ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ ಸಾಧಿಸಿರುವ ನಮ್ಮ ಸಂಸ್ಥೆಯಿoದ ಮುಂದಿನ ವರ್ಷ 200 ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್ ಸೀಟು ಪಡೆದುಕೊಳ್ಳುವಲ್ಲಿ ಯಶ ಕಾಣುವ ವಿಶ್ವಾಸ ಇದೆ ಎಂದು ಆಕ್ಸಫರ್ಡ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು.

ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಭಾನವಾರ 2025ನೇ ಸಾಲಿನಲ್ಲಿ 187 ಮೆಡಿಕಲ್ ಸೀಟು ಪಡೆದುಕೊಂಡ 187 ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ.ವಿದ್ಯಾರ್ಥಿಗಳ ಏಳ್ಗೆಗಾಗಿ ಸಂಸ್ಥೆಯಿoದ ಶಿಕ್ಷಕರು,ಉಪನ್ಯಾಸಕರು ಅಗತ್ಯ ಮಾರ್ಗದರ್ಶನ ಮಾಡಲಿದ್ದು ನಮ್ಮ ಸಂಸ್ಥೆಯಿoದ ಈಗಾಗಲೇ 1200ಕ್ಕೂ ಹೆಚ್ಚು ಎಂ.ಬಿ.ಬಿ.ಎಸ್., 1800ಕ್ಕೂ ಹೆಚ್ಚು ಬಿಎಎಎಂಎಸ್, 400ಕ್ಕೂ ಹೆಚ್ಚು ಪಶುವೈದ್ಯಕೀಯ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ.ವಿಶೇಷವಾಗಿ ವೈದ್ಯಕೀಯ ಕೋರ್ಸಿಗೆ ಸೇರಲು ಅಗತ್ಯ ತರಬೇತಿ ನೀಡಲಾಗುತ್ತದೆ ಎಂದರು.

ಬಿರಾದಾರ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ವೈದ್ಯ ಡಾ.ವಿಜಯಶೇಖರ ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ನಂತರ ಕರಿಯರ್ ಕುರಿತು ತರಬೇತಿ ಕೊಡುವ ಕೆಲಸ ಆಗಬೇಕು. ಮುಂದಿನ ಜೀವನ ಹೇಗೆ, ಯಾವ ಸ್ನಾತಕೋತ್ತರ ಪದವಿ ಆಯ್ದುಕೊಳ್ಳಬೇಕು ಎಂಬ ಬಗ್ಗೆ ತರಬೇತಿ ನೀಡಬೇಕು ಎಂದರು.

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಯ ಚಿಕ್ಕಮಕ್ಕಳ ವೈದ್ಯ ಡಾ.ಪರಶುರಾಮ ವಡ್ಡರ ಮಾತನಾಡಿ,ಎಂಬಿಬಿಎಸ್ ಎಂ.ಡಿ ಓದಲು ಅಡಿಪಾಯ.ಎರಡು ವರ್ಷ ಚೆನ್ನಾಗಿ ಓದಬೇಕು.ತಂದೆ ತಾಯಿ, ಪಾಲಕರು ಕಷ್ಟಪಟ್ಟು ಓದಿಸಲು ಕಳಿಸಿರುವಾಗ ಅದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಚಿರ್ಚನಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಟಿ.ಡಿ.ಲಮಾಣಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ವೈದ್ಯರಾಗುವ ಕನಸಿಗೆ ನೀರೆರೆದು ಪೋಷಿಸುವ ಕೆಲಸ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಯಿoದ ಮಾಡಲಾಗುತ್ತಿದ್ದು ಇಲ್ಲಿಯ ತರಬೇತಿ ಉತ್ತಮವಾಗಿದೆ ಎಂದರು.
ಶಿಕ್ಷಕ ಸಂಗಮೇಶ ಹೂಗಾರ, ಆಕ್ಸಫರ್ಡ ಆಂಗ್ಲಮಾಧ್ಯಮ ಪ್ರೌಢಶಾಲೆ ಮುಖ್ಯಗುರು ಇಸ್ಮಾಯಿಲ ಮನಿಯಾರ,ಕರೇಕಲ್ ಪಾಟೀಲ್ ಆಸ್ಪತ್ರೆಯ ವೈದ್ಯ ಡಾ.ಬಸನಗೌಡ ಕರೇಕಲ್ಲಪಾಟೀಲ ಮಾತನಾಡಿದರು.ಡಾ.ಎಸ್.ಬಿ.ಗಂಗನಗೌಡರ,ವಿಜಯಕುಮಾರ ಪಾಟೀಲ,ರಾಜಶೇಖರ ಹಿರೇಮಠ,ರೇವಣಸಿದ್ದ ಮುರಾಳ,ಕೆ.ಎಸ್.ಚಟ್ಟಿ,ಎನ್.ಎ.ಬಿರಾಜದಾರ,ಮಂಜುನಾಥ ಮಂಕಣಿ, ಮೊದಲಾದವರು ಇದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ