Temple renovation by Basava Maladharis

ಬಸವ ಮಾಲಾಧಾರಿಗಳಿಂದ ದೇವಸ್ಥಾನ ಜೀರ್ಣೋದ್ಧಾರ

ಬಸವ ಮಾಲಾಧಾರಿಗಳಿಂದ ದೇವಸ್ಥಾನ ಜೀರ್ಣೋದ್ಧಾರ

ಸುರಪುರ : ಸುರಪುರ ತಾಲ್ಲೂಕಿನ ಕುರುಬನ ತಳ್ಳಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಗೋಣಿಮಟ್ಟಿ ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಬಸವ ಮಾಲಾಧಾರಿಗಳಿಂದ ನಡೆದಿದೆ.

ಸುಮಾರು 20 ವರ್ಷಗಳಿಂದ ದೇವಸ್ಥಾನದ ವಿಚಾರದಲ್ಲಿ ಯಾವುದೇ ಕಾರ್ಯ ಚಟುವಟಿಕೆಗಳು ನೆರವೇರದಿರುವುದನ್ನು ಗಮನಿಸಿ, ನೆನೆಗುದಿಗೆ ಬಿದ್ದಿರುವ ಹಾಗೂ ಅಳಿವಿನಂಚಿನಲ್ಲಿರುವ ಶ್ರೀ ಗೊಣಿಮಟ್ಟಿ ಬಸಪ್ಪಯ್ಯ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆ ಸೇರಿದಂತೆ ದೇವಸ್ಥಾನದ ಸುತ್ತ ಮುತ್ತಲಿನ ಕಲ್ಲು-ಮುಳ್ಳು – ಗಿಡ ಗಂಟಿಗಳನ್ನು ಜೆಸಿಬಿ ಯಂತ್ರದ ಸಹಾಯದಿಂದ ತೆರವುಗೊಳಿಸುವ ಮೂಲಕ ಸ್ವಚ್ಛತೆ ಕಾರ್ಯ ಕೈಗೊಳ್ಳಲಾಯಿತು.

ಶ್ರಾವಣ ಮಾಸದ ಕೊನೆಯ ಸೋಮವಾರ ದಿನದಂದು ಗೊಣಿಮಟ್ಟಿ ಬಸಪ್ಪಯ್ಯ ದೇವಸ್ಥಾನದಲ್ಲಿ (ಖಾಂಡ) ಮಹಾ ಪ್ರಸಾದ ನಡೆಸಲು ನಿರ್ಧರಿಸಲಾಗಿದೆ. ಮಾಲಾಧಾರಿಗಳ ಸ್ವಚ್ಛತಾ ಕಾರ್ಯಕ್ಕೆ ತಳ್ಳಳ್ಳಿ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಸಂದರ್ಭದಲ್ಲಿ ಶರಣಗೌಡ ವಡಿಗೇರಿ, ಚನ್ನಗೌಡ ಚನ್ನೂರ, ಅಶೋಕ ಕಾಕರಗಲ್ಲ, ರಾಘವೇಂದ್ರ ಮಾಸ್ತರ, ನಾಗರಾಜ ಪತ್ತಾರ, ಕುಮಾರ ದೊರೆ, ಕರಿಬಸಪ್ಪಗೌಡ ಚನ್ನೂರ, ದೇವಣ್ಣ ಆಲಗೂರ, ಶ್ರೀಕಾಂತ್ ಕಮತಗಿ, ವಿಶ್ವರಾಧ್ಯ ಮಾಲಿ ಪಾಟೀಲ್, ಆನಂದ ಆಲಗೂರ, ಶಿವರಾಜ ಕಮತಗಿ, ಶರಣಗೌಡ ಕಾಕರಗಲ್ಲ ಸೇರಿದಂತೆ ಇತರರು ಇದ್ದರು.

ವರದಿಗಾರ : ಶಿವು ರಾಠೋಡ

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ