ಗ್ರಾಮಗಳ ಅಭಿವೃದ್ಧಿಗೆ ತೆರಿಗೆ ಪಾವತಿ ಅಗತ್ಯ ; ಪಿಡಿಓ ನಿರ್ಮಲಾ ತೋಟದ

ಗ್ರಾಮಗಳ ಅಭಿವೃದ್ಧಿಗೆ ತೆರಿಗೆ ಪಾವತಿ ಅಗತ್ಯ ; ಪಿಡಿಓ ನಿರ್ಮಲಾ ತೋಟದ

ನಾಲತವಾಡ : ಹೋಬಳಿ ವ್ಯಾಪ್ತಿಯ ಅಡವಿ ಸೋಮನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚವನಭಾವಿ ಗ್ರಾಮದಲ್ಲಿ ಶುಕ್ರವಾರ ಶ್ರೀ ಮಾರುತೇಶ್ವರ ದೇವಸ್ಥಾನ ಆವರಣದಲ್ಲಿ ಸನ್ 2026-27 ಸಾಲಿನ ನರೇಗಾ ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ ಜರುಗಿತು.

.ಅಡವಿ ಸೋಮನಾಳ ಪಿಡಿಓ ನಿರ್ಮಲಾ ತೋಟದ ಮಾತನಾಡಿ, ರೈತರಿಗೆ,ಕೂಲಿ ಕಾರ್ಮಿಕರಿಗೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಬರುವ ಕಾಮಗಾರಿಗಳಾದ ಕೃಷಿ ಹೊಂಡ,ಬದು ನಿರ್ಮಾಣ, ಚೆಕ್ ಡ್ಯಾಮ್ ದನದ ಕೊಟ್ಟಿಗೆ ಹಾಗೂ ವಿವಿಧ ಕಾಮಗಾರಿಗಳಿಗೆ ರೈತರು,ಸಾರ್ವಜನಿಕರು ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ ಎಂದು ಹೇಳಿದರು.
ಚವನಭಾವಿ ಗ್ರಾಮದಲ್ಲಿರುವ ಬಿದ್ದ ಮನೆಗಳ ಮಾಲೀಕರು ಪಂಚಾಯಿತಿಗೆ ಅರ್ಜಿ ಸಲ್ಲಿಸಿದರೆ ಜಾಗೆಗೆ ಒದಗುವ ತೆರಿಗೆಯ ಮೊತ್ತವನ್ನು ಭರಣಾ ಮಾಡಿಕೊಳ್ಳಲಾಗುತ್ತದೆ.ಅರ್ಜಿ ಸಲ್ಲಿಸಿದವರ ಮನೆಗಳ ಜಾಗೆಯನ್ನು ಖುದ್ದಾಗಿ ಪರಿಶೀಲನೆ ನಡೆಸಿ ಕರ ನಿರ್ಧಾರ ಮಾಡಲಾಗುತ್ತದೆ ಎಂದರು.

ಗ್ರಾಮೀಣ ಭಾಗದ ಪ್ರದೇಶಗಳ ಅಭಿವೃದ್ಧಿ ಆಗಬೇಕಾದರೆ ಸಾರ್ವಜನಿಕರು ತೆರಿಗೆ ಸರಿಯಾದ ಸಮಯಕ್ಕೆ ಕಟ್ಟಿದರೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅವಕಾಶ ದೊರೆಯುತ್ತದೆ ಎಂದರು.

ಅಡವಿ ಸೋಮನಾಳ ಗ್ರಾಪಂ ಅಧ್ಯಕ್ಷೆ ಸಂಗಮ್ಮ ಹಂಚಿನಾಳ, ಗ್ರಾಪಂ ಸದಸ್ಯ ಆಂಜನೇಯ ಪವಾರ, ಗ್ರಾಪಂ ಕಾರ್ಯದರ್ಶಿ ಬಸನಗೌಡ ಬಿರಾದಾರ,ಸಿಬ್ಬಂದಿ ಬಲವಂತ ಜೋಗಿನ,ಬಸಣ್ಣ ಬಿರಾದಾರ, ಗುರುರಾಜ ಗುಡಗುಂಟಿ,ಅAಗನವಾಡಿ ಕಾರ್ಯಕರ್ತೆರಾದ ಇಂದಿರಾ ಕುಂಬಾರ,ಶಾAತಾ ಈಳಗೇರ,ಸಾವಿತ್ರಿ ನಾಲತವಾಡ, ಬಸಮ್ಮ ಸೋಮನಾಳ,ಸೇರಿದಂತೆ ಗ್ರಾಪಂ ಸದಸ್ಯರು ಇದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,