Accident news Accident board on road

ಟಾಟಾ ಏಸ್ ಪಲ್ಟಿ: ಗಣೇಶ ವಿಗ್ರಹ ತರಲು ಹೋಗುತ್ತಿದ್ದ ಇಬ್ಬರು ಯುವಕರ ದಾರುಣ ಸಾವು

ಟಾಟಾ ಏಸ್ ಪಲ್ಟಿ: ಗಣೇಶ ವಿಗ್ರಹ ತರಲು ಹೋಗುತ್ತಿದ್ದ ಇಬ್ಬರು ಯುವಕರ ದಾರುಣ ಸಾವು

ತರೀಕೆರೆ: ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೈರಾಪುರ ಗೇಟ್ ಬಳಿ ನಡೆದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಮೃತ ದುರ್ದೈವಿಗಳನ್ನು 20 ವರ್ಷದ ಶ್ರೀಧರ್, ಧನುಷ್ ಎಂದು ಗುರುತಿಸಲಾಗಿದೆ.

ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಗಣಪತಿ ವಿಗ್ರಹ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.

ಘಟನೆಯಲ್ಲಿ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಯುವಕರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಛೇ..ಅಶ್ಲೀಲ ವಿಡಿಯೋ… ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಅನುಷಾ!

ಮೃತರು ಹಾಗೂ ಗಾಯಾಳುಗಳೆಲ್ಲರು ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Shocking news: ಕೋಲಾರದ ಮುನಿಯಪ್ಪನ ಮೊಬೈಲಲ್ಲಿ ಹೆಣ್ಮಕ್ಕಳ 5000ಕ್ಕೂ ಹೆಚ್ಚು ನಗ್ನ ದೃಶ್ಯಗಳು!

ಕೋಲಾರ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಬಾಲಕಿಯರು ಬಟ್ಟೆ ಬದಲಿಸುವ ಸಮಯದ 5000ಕ್ಕೂ ಹೆಚ್ಚು ಫೋಟೋ ಹಾಗೂ ನೂರಾರು ವಿಡಿಯೋ ಸೆರೆಹಿಡಿದ ಆರೋಪ ಕೇಳಿ ಬಂದಿದೆ.

ಪೋಕೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿಯಲ್ಲಿ ಚಿತ್ರಕಲಾ ಶಿಕ್ಷಕನೊಬ್ಬನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣ ಸಂಬಂಧ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಚಿತ್ರಕಲಾ ಶಿಕ್ಷಕ ಮುನಿಯಪ್ಪ (46) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಸಾರಾಸಗಟಾಗಿ ತಿರಸ್ಕರಿಸಿದೆ.

ಪೋಕೋ ಕಾಯ್ದೆ ಸೆಕ್ಷನ್ 11 ಪ್ರಕಾರ, ಮಕ್ಕಳ ದೇಹ ಅಥವಾ ದೇಹದ ಯಾವುದೇ ಭಾಗವನ್ನು ಅಸಭ್ಯ ರೀತಿಯಲ್ಲಿ ಪ್ರದರ್ಶಿಸು ವುದು ಲೈಂಗಿಕ ಕಿರುಕುಳವಾಗುತ್ತದೆ. ಈ ಅಪರಾಧವು ಕಾಯ್ದೆಯ ಸೆಕ್ಷನ್ 12ರಡಿ ಶಿಕ್ಷಾರ್ಹವಾಗಿದೆ.

ಪ್ರಕರಣದ ತನಿಖೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ದಾಖಲೆಗಳ ಪ್ರಕಾರ, ಅರ್ಜಿದಾರ ಐದು ಮೊಬೈಲ್ ಫೋನ್ ಹೊಂದಿದ್ದಾರೆ. ಪ್ರತಿ ಮೊಬೈಲ್‌ನಲ್ಲೂ ಸುಮಾರು ಒಂದು ಸಾವಿರ ಚಿತ್ರ ಮತ್ತು ಸಾವಿರಾರು ವಿಡಿಯೋಗಳಿರುವುದು ಆಘಾತ ಮೂಡಿಸಿದೆ.

ಇಷ್ಟು ಮೊಬೈಲ್‌ಗಳನ್ನು ಓರ್ವ ಚಿತ್ರಕಲಾ ಶಿಕ್ಷಕ ಏಕೆ ಹೊಂದಿದ್ದ? ಆ ವಿಡಿಯೋ ಹಾಗೂ ಚಿತ್ರಗಳು ಯಾವುವು? ಎಂಬುದುಪೂರ್ಣ ಪ್ರಮಾಣದತನಿಖೆ ಮತ್ತು ವಿಚಾರಣೆಯಿಂದಬಹಿರಂಗವಾಗಬೇಕಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಅಲ್ಲದೆ, ಅರ್ಜಿದಾರನ ಕೃತ್ಯವು ಭಯಾನಕತೆಗಿಂತ ಹೆಚ್ಚಿನ ಛಾಯೆ ಹೊಂದಿದೆ. ಒಬ್ಬ ಶಿಕ್ಷಕನಾಗಿ ಇಂತಹ ವಿಡಿಯೋ ಚಿತ್ರೀಕರಿಸಿರುವುದು ನಿಜಕ್ಕೂ ಅಸಭ್ಯ. ಶಿಕ್ಷಕನ ಈ ಕೃತ್ಯ ಕ್ಷಮಿಸುವಂಥದ್ದಲ್ಲ. ಈ ಕೃತ್ಯವಲ್ಲದೆ ಮತ್ಯಾವುದು ಅಪರಾಧವಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು.

ಅರ್ಜಿದಾರ ಪೂರ್ಣ ಪ್ರಮಾಣದ ವಿಚಾರಣೆಯಿಂದ ಆರೋಪಮುಕ್ತವಾಗಿ ಬರಲಿ. ಅದು ಬಿಟ್ಟು ಈ ಹಂತದಲ್ಲಿ ಪ್ರಕರಣ ರದ್ದುಪಡಿಸಿದರೆ ಶಿಕ್ಷಕನ ಅಕ್ರಮ ಚಟುವಟಿಕೆಗಳನ್ನು ಉತ್ತೇಜಿಸಿದಂತಾಗುತ್ತದೆ ಎಂದು ತೀಕ್ಷ್ಮವಾಗಿ ನುಡಿದ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿದೆ.

ಪ್ರಕರಣವೇನು?:

ಕೋಲಾರಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿಶಾಲೆಯೊಂದರಲ್ಲಿ ಚಿತ್ರಕಲಾ ಶಿಕ್ಷಕನಾಗಿ ಮುನಿಯಪ್ಪ ನೇಮಕಗೊಂಡಿದ್ದರು. ಈಗಲೂ ಅದೇ ಹುದ್ದೆಯಲ್ಲಿದ್ದಾರೆ. ವಸತಿ ಶಾಲೆಯಲ್ಲಿ ಬಟ್ಟೆ ಬದಲಿಸುವ ಸಮಯದಲ್ಲಿ ಬಾಲಕಿಯರ ಚಿತ್ರ ಹಾಗೂ ವಿಡಿಯೋವನ್ನು ತೆಗೆದ ಆರೋಪದ ಮೇಲೆ ಅರ್ಜಿದಾರರ ಬಗ್ಗೆ 2023ರ ಡಿ.15ರಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ನಿಯಂತ್ರಣ ಕೊಠಡಿ ಮೂಲಕ ದೂರು ಸ್ವೀಕರಿಸಿದ್ದರು. ನಂತರ ಮಾಸ್ತಿ ಪೊಲೀಸ್ ಠಾಣೆಯಲ್ಲಿ 2023ರ ಡಿ.17ರಂದು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಈ ಎಫ್‌ಐಆರ್ ಮತ್ತು ಆ ಕುರಿತ ಕೋಲಾರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ (ಪೋಕ್ಟೋ ವಿಶೇಷ ಕೋರ್ಟ್)ದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಮುನಿಯಪ್ಪ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ