Accident news Accident board on road

ಟಾಟಾ ಏಸ್ ಪಲ್ಟಿ: ಗಣೇಶ ವಿಗ್ರಹ ತರಲು ಹೋಗುತ್ತಿದ್ದ ಇಬ್ಬರು ಯುವಕರ ದಾರುಣ ಸಾವು

ಟಾಟಾ ಏಸ್ ಪಲ್ಟಿ: ಗಣೇಶ ವಿಗ್ರಹ ತರಲು ಹೋಗುತ್ತಿದ್ದ ಇಬ್ಬರು ಯುವಕರ ದಾರುಣ ಸಾವು

ತರೀಕೆರೆ: ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೈರಾಪುರ ಗೇಟ್ ಬಳಿ ನಡೆದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಮೃತ ದುರ್ದೈವಿಗಳನ್ನು 20 ವರ್ಷದ ಶ್ರೀಧರ್, ಧನುಷ್ ಎಂದು ಗುರುತಿಸಲಾಗಿದೆ.

ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಗಣಪತಿ ವಿಗ್ರಹ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.

ಘಟನೆಯಲ್ಲಿ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಯುವಕರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಛೇ..ಅಶ್ಲೀಲ ವಿಡಿಯೋ… ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಅನುಷಾ!

ಮೃತರು ಹಾಗೂ ಗಾಯಾಳುಗಳೆಲ್ಲರು ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Shocking news: ಕೋಲಾರದ ಮುನಿಯಪ್ಪನ ಮೊಬೈಲಲ್ಲಿ ಹೆಣ್ಮಕ್ಕಳ 5000ಕ್ಕೂ ಹೆಚ್ಚು ನಗ್ನ ದೃಶ್ಯಗಳು!

ಕೋಲಾರ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಬಾಲಕಿಯರು ಬಟ್ಟೆ ಬದಲಿಸುವ ಸಮಯದ 5000ಕ್ಕೂ ಹೆಚ್ಚು ಫೋಟೋ ಹಾಗೂ ನೂರಾರು ವಿಡಿಯೋ ಸೆರೆಹಿಡಿದ ಆರೋಪ ಕೇಳಿ ಬಂದಿದೆ.

ಪೋಕೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿಯಲ್ಲಿ ಚಿತ್ರಕಲಾ ಶಿಕ್ಷಕನೊಬ್ಬನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣ ಸಂಬಂಧ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಚಿತ್ರಕಲಾ ಶಿಕ್ಷಕ ಮುನಿಯಪ್ಪ (46) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಸಾರಾಸಗಟಾಗಿ ತಿರಸ್ಕರಿಸಿದೆ.

ಪೋಕೋ ಕಾಯ್ದೆ ಸೆಕ್ಷನ್ 11 ಪ್ರಕಾರ, ಮಕ್ಕಳ ದೇಹ ಅಥವಾ ದೇಹದ ಯಾವುದೇ ಭಾಗವನ್ನು ಅಸಭ್ಯ ರೀತಿಯಲ್ಲಿ ಪ್ರದರ್ಶಿಸು ವುದು ಲೈಂಗಿಕ ಕಿರುಕುಳವಾಗುತ್ತದೆ. ಈ ಅಪರಾಧವು ಕಾಯ್ದೆಯ ಸೆಕ್ಷನ್ 12ರಡಿ ಶಿಕ್ಷಾರ್ಹವಾಗಿದೆ.

ಪ್ರಕರಣದ ತನಿಖೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ದಾಖಲೆಗಳ ಪ್ರಕಾರ, ಅರ್ಜಿದಾರ ಐದು ಮೊಬೈಲ್ ಫೋನ್ ಹೊಂದಿದ್ದಾರೆ. ಪ್ರತಿ ಮೊಬೈಲ್‌ನಲ್ಲೂ ಸುಮಾರು ಒಂದು ಸಾವಿರ ಚಿತ್ರ ಮತ್ತು ಸಾವಿರಾರು ವಿಡಿಯೋಗಳಿರುವುದು ಆಘಾತ ಮೂಡಿಸಿದೆ.

ಇಷ್ಟು ಮೊಬೈಲ್‌ಗಳನ್ನು ಓರ್ವ ಚಿತ್ರಕಲಾ ಶಿಕ್ಷಕ ಏಕೆ ಹೊಂದಿದ್ದ? ಆ ವಿಡಿಯೋ ಹಾಗೂ ಚಿತ್ರಗಳು ಯಾವುವು? ಎಂಬುದುಪೂರ್ಣ ಪ್ರಮಾಣದತನಿಖೆ ಮತ್ತು ವಿಚಾರಣೆಯಿಂದಬಹಿರಂಗವಾಗಬೇಕಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಅಲ್ಲದೆ, ಅರ್ಜಿದಾರನ ಕೃತ್ಯವು ಭಯಾನಕತೆಗಿಂತ ಹೆಚ್ಚಿನ ಛಾಯೆ ಹೊಂದಿದೆ. ಒಬ್ಬ ಶಿಕ್ಷಕನಾಗಿ ಇಂತಹ ವಿಡಿಯೋ ಚಿತ್ರೀಕರಿಸಿರುವುದು ನಿಜಕ್ಕೂ ಅಸಭ್ಯ. ಶಿಕ್ಷಕನ ಈ ಕೃತ್ಯ ಕ್ಷಮಿಸುವಂಥದ್ದಲ್ಲ. ಈ ಕೃತ್ಯವಲ್ಲದೆ ಮತ್ಯಾವುದು ಅಪರಾಧವಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು.

ಅರ್ಜಿದಾರ ಪೂರ್ಣ ಪ್ರಮಾಣದ ವಿಚಾರಣೆಯಿಂದ ಆರೋಪಮುಕ್ತವಾಗಿ ಬರಲಿ. ಅದು ಬಿಟ್ಟು ಈ ಹಂತದಲ್ಲಿ ಪ್ರಕರಣ ರದ್ದುಪಡಿಸಿದರೆ ಶಿಕ್ಷಕನ ಅಕ್ರಮ ಚಟುವಟಿಕೆಗಳನ್ನು ಉತ್ತೇಜಿಸಿದಂತಾಗುತ್ತದೆ ಎಂದು ತೀಕ್ಷ್ಮವಾಗಿ ನುಡಿದ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿದೆ.

ಪ್ರಕರಣವೇನು?:

ಕೋಲಾರಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿಶಾಲೆಯೊಂದರಲ್ಲಿ ಚಿತ್ರಕಲಾ ಶಿಕ್ಷಕನಾಗಿ ಮುನಿಯಪ್ಪ ನೇಮಕಗೊಂಡಿದ್ದರು. ಈಗಲೂ ಅದೇ ಹುದ್ದೆಯಲ್ಲಿದ್ದಾರೆ. ವಸತಿ ಶಾಲೆಯಲ್ಲಿ ಬಟ್ಟೆ ಬದಲಿಸುವ ಸಮಯದಲ್ಲಿ ಬಾಲಕಿಯರ ಚಿತ್ರ ಹಾಗೂ ವಿಡಿಯೋವನ್ನು ತೆಗೆದ ಆರೋಪದ ಮೇಲೆ ಅರ್ಜಿದಾರರ ಬಗ್ಗೆ 2023ರ ಡಿ.15ರಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ನಿಯಂತ್ರಣ ಕೊಠಡಿ ಮೂಲಕ ದೂರು ಸ್ವೀಕರಿಸಿದ್ದರು. ನಂತರ ಮಾಸ್ತಿ ಪೊಲೀಸ್ ಠಾಣೆಯಲ್ಲಿ 2023ರ ಡಿ.17ರಂದು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಈ ಎಫ್‌ಐಆರ್ ಮತ್ತು ಆ ಕುರಿತ ಕೋಲಾರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ (ಪೋಕ್ಟೋ ವಿಶೇಷ ಕೋರ್ಟ್)ದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಮುನಿಯಪ್ಪ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದರು.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.