Muddebihal: TAPCMS administration again to Manohar Matei 'Kai'

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ.

ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ.ಸೀತಿಮನಿ ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ ಆಯ್ಕೆ ಘೋಷಣೆ ಮಾಡಿದರು.ಅಧ್ಯಕ್ಷ ಸ್ಥಾನಕ್ಕೆ ಮುತ್ತಣ್ಣ ಮುತ್ತಣ್ಣವರ ಸೂಚಕರಾಗಿ, ನೀಲಕಂಠಗೌಡ ಗೌಡರ ಅನುಮೋದಕರಾಗಿ ಸಹಿ ಮಾಡಿದರು.ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಬಗಲಿ ಸೂಚಕರಾಗಿ,ಗುರಣ್ಣ ಹತ್ತೂರ ಅನುಮೋದಕರಾಗಿ ಸಹಿ ಮಾಡಿದರು.

ನಿರ್ದೇಶಕರಾದ ಬಸವರಾಜ ಇಸ್ಲಾಂಪೂರ,ಸುರೇಶ ಹಳೇಮನಿ, ಮಲ್ಲನಗೌಡ ಬಿರಾದಾರ,ಗುರುಲಿಂಗಪ್ಪ ಹಡ್ಲಗೇರಿ, ವನಮಾಲಾ ಮೇಟಿ, ಮಲ್ಲಮ್ಮ ಪಾಟೀಲ ಇದ್ದರು.

ಚುನಾವಣಾ ಕಾರ್ಯಕ್ಕೆ ಸಹಾಯಕ ಚುನಾವಣಾಧಿಕಾರಿ ಸಹಕಾರ ಇಲಾಖೆಯ ಅಧಿಕಾರಿ ಸಂತೋಷ ಇಲಕಲ್, ವ್ಯವಸ್ಥಾಪಕ ವಿ.ಎಸ್.ಉತ್ನಾಳ, ಸಹಾಯಕ ವ್ಯವಸ್ಥಾಪಕ ಗುರುರಾಜ ಕೋನರೆಡ್ಡಿ,ಸಿಬ್ಬಂದಿ ಎಂ.ಎA.ಪಾಟೀಲ,ಎಸ್.ಬಿ.ಚಿನಿವಾರ, ಸವಿತಾ ಚೌಧರಿ ಕಾರ್ಯನಿರ್ವಹಿಸಿದರು.

ರಹಸ್ಯ ಬಿಟ್ಟುಕೊಡದ ನಾಡಗೌಡ : ಟಿಎಪಿಸಿಎಂಎಸ್‌ನಲ್ಲಿ ಅಧಿಕಾರ ಹಂಚಿಕೆ ಸೂತ್ರವೇನಾದರೂ ನಡೆದಿದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕ ನಾಡಗೌಡರು, ಸದ್ಯಕ್ಕೆ ಅಧ್ಯಕ್ಷರಾಗಿ ಮೇಟಿ,ಉಪಾಧ್ಯಕ್ಷರಾಗಿ ಸೀತಿಮನಿ ಆಯ್ಕೆಯಾಗಿದ್ದಾರೆ. ಇವರು ಮುಂದುವರೆಯಲಿದ್ದಾರೆ.ಇವರು ಹೇಗೆ ಕೆಲಸ ಮಾಡಲಿದ್ದಾರೆ ಎಂಬುದನ್ನು ಗಮನಿಸುತ್ತೇವೆ.ಇದು ರಾಜಕಾರಣ, ಇಲ್ಲಿ ಏನು ನಡೆಯುತ್ತದೆ ಎಂದು ಹೇಳಲಾಗದು.ಒಪ್ಪಂದ ಸೂತ್ರದ ಕುರಿತು ಚರ್ಚೆ ನಡೆಸಿದ್ದೇವೆ.ಈಗಲೇ ಏನೂ ಹೇಳಲಾಗದು ಎಂದು ಅಧಿಕಾರ ಹಂಚಿಕೆ ಸೂತ್ರದ ರಹಸ್ಯವನ್ನು ನಾಡಗೌಡರು ಬಿಟ್ಟುಕೊಡಲಿಲ್ಲ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಮಾತನಾಡಿ, ಟಿಎಪಿಸಿಎಂಎಸ್‌ನಲ್ಲಿ ಶಾಸಕರ ನಿರ್ದೇಶನದಂತೆ ಕಾಂಗ್ರೆಸ್ ಪಕ್ಷದ ಬೆಂಬಲಿತರ ಕೈಗೆ ಅಧಿಕಾರ ಸಿಕ್ಕಿದೆ.ಮುಂಬರುವ ದಿನಗಳಲ್ಲಿ ರೈತರಿಗೆ ಅನುಕೂಲ ಒದಗಿಸುವ ಕಾರ್ಯ ಮಾಡಲಿ ಎಂದು ತಿಳಿಸಿದರು.ವಿಜಯೋತ್ಸವದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು,ಮೇಟಿ,ಸೀತಿಮನಿ ಅಭಿಮಾನಿಗಳು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ