ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ: ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ: ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಎಲ್ಲದಕ್ಕೂ ಮನಸ್ಸೆ ಕಾರಣವಾಗಿದ್ದು ಇನ್ನೊಬ್ಬರ ಮನೆ ಹಾಳು ಮಾಡುವುದು ಮನಸ್ಸೇ ಆಗಿದೆ.ತುಳಿಯುವವರ ಮಧ್ಯೆ ಬೆಳೆಯುವುದೇ ದೊಡ್ಡ ಸಾಧನೆಯಾಗಿದೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು.

ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಹಾಮಂಗಲೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಾಕಿಸ್ತಾನ,ಬಾಂಗ್ಲಾದೇಶಗಳಿಗೆ ಮಾತಾ ಎಂದು ಕರೆದಿಲ್ಲ.ಆದರೆ ಭಾರತಕ್ಕೆ ಮಾತ್ರ ಮಾತಾ ಎಂದು ಕರೆಯುತ್ತಾರೆ. ಯಾಕೆಂದರೆ ಇಲ್ಲಿ ಇರುವ ಪ್ರತಿಯೊಬ್ಬರು ಮಾತೆಯ ಸ್ವರೂಪರು,ನಮ್ಮ ದೇಶದ ಮಹಿಳೆಯರೆಲ್ಲರೂ ಮಹಾರಾಣಿಯರು ಎಂದರು.
ಸಂಸಾರದಲ್ಲಿ ಪ್ರೀತಿ ಕಮ್ಮಿ ಆಗದಂತೆ ನೋಡಿಕೊಳ್ಳಬೇಕು.ನಮ್ಮ ಹಿಂದೆ ಮಾತನಾಡುವವರು ಇದ್ದೇ ಇರುತ್ತಾರೆ.ಇನ್ನೊಬ್ಬರ ಟೀಕೆಗಳಿಗೆ ಹೆದರುವುದು ಸಲ್ಲದು.ನಾನು ನಮ್ಮ ಮನೆಯವರು ಇನ್ನೊಬ್ಬರ ಉಸಾಬರಿ ಮಾಡುವುದು ಬಿಡುತ್ತೇವೆ ಎಂದು ಹೇಳಿದರೆ ಸಂಸಾರ,ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂದರು.

ಹೊಸ ವರ್ಷ ಎಂದರೆ ಭಾರತೀಯ ಸಂಸ್ಕೃತಿಯಲ್ಲಿ ಯುಗಾದಿ ಹೊಸ ವರುಷವಾಗಿದೆ.ಅಂದು ಭಾರತೀಯರು ಮೈಗೆ ಎಣ್ಣಿ ಹಚ್ಚಿಕೊಂಡು ಪರಸ್ಪರ ಕೈಮುಗಿಯುತ್ತೇವೆ.ಆದರೆ ಪಾಶ್ಚಿಮಾತ್ಯರ ಸಂಸ್ಕೃತಿಯಲ್ಲಿ ಹೊಟ್ಟೆಗೆ ಎಣ್ಣಿ ಹಾಕಿಕೊಂಡು ರಸ್ತೆ ಬದಿ ಬಿದ್ದುಕೊಂಡರೆ ಅದು ಇಂಗ್ಲಿಷ್‌ರ ಹೊಸ ವರ್ಷ ಎಂದು ತಿಳಿದುಕೊಳ್ಳುವಂತಾಗಿದೆ.ನಾವು ಪಾಶ್ಚಿಮಾತ್ಯ ಸಂಸ್ಕೃತಿ ಅಳವಡಿಸಿಕೊಂಡರೆ ಸುಧಾರಿಸವುದಿಲ್ಲ.ಪಾಶ್ಚಿಮಾತ್ಯರು ನಮ್ಮ ದೇಶೀಯ ಸಂಸ್ಕೃತಿ ಅಳವಡಿಸಿಕೊಳ್ಳುತ್ತಿದ್ದಾರೆ ಎಂದರು. ಬಸವನ ಬಾಗೇವಾಡಿ ಒಡೆಯ ಶಿವಪ್ರಕಾಶ ಶಿವಾಚಾರ್ಯರು ಮಾತನಾಡಿ, ಈ ಭಾಗದಲ್ಲಿ ತಾಳಿಕೋಟಿ ಮಠದ ಕೀರ್ತಿಯನ್ನು ಉನ್ನತ ಮಟ್ಟಕ್ಕೆ ಬೆಳೆಸುತ್ತಿರುವ ಸಿದ್ಧಲಿಂಗ ದೇವರು ನಮ್ಮ ಭಾಗದಲ್ಲಿ ಒಳ್ಳೆಯ ಹೆಸರು ಗಳಿಸುತ್ತಿರುವುದು ಸಂತಸದ ಸಂಗತಿ ಎಂದರು.ಜAಗಮ ಸಮಾಜದ ಮಾಜಿ ಅಧ್ಯಕ್ಷ ಸಿದ್ಧಲಿಂಗಯ್ಯ ಕಲ್ಯಾಣಮಠ, ವೇ.ಮುರುಗೇಶ ವಿರಕ್ತಮಠ,ಕೋಳೂರಿನ ಸಂತೋಷ ಹಿರೇಮಠ ಇದ್ದರು.

ನನ್ನ ಉಸಿರು ಇರುವರೆಗೂ ಖಾಸ್ಗತೇಶ್ವರ ಮಠದಲ್ಲಿಯೇ ಇರುವೆ-ಸಿದ್ಧಲಿಂಗ ದೇವರು :
ಖಾಸ್ಗತೇಶ್ವರ ಮಠದಲ್ಲಿ ಹುಟ್ಟಿ ಬೆಳೆದಿರುವ ನನಗೆ ದೊಡ್ಡ ದೊಡ್ಡ ಮಠದ ಆಹ್ವಾನ ಬಂದಿತ್ತು.ಜಗದ್ಗುರು ಪಟ್ಟವು ಇದೆ ಎಂದು ಹೇಳಿದ್ದರು.ಆದರೆ ನನ್ನ ಉಸಿರು ಇರುವರೆಗೂ ಖಾಸ್ಗತೇಶ್ವರ ಮಠದಲ್ಲಿಯೇ ಇರುವೆ. ವಿರಕ್ತ ಶ್ರೀಗಳ ಆಶಯದಂತೆ ತಾಳಿಕೋಟೆ ಖಾಸ್ಗತೇಶ್ವರ ಭಾಗದಲ್ಲಿ ಬಹುದೊಡ್ಡ ಸಂಗೀತ ಪಾಠಶಾಲೆ, ನಿರಂತರ ನಿತ್ಯ ದಾಸೋಹ, ಶಿಕ್ಷಣದ ದಾಸೋಹ,ಮಹಿಳೆಯರಿಂದಲೇ ಶಾಖಾ ಮಠಗಳಲ್ಲಿ ರಥೋತ್ಸವದ ಕಾರ್ಯಗಳ ಸಂಕಲ್ಪ ಹೊಂದಿದ್ದು ಅದನ್ನು ಈಡೇರಿಸುವರೆಗೂ ವಿರಮಿಸುವುದಿಲ್ಲ ಎಂದು ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ನುಡಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ