾ ಕಾರ್ಯಕ್ಕೆ ಸಹಾಯಕ ಚುನಾವಣಾಧಿಕಾರಿ ಸಹಕಾರ ಇಲಾಖೆಯ ಅಧಿಕಾರಿ ಸಂತೋಷ ಇಲಕಲ್, ವ್ಯವಸ್ಥಾಪಕ ವಿ.ಎಸ್.ಉತ್ನಾಳ, ಸಹಾಯಕ ವ್ಯವಸ್ಥಾಪಕ ಗುರುರಾಜ ಕೋನರೆಡ್ಡಿ,ಸಿಬ್ಬಂದಿ ಎಂ.ಎA.ಪಾಟೀಲ,ಎಸ್.ಬಿ.ಚಿನಿವಾರ, ಸವಿತಾ ಚೌಧರಿ ಕಾರ್ಯನಿರ್ವಹಿಸಿದರು.

ರಹಸ್ಯ ಬಿಟ್ಟುಕೊಡದ ನಾಡಗೌಡ : ಟಿಎಪಿಸಿಎಂಎಸ್‌ನಲ್ಲಿ ಅಧಿಕಾರ ಹಂಚಿಕೆ ಸೂತ್ರವೇನಾದರೂ ನಡೆದಿದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕ ನಾಡಗೌಡರು, ಸದ್ಯಕ್ಕೆ ಅಧ್ಯಕ್ಷರಾಗಿ ಮೇಟಿ,ಉಪಾಧ್ಯಕ್ಷರಾಗಿ ಸೀತಿಮನಿ ಆಯ್ಕೆಯಾಗಿದ್ದಾರೆ. ಇವರು ಮುಂದುವರೆಯಲಿದ್ದಾರೆ.ಇವರು ಹೇಗೆ ಕೆಲಸ ಮಾಡಲಿದ್ದಾರೆ ಎಂಬುದನ್ನು ಗಮನಿಸುತ್ತೇವೆ.ಇದು ರಾಜಕಾರಣ, ಇಲ್ಲಿ ಏನು ನಡೆಯುತ್ತದೆ ಎಂದು ಹೇಳಲಾಗದು.ಒಪ್ಪಂದ ಸೂತ್ರದ ಕುರಿತು ಚರ್ಚೆ ನಡೆಸಿದ್ದೇವೆ.ಈಗಲೇ ಏನೂ ಹೇಳಲಾಗದು ಎಂದು ಅಧಿಕಾರ ಹಂಚಿಕೆ ಸೂತ್ರದ ರಹಸ್ಯವನ್ನು ನಾಡಗೌಡರು ಬಿಟ್ಟುಕೊಡಲಿಲ್ಲ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಮಾತನಾಡಿ, ಟಿಎಪಿಸಿಎಂಎಸ್‌ನಲ್ಲಿ ಶಾಸಕರ ನಿರ್ದೇಶನದಂತೆ ಕಾಂಗ್ರೆಸ್ ಪಕ್ಷದ ಬೆಂಬಲಿತರ ಕೈಗೆ ಅಧಿಕಾರ ಸಿಕ್ಕಿದೆ.ಮುಂಬರುವ ದಿನಗಳಲ್ಲಿ ರೈತರಿಗೆ ಅನುಕೂಲ ಒದಗಿಸುವ ಕಾರ್ಯ ಮಾಡಲಿ ಎಂದು ತಿಳಿಸಿದರು.ವಿಜಯೋತ್ಸವದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು,ಮೇಟಿ,ಸೀತಿಮನಿ ಅಭಿಮಾನಿಗಳು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ