Terrorist attack: ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ

Terrorist attack: ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ

ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಹೊರವಲಯದ ಅರಣ್ಯ ಪ್ರದೇಶದ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ (Terrorist attack) ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಪ್ರದೇಶಕ್ಕೆ ಹೆಚ್ಚಿನ ಭದ್ರತಾ ಸಿಬ್ಬಂದಿ ರವಾನಿಸಲಾಗಿದ್ದು, ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ತಟಸ್ಥಗೊಳಿಸಲು ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ.

Join Our Telegram: https://t.me/dcgkannada

ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು, ಕಾಶ್ಮೀರ ಪೊಲೀಸರು ಇಂದು ಕೊಕರ್ನಾಗ್, ಅನಂತನಾಗ್ ಪ್ರದೇಶದಲ್ಲಿ ಜಂಟಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದರು.

ಈ ವೇಳೆ ಉಗ್ರರೊಂದಿಗೆ ಗುಂಡಿನ ಚಕಮಕಿ (Terrorist Attack) ನಡೆಯಿತು ಎಂದು ಭಾರತೀಯ ಸೇನೆಯ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಟ್ವಿಟರ್ ನಲ್ಲಿ ಪೋಸ್ಟ್‌ ಮಾಡಿದೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಕೊಕರ್ನಾಗ್ ಪ್ರದೇಶದ ಅಹ್ಲಾನ್ ಗಗರ್ಮಂಡು ಅರಣ್ಯದಲ್ಲಿ ಉಗ್ರರಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆ ಆರಂಭಸಲಾಗಿತ್ತು. ಈ ವೇಳೆ ಉಗ್ರರೊಂದಿಗೆ ಗುಂಡಿನ ಕಾಳಗ ನಡೆದಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: DKS vs HDK: ಕುಮಾರಸ್ವಾಮಿ ಒಬ್ಬರೇ ಗಂಡಸ್ಸಾ; ಡಿಕೆ ಶಿವಕುಮಾರ್ ವಾಗ್ದಾಳಿ

ಅರಣ್ಯದಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನಾ ಸಿಬ್ಬಂದಿಯನ್ನು ಗಮನಿಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. 

ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Latest News

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19 ರಂದು ಸ್ವಯಂಪ್ರೇರಿತವಾಗಿ ಮುದ್ದೇಬಿಹಾಳ ಬಂದ್ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಪಕ್ಷಾತೀತವಾಗಿ ವ್ಯಾಪಾರಸ್ಥರು ಒತ್ತಡ ತರಲು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಹೇಳಿದರು. ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಈಗಾಗಲೇ ಎಲ್ಲ ವ್ಯಾಪಾರಸ್ಥರು, ಗಣ್ಯ ಉದ್ಯಮಿದಾರರು, ಸಂಘ ಸಂಸ್ಥೆಯವರು ಸಂಪರ್ಕಿಸಿ ಮುದ್ದೇಬಿಹಾಳ ಸಂಪೂರ್ಣ ಬಂದ್

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ ಕಾರ್ಯಕರ್ತರು ತಮ್ಮ ಪಕ್ಷದ ಹೈಕಮಾಂಡ್ ಮೇಲೆ ಮನವಿ,ಆಗ್ರಹ ಮಾಡಲಿ.ಅದು ಬಿಟ್ಟು ಬಲವಂತದಿoದ ಮುದ್ದೇಬಿಹಾಳ ಬಂದ್ ಮಾಡುವುದರಿಂದ ಜನಸಾಮಾನ್ಯರ ಬದುಕಿನ ಮೇಲೆ ತೊಂದರೆಯುoಟಾಗುತ್ತದೆ ಎಂದು ವರ್ತಕ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಾಡಗೌಡರಿಗೆ ಸಚಿವ ಸ್ಥಾನ ಸಿಕ್ಕರೆ ಮುದ್ದೇಬಿಹಾಳದ ಅಭಿವೃದ್ಧಿಗೆ ವೇಗ ಸಿಗಬಹುದು ಎಂಬ ನಿರೀಕ್ಷೆ ನಮ್ಮದೂ