ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು.

ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ ಮಕ್ಕಳು ಆಟದ ಮೂಲಕ ಉತ್ತಮವಾಗಿ ಕಲಿಯುತ್ತಾರೆ. ಇದರಲ್ಲಿ ಮಕ್ಕಳು ಸೃಜನಶೀಲತೆ ಮತ್ತು ಕಲ್ಪನೆಗಳನ್ನು ಬೆಳೆಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಶಿಕ್ಷಣಾಧಿಕಾರಿ ಎಸ್.ಬಿ.ಚಲವಾದಿ ಮಾತನಾಡಿ,ಪ್ರತಿಯೊಂದು ಮಗುವಿನಲ್ಲಿ ವಿಭಿನ್ನ ಸಾಮರ್ಥ್ಯವಿದ್ದು ಅದನ್ನು ಶಿಕ್ಷಕರು ಗ್ರಹಿಸಿ ಮಗುವಿನ ಕಲಿಕೆಯ ವೇಗ,ಬೋಧನಾ ವಿಧಾನಗಳನ್ನು ಅಳವಡಿಸಿ ಬೋಧಿಸಿದಾಗ ಮಕ್ಕಳು ಬೇಗನೇ ಕಲಿತುಕೊಳ್ಳುತ್ತಾರೆ ಎಂದರು.

ಪತ್ರಕರ್ತ ಶಂಕರ ಹೆಬ್ಬಾಳ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು.ನಮ್ಮ ಆಕಾಂಕ್ಷೆಯನ್ನು ಮಕ್ಕಳ ಮೇಲೆ ಹೇರದೇ ಮಕ್ಕಳ ಆಸೆಗೆ ತಕ್ಕಂತೆ ಶಿಕ್ಷಣ ಕೊಡಿಸಬೇಕು.ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಘಟಿಕೋತ್ಸವದ ಮಾದರಿಯಲ್ಲಿ ವಾರ್ಷಿಕೋತ್ಸವ ಮಾಡುತ್ತಿರುವ ಮೊದಲ ಶಾಲೆ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಾಗಿದೆ.ಶಾಲೆಯ ಮುಖ್ಯಸ್ಥರಾದ ಚಂದ್ರು ಕಲಾ ಸದಾ ಹೊಸತನದ ಅನ್ವೇಷಕಾರರು ಎಂದರು.

ಪುರಸಭೆ ನಾಮನಿರ್ದೇಶಿತ ಮಾಜಿ ಸದಸ್ಯ ರಾಜಶೇಖರ ಹೊಳಿ, ಸಂಸ್ಥೆಯ ಆಡಳಿತಾಧಿಕಾರಿ ಚಂದ್ರು ಕಲಾಲ ಮಾತನಾಡಿದರು.ಯುಕೆಜಿ ಮಕ್ಕಳ ಘಟಿಕೋತ್ಸವದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಾಗೂ ಆರ್.ಎಂ.ಎಸ್.ಎ., ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಶಾಲೆಯ ಅಧ್ಯಕ್ಷ ಮೋತಿಲಾಲ್ ಕಲಾಲ್ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮಾಜಿ ಸದಸ್ಯರಾದ ವೀರೇಶ ಹಡಲಗೇರಿ, ಶಿವು ಶಿವಪೂರ,ಸಂಸ್ಥೆಯ ನಿರ್ದೇಶಕರಾದ ತುಕಾರಾಂ ಕಲಾಲ, ಮಹಮ್ಮದ್ ರಫೀಕ್ ಢವಳಗಿ, ಸೂರ್ಯವಂಶ ಕ್ಷತ್ರಿಯ ಸಮಾಜದ ಅಧ್ಯಕ್ಷ ಸುರೇಶ ಕಲಾಲ್,ಸದಸ್ಯರಾದ ಗಂಗಾzsರ ಕಲಾಲ,ಮಧುಮತಿ ಕಲಾಲ,ಸಮಾಜ ಸೇವಕ ಕಾಶಿನಾಥ್ ಹುಗ್ಗಿ,ಮುಖ್ಯಗುರುಮಾತೆ ವಿಜಯಲಕ್ಷಿö್ಮÃ ಬಡಿಗೇರ,ಮಧು ಹಾದಿಮನಿ,ಜ್ಯೋತಿ ತಳವಾರ,ವಿಜಯಲಕ್ಷ್ಮಿ ನೇಬಗೇರಿ,ತಹರೀನ ಬಾಗಲಕೋಟ,ಸುಮಾ ಬಳಗಾನೂರ ಇದ್ದರು.

Latest News

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ಬಳಬಟ್ಟಿ ಗ್ರಾಮದೇವತೆ ಜಾತ್ರೆ :                                            ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಬಳಬಟ್ಟಿ ಗ್ರಾಮದೇವತೆ ಜಾತ್ರೆ : ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ, ಮಾರುತೇಶ್ವರ ಹಾಗೂಗ್ರಾಮ ದೇವತೆ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕುಸ್ತಿ ಪಂದ್ಯಾವಳಿಯಲ್ಲಿ (ಪುಣೆ ತಾಲೀಮು) ರಿಯಾಜ ಮುಳಕೋಟೆ ಬಹುಮಾನವನ್ನು ತಮ್ಮದಾಗಿಸಿಕೊಂಡರು. ಪಂದ್ಯಾವಳಿಯಲ್ಲಿ ಒಟ್ಟು 30 ಜೋಡಿ ಕುಸ್ತಿ ಪಟುಗಳು ರಾಜ್ಯದ ವಿವಿಧ ಕಡೆಯಿಂದ ಪಾಲ್ಗೊಂಡಿದ್ದರು. ಬಳಬಟ್ಟಿ ಗ್ರಾಮದ ಮಾಜಿ ಕುಸ್ತಿಪಟು ಕರಿಯಪ್ಪ ಆಸಂಗಿ ಹಾಗೂ ಯಮನಪ್ಪ ಮಾಳಗೊಂಡ ಇವರ ನೇತೃತ್ವದಲ್ಲಿ ಭರ್ಜರಿಯಾಗಿ ಕುಸ್ತಿ ಪಂದ್ಯಗಳು ನಡೆದವು. ಒನ್ ನಂಬರ ಕುಸ್ತಿ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಇರುವ ಸಂಘದ ಕಾರ್ಯಾಲಯದಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಸಂಘದ ತಾಲೂಕ ಘಟಕದ ನೂತನ ಅಧ್ಯಕ್ಷರಾಗಿ ಬಸರಕೋಡದ ಶ್ರೀ ಪವಾಡ ಬಸವೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು,ಹಿರಿಯ ಸಾಹಿತಿ ಅಶೋಕ ಪಿ.ಮಣಿ ಅವಿರೋಧವಾಗಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಬಾಪುಗೌಡ ಪಿ.ಪಾಟೀಲ್,ಉಪಾಧ್ಯಕ್ಷರಾಗಿ ಸದಾಶಿವ ಮಾಗಿ,ಪ್ರಧಾನ ಕಾರ್ಯದರ್ಶಿಗಳಾಗಿ ಎಸ.ಎ.ಬೇವಿನಗಿಡದ,ಖಜಾಂಚಿಯಾಗಿ ಬಿ.ಎಚ್.ಬಳಬಟ್ಟಿ,ಜಂಟಿ ಕಾರ್ಯದರ್ಶಿ ಡಿ.ಬಿ.ಓಲೇಕಾರ,ಯು.ಕೆ.ಬಾಗವಾನ,ಸಂಘಟನಾ ಕಾರ್ಯದರ್ಶಿಗಳಾಗಿ