ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ: ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ: ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಎಲ್ಲದಕ್ಕೂ ಮನಸ್ಸೆ ಕಾರಣವಾಗಿದ್ದು ಇನ್ನೊಬ್ಬರ ಮನೆ ಹಾಳು ಮಾಡುವುದು ಮನಸ್ಸೇ ಆಗಿದೆ.ತುಳಿಯುವವರ ಮಧ್ಯೆ ಬೆಳೆಯುವುದೇ ದೊಡ್ಡ ಸಾಧನೆಯಾಗಿದೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು.

ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಹಾಮಂಗಲೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಾಕಿಸ್ತಾನ,ಬಾಂಗ್ಲಾದೇಶಗಳಿಗೆ ಮಾತಾ ಎಂದು ಕರೆದಿಲ್ಲ.ಆದರೆ ಭಾರತಕ್ಕೆ ಮಾತ್ರ ಮಾತಾ ಎಂದು ಕರೆಯುತ್ತಾರೆ. ಯಾಕೆಂದರೆ ಇಲ್ಲಿ ಇರುವ ಪ್ರತಿಯೊಬ್ಬರು ಮಾತೆಯ ಸ್ವರೂಪರು,ನಮ್ಮ ದೇಶದ ಮಹಿಳೆಯರೆಲ್ಲರೂ ಮಹಾರಾಣಿಯರು ಎಂದರು.
ಸಂಸಾರದಲ್ಲಿ ಪ್ರೀತಿ ಕಮ್ಮಿ ಆಗದಂತೆ ನೋಡಿಕೊಳ್ಳಬೇಕು.ನಮ್ಮ ಹಿಂದೆ ಮಾತನಾಡುವವರು ಇದ್ದೇ ಇರುತ್ತಾರೆ.ಇನ್ನೊಬ್ಬರ ಟೀಕೆಗಳಿಗೆ ಹೆದರುವುದು ಸಲ್ಲದು.ನಾನು ನಮ್ಮ ಮನೆಯವರು ಇನ್ನೊಬ್ಬರ ಉಸಾಬರಿ ಮಾಡುವುದು ಬಿಡುತ್ತೇವೆ ಎಂದು ಹೇಳಿದರೆ ಸಂಸಾರ,ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂದರು.

ಹೊಸ ವರ್ಷ ಎಂದರೆ ಭಾರತೀಯ ಸಂಸ್ಕೃತಿಯಲ್ಲಿ ಯುಗಾದಿ ಹೊಸ ವರುಷವಾಗಿದೆ.ಅಂದು ಭಾರತೀಯರು ಮೈಗೆ ಎಣ್ಣಿ ಹಚ್ಚಿಕೊಂಡು ಪರಸ್ಪರ ಕೈಮುಗಿಯುತ್ತೇವೆ.ಆದರೆ ಪಾಶ್ಚಿಮಾತ್ಯರ ಸಂಸ್ಕೃತಿಯಲ್ಲಿ ಹೊಟ್ಟೆಗೆ ಎಣ್ಣಿ ಹಾಕಿಕೊಂಡು ರಸ್ತೆ ಬದಿ ಬಿದ್ದುಕೊಂಡರೆ ಅದು ಇಂಗ್ಲಿಷ್‌ರ ಹೊಸ ವರ್ಷ ಎಂದು ತಿಳಿದುಕೊಳ್ಳುವಂತಾಗಿದೆ.ನಾವು ಪಾಶ್ಚಿಮಾತ್ಯ ಸಂಸ್ಕೃತಿ ಅಳವಡಿಸಿಕೊಂಡರೆ ಸುಧಾರಿಸವುದಿಲ್ಲ.ಪಾಶ್ಚಿಮಾತ್ಯರು ನಮ್ಮ ದೇಶೀಯ ಸಂಸ್ಕೃತಿ ಅಳವಡಿಸಿಕೊಳ್ಳುತ್ತಿದ್ದಾರೆ ಎಂದರು. ಬಸವನ ಬಾಗೇವಾಡಿ ಒಡೆಯ ಶಿವಪ್ರಕಾಶ ಶಿವಾಚಾರ್ಯರು ಮಾತನಾಡಿ, ಈ ಭಾಗದಲ್ಲಿ ತಾಳಿಕೋಟಿ ಮಠದ ಕೀರ್ತಿಯನ್ನು ಉನ್ನತ ಮಟ್ಟಕ್ಕೆ ಬೆಳೆಸುತ್ತಿರುವ ಸಿದ್ಧಲಿಂಗ ದೇವರು ನಮ್ಮ ಭಾಗದಲ್ಲಿ ಒಳ್ಳೆಯ ಹೆಸರು ಗಳಿಸುತ್ತಿರುವುದು ಸಂತಸದ ಸಂಗತಿ ಎಂದರು.ಜAಗಮ ಸಮಾಜದ ಮಾಜಿ ಅಧ್ಯಕ್ಷ ಸಿದ್ಧಲಿಂಗಯ್ಯ ಕಲ್ಯಾಣಮಠ, ವೇ.ಮುರುಗೇಶ ವಿರಕ್ತಮಠ,ಕೋಳೂರಿನ ಸಂತೋಷ ಹಿರೇಮಠ ಇದ್ದರು.

ನನ್ನ ಉಸಿರು ಇರುವರೆಗೂ ಖಾಸ್ಗತೇಶ್ವರ ಮಠದಲ್ಲಿಯೇ ಇರುವೆ-ಸಿದ್ಧಲಿಂಗ ದೇವರು :
ಖಾಸ್ಗತೇಶ್ವರ ಮಠದಲ್ಲಿ ಹುಟ್ಟಿ ಬೆಳೆದಿರುವ ನನಗೆ ದೊಡ್ಡ ದೊಡ್ಡ ಮಠದ ಆಹ್ವಾನ ಬಂದಿತ್ತು.ಜಗದ್ಗುರು ಪಟ್ಟವು ಇದೆ ಎಂದು ಹೇಳಿದ್ದರು.ಆದರೆ ನನ್ನ ಉಸಿರು ಇರುವರೆಗೂ ಖಾಸ್ಗತೇಶ್ವರ ಮಠದಲ್ಲಿಯೇ ಇರುವೆ. ವಿರಕ್ತ ಶ್ರೀಗಳ ಆಶಯದಂತೆ ತಾಳಿಕೋಟೆ ಖಾಸ್ಗತೇಶ್ವರ ಭಾಗದಲ್ಲಿ ಬಹುದೊಡ್ಡ ಸಂಗೀತ ಪಾಠಶಾಲೆ, ನಿರಂತರ ನಿತ್ಯ ದಾಸೋಹ, ಶಿಕ್ಷಣದ ದಾಸೋಹ,ಮಹಿಳೆಯರಿಂದಲೇ ಶಾಖಾ ಮಠಗಳಲ್ಲಿ ರಥೋತ್ಸವದ ಕಾರ್ಯಗಳ ಸಂಕಲ್ಪ ಹೊಂದಿದ್ದು ಅದನ್ನು ಈಡೇರಿಸುವರೆಗೂ ವಿರಮಿಸುವುದಿಲ್ಲ ಎಂದು ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ನುಡಿದರು.

Latest News

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ:                    ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ: ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಹಾಗೂ

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ

ಗ್ಯಾರಂಟಿ ಯೋಜನೆ:                                                     ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಗ್ಯಾರಂಟಿ ಯೋಜನೆ: ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರ ಹಾಗೂ ಹೊರಪೇಟಿಯಲ್ಲಿ ಮನೆ ಮನೆಗೆ ತೆರಳಿದ ಪಂಚ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಆಚರಣೆ ಕುರಿತು ಸಮಾಜದ ಶ್ರೀ ಅಂಬಾಭವಾನಿ ಮಂದಿರದ ಆವರಣದಲ್ಲಿ ಶುಕ್ರವಾರರಂದು ಜರುಗಿದ ಪೂರ್ವಭಾವಿ ಸಭೆಯಲ್ಲಿ ಕೆಳಗೆ ನೀಡಿದಂತ ವಿವರಣೆಯಂತೆ ನಿರ್ಧರಿಸಲಾಯಿತು. ಅಂದು ಬೆಳಗಿನ ಜಾವ ಶ್ರೀ ಅಂಬಾಭವಾನಿ ಮೂರ್ತಿಗೆ ಮಹಾಭಿಷೇಕ, ಪುಷ್ಪಾರ್ಚನೆ, ಮಹಾಮಂಗಳಾರತಿ ಕಾರ್ಯಕ್ರಮ ಜರುಗುವದಲ್ಲದೇ ನಂತರ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಕುರಿತು ಬಜಾರ್ ಶ್ರೀ ಹನುಮಾನ್

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ,ಉಪಾಧ್ಯಕ್ಷರ ಅವಧಿ ಮುಕ್ತಾಯಗೊಂಡಿದ್ದು ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳ ಗ್ರಾಮ ಪಂಚಾಯತಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿಗಳಾದ ಡಾ.ಕೆ.ಆನಂದ್ ಆದೇಶ ಹೊರಡಿಸಿದ್ದಾರೆ. ಸನ್ 2026-2031ರ ಅವಧಿಗಾಗಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯುವ ದಿನಾಂಕದವರೆಗೆ ಸದರಿ ಪಂಚಾಯಿತಿಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 8(iii) ಅನ್ವಯ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ