ದಶಮಾನೋತ್ಸವ ಆಚರಣೆ: ಮುದ್ದೇಬಿಹಾಳ ತಾಲ್ಲೂಕಿಗೆ ಧರ್ಮಸ್ಥಳ ಸಂಸ್ಥೆಯ ಕಾರ್ಯನಿರ್ವಹಣೆಗೆ 10 ವರ್ಷ

ದಶಮಾನೋತ್ಸವ ಆಚರಣೆ: ಮುದ್ದೇಬಿಹಾಳ ತಾಲ್ಲೂಕಿಗೆ ಧರ್ಮಸ್ಥಳ ಸಂಸ್ಥೆಯ ಕಾರ್ಯನಿರ್ವಹಣೆಗೆ 10 ವರ್ಷ

ಮುದ್ದೇಬಿಹಾಳ : ತಾಲ್ಲೂಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಹಣೆ ಆರಂಭಿಸಿ ಹತ್ತು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಈಚೇಗೆ ಸಂಸ್ಥೆಯ ಕಚೇರಿಯಲ್ಲಿ ಚೈತನ್ಯ ಸ್ವಸಹಾಯ ಗುಂಪಿನ 10ನೇ ವರ್ಷದ ದಶಮಾನೋತ್ಸವದ ಅಂಗವಾಗಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಶಿವಾನಂದ ಪಿ ಮಾತನಾಡಿ, ಮುದ್ದೇಬಿಹಾಳ ತಾಲೂಕಿಗೆ ಧರ್ಮಸ್ಥಳ ಯೋಜನೆ ಬಂದು 10 ವರ್ಷ ಪೂರ್ಣಗೊಂಡಿದ್ದು ಸ್ವ ಸಹಾಯ ಸಂಘದ ಸದಸ್ಯರು ಸಂಘಗಳನ್ನು ರಚನೆ ಮಾಡಿಕೊಂಡು ಸಾಲ ಪಡೆದು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿಕೊಂಡು ಸ್ವಾವಲಂಬನೆ ಜೀವನ ಸಾಗಿಸುತ್ತಿದ್ದಾರೆ.ಸಂಸ್ಥೆಯಿAದ ಹತ್ತು ಹಲವು ಅಭಿವೃದ್ದಿ ಯೋಜನೆ ಕಾರ್ಯಕ್ರಮಗಳು,ಯೋಜನೆಯಿಂದ ಸದಸ್ಯರುಗಳಿಗೆ ಹಾಗೂ ಗ್ರಾಮಗಳಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ತಂಡದ ಸದಸ್ಯರಾಧ ಗಿರಿಜಾ ಮಾತನಾಡಿ, ನಾವು ಸಂಘ ರಚನೆ ಮಾಡಿಕೊಂಡು ಇದುವರೆಗೆ 12 ಜನ ಸದಸ್ಯರು ಸೇರಿ ವಿವಿಧ ಸ್ವ ಉದ್ಯೋಗ ,ಮಕ್ಕಳ ಶಿಕ್ಷಣಕ್ಕೆ ಮನೆ ಕಟ್ಟಡಕ್ಕೆ, ಕೃಷಿಗೆ ಎಂದು ಇಲ್ಲಿವರೆಗೆ 16 ಲಕ್ಷದ ಸಾಲದ ವ್ಯವಹಾರ ಮಾಡುತ್ತಿದ್ದೇವೆ. ಸಂಘದಲ್ಲಿ ಸೇರಿದ ಮೇಲೆ ನಮಗೆ ಸ್ವಂತ ಉದ್ಯೋಗ ಮಾಡಲು ಅವಕಾಶ ಸಿಕ್ಕಿದೆ. ಇದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಹೆಗ್ಗಡೆ ಅವರಿಗೆ ಅಭಿನಂದಿಸುವುದಾಗಿ ಹೇಳಿದರು.

ಯೋಜನೆ ಅಧಿಕಾರಿಗಳನ್ನು. ತಂಡದ ಹಳೆಯ ಪ್ರತಿನಿಧಿಗಳಾದ ಶ್ರೀಮತಿ ಅಮರಮ್ಮ ಹಾಗೂ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕಿ ವಿಜಯಲಕ್ಷಿö್ಮÃ ಬೂದಿಹಾಳಮಠ,ಹಿರಿಯ ಶಿಕ್ಷಕರಾದ ಸರೋಜಮ್ಮ ಶಿವಯೋಗಿಮಠ ಅವರನ್ನು ಸನ್ಮಾನಿಸಲಾಯಿತು.ಮೇಲ್ವಿಚಾರಕರಾಧ ನಾಗೇಶ್ ಎಸ್ ಕೆ. , ದೇವೇಂದ್ರಪ್ಪ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ವಿಜಯಲಕ್ಷಿö್ಮÃ ಹಾಗೂ ತಂಡದ ಸದಸ್ಯರು ಇದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,