ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು.
ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ ಮಕ್ಕಳು ಆಟದ ಮೂಲಕ ಉತ್ತಮವಾಗಿ ಕಲಿಯುತ್ತಾರೆ. ಇದರಲ್ಲಿ ಮಕ್ಕಳು ಸೃಜನಶೀಲತೆ ಮತ್ತು ಕಲ್ಪನೆಗಳನ್ನು ಬೆಳೆಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಶಿಕ್ಷಣಾಧಿಕಾರಿ ಎಸ್.ಬಿ.ಚಲವಾದಿ ಮಾತನಾಡಿ,ಪ್ರತಿಯೊಂದು ಮಗುವಿನಲ್ಲಿ ವಿಭಿನ್ನ ಸಾಮರ್ಥ್ಯವಿದ್ದು ಅದನ್ನು ಶಿಕ್ಷಕರು ಗ್ರಹಿಸಿ ಮಗುವಿನ ಕಲಿಕೆಯ ವೇಗ,ಬೋಧನಾ ವಿಧಾನಗಳನ್ನು ಅಳವಡಿಸಿ ಬೋಧಿಸಿದಾಗ ಮಕ್ಕಳು ಬೇಗನೇ ಕಲಿತುಕೊಳ್ಳುತ್ತಾರೆ ಎಂದರು.
ಪತ್ರಕರ್ತ ಶಂಕರ ಹೆಬ್ಬಾಳ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು.ನಮ್ಮ ಆಕಾಂಕ್ಷೆಯನ್ನು ಮಕ್ಕಳ ಮೇಲೆ ಹೇರದೇ ಮಕ್ಕಳ ಆಸೆಗೆ ತಕ್ಕಂತೆ ಶಿಕ್ಷಣ ಕೊಡಿಸಬೇಕು.ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಘಟಿಕೋತ್ಸವದ ಮಾದರಿಯಲ್ಲಿ ವಾರ್ಷಿಕೋತ್ಸವ ಮಾಡುತ್ತಿರುವ ಮೊದಲ ಶಾಲೆ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಾಗಿದೆ.ಶಾಲೆಯ ಮುಖ್ಯಸ್ಥರಾದ ಚಂದ್ರು ಕಲಾ ಸದಾ ಹೊಸತನದ ಅನ್ವೇಷಕಾರರು ಎಂದರು.
ಪುರಸಭೆ ನಾಮನಿರ್ದೇಶಿತ ಮಾಜಿ ಸದಸ್ಯ ರಾಜಶೇಖರ ಹೊಳಿ, ಸಂಸ್ಥೆಯ ಆಡಳಿತಾಧಿಕಾರಿ ಚಂದ್ರು ಕಲಾಲ ಮಾತನಾಡಿದರು.ಯುಕೆಜಿ ಮಕ್ಕಳ ಘಟಿಕೋತ್ಸವದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಾಗೂ ಆರ್.ಎಂ.ಎಸ್.ಎ., ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಶಾಲೆಯ ಅಧ್ಯಕ್ಷ ಮೋತಿಲಾಲ್ ಕಲಾಲ್ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮಾಜಿ ಸದಸ್ಯರಾದ ವೀರೇಶ ಹಡಲಗೇರಿ, ಶಿವು ಶಿವಪೂರ,ಸಂಸ್ಥೆಯ ನಿರ್ದೇಶಕರಾದ ತುಕಾರಾಂ ಕಲಾಲ, ಮಹಮ್ಮದ್ ರಫೀಕ್ ಢವಳಗಿ, ಸೂರ್ಯವಂಶ ಕ್ಷತ್ರಿಯ ಸಮಾಜದ ಅಧ್ಯಕ್ಷ ಸುರೇಶ ಕಲಾಲ್,ಸದಸ್ಯರಾದ ಗಂಗಾzsರ ಕಲಾಲ,ಮಧುಮತಿ ಕಲಾಲ,ಸಮಾಜ ಸೇವಕ ಕಾಶಿನಾಥ್ ಹುಗ್ಗಿ,ಮುಖ್ಯಗುರುಮಾತೆ ವಿಜಯಲಕ್ಷಿö್ಮÃ ಬಡಿಗೇರ,ಮಧು ಹಾದಿಮನಿ,ಜ್ಯೋತಿ ತಳವಾರ,ವಿಜಯಲಕ್ಷ್ಮಿ ನೇಬಗೇರಿ,ತಹರೀನ ಬಾಗಲಕೋಟ,ಸುಮಾ ಬಳಗಾನೂರ ಇದ್ದರು.







