ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ ಸಾಧಿಸಿರುವ ನಮ್ಮ ಸಂಸ್ಥೆಯಿoದ ಮುಂದಿನ ವರ್ಷ 200 ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್ ಸೀಟು ಪಡೆದುಕೊಳ್ಳುವಲ್ಲಿ ಯಶ ಕಾಣುವ ವಿಶ್ವಾಸ ಇದೆ ಎಂದು ಆಕ್ಸಫರ್ಡ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು.

ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಭಾನವಾರ 2025ನೇ ಸಾಲಿನಲ್ಲಿ 187 ಮೆಡಿಕಲ್ ಸೀಟು ಪಡೆದುಕೊಂಡ 187 ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ.ವಿದ್ಯಾರ್ಥಿಗಳ ಏಳ್ಗೆಗಾಗಿ ಸಂಸ್ಥೆಯಿoದ ಶಿಕ್ಷಕರು,ಉಪನ್ಯಾಸಕರು ಅಗತ್ಯ ಮಾರ್ಗದರ್ಶನ ಮಾಡಲಿದ್ದು ನಮ್ಮ ಸಂಸ್ಥೆಯಿoದ ಈಗಾಗಲೇ 1200ಕ್ಕೂ ಹೆಚ್ಚು ಎಂ.ಬಿ.ಬಿ.ಎಸ್., 1800ಕ್ಕೂ ಹೆಚ್ಚು ಬಿಎಎಎಂಎಸ್, 400ಕ್ಕೂ ಹೆಚ್ಚು ಪಶುವೈದ್ಯಕೀಯ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ.ವಿಶೇಷವಾಗಿ ವೈದ್ಯಕೀಯ ಕೋರ್ಸಿಗೆ ಸೇರಲು ಅಗತ್ಯ ತರಬೇತಿ ನೀಡಲಾಗುತ್ತದೆ ಎಂದರು.

ಬಿರಾದಾರ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ವೈದ್ಯ ಡಾ.ವಿಜಯಶೇಖರ ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ನಂತರ ಕರಿಯರ್ ಕುರಿತು ತರಬೇತಿ ಕೊಡುವ ಕೆಲಸ ಆಗಬೇಕು. ಮುಂದಿನ ಜೀವನ ಹೇಗೆ, ಯಾವ ಸ್ನಾತಕೋತ್ತರ ಪದವಿ ಆಯ್ದುಕೊಳ್ಳಬೇಕು ಎಂಬ ಬಗ್ಗೆ ತರಬೇತಿ ನೀಡಬೇಕು ಎಂದರು.

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಯ ಚಿಕ್ಕಮಕ್ಕಳ ವೈದ್ಯ ಡಾ.ಪರಶುರಾಮ ವಡ್ಡರ ಮಾತನಾಡಿ,ಎಂಬಿಬಿಎಸ್ ಎಂ.ಡಿ ಓದಲು ಅಡಿಪಾಯ.ಎರಡು ವರ್ಷ ಚೆನ್ನಾಗಿ ಓದಬೇಕು.ತಂದೆ ತಾಯಿ, ಪಾಲಕರು ಕಷ್ಟಪಟ್ಟು ಓದಿಸಲು ಕಳಿಸಿರುವಾಗ ಅದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಚಿರ್ಚನಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಟಿ.ಡಿ.ಲಮಾಣಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ವೈದ್ಯರಾಗುವ ಕನಸಿಗೆ ನೀರೆರೆದು ಪೋಷಿಸುವ ಕೆಲಸ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಯಿoದ ಮಾಡಲಾಗುತ್ತಿದ್ದು ಇಲ್ಲಿಯ ತರಬೇತಿ ಉತ್ತಮವಾಗಿದೆ ಎಂದರು.
ಶಿಕ್ಷಕ ಸಂಗಮೇಶ ಹೂಗಾರ, ಆಕ್ಸಫರ್ಡ ಆಂಗ್ಲಮಾಧ್ಯಮ ಪ್ರೌಢಶಾಲೆ ಮುಖ್ಯಗುರು ಇಸ್ಮಾಯಿಲ ಮನಿಯಾರ,ಕರೇಕಲ್ ಪಾಟೀಲ್ ಆಸ್ಪತ್ರೆಯ ವೈದ್ಯ ಡಾ.ಬಸನಗೌಡ ಕರೇಕಲ್ಲಪಾಟೀಲ ಮಾತನಾಡಿದರು.ಡಾ.ಎಸ್.ಬಿ.ಗಂಗನಗೌಡರ,ವಿಜಯಕುಮಾರ ಪಾಟೀಲ,ರಾಜಶೇಖರ ಹಿರೇಮಠ,ರೇವಣಸಿದ್ದ ಮುರಾಳ,ಕೆ.ಎಸ್.ಚಟ್ಟಿ,ಎನ್.ಎ.ಬಿರಾಜದಾರ,ಮಂಜುನಾಥ ಮಂಕಣಿ, ಮೊದಲಾದವರು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ