ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ: ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ: ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಎಲ್ಲದಕ್ಕೂ ಮನಸ್ಸೆ ಕಾರಣವಾಗಿದ್ದು ಇನ್ನೊಬ್ಬರ ಮನೆ ಹಾಳು ಮಾಡುವುದು ಮನಸ್ಸೇ ಆಗಿದೆ.ತುಳಿಯುವವರ ಮಧ್ಯೆ ಬೆಳೆಯುವುದೇ ದೊಡ್ಡ ಸಾಧನೆಯಾಗಿದೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು.

ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಹಾಮಂಗಲೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಾಕಿಸ್ತಾನ,ಬಾಂಗ್ಲಾದೇಶಗಳಿಗೆ ಮಾತಾ ಎಂದು ಕರೆದಿಲ್ಲ.ಆದರೆ ಭಾರತಕ್ಕೆ ಮಾತ್ರ ಮಾತಾ ಎಂದು ಕರೆಯುತ್ತಾರೆ. ಯಾಕೆಂದರೆ ಇಲ್ಲಿ ಇರುವ ಪ್ರತಿಯೊಬ್ಬರು ಮಾತೆಯ ಸ್ವರೂಪರು,ನಮ್ಮ ದೇಶದ ಮಹಿಳೆಯರೆಲ್ಲರೂ ಮಹಾರಾಣಿಯರು ಎಂದರು.
ಸಂಸಾರದಲ್ಲಿ ಪ್ರೀತಿ ಕಮ್ಮಿ ಆಗದಂತೆ ನೋಡಿಕೊಳ್ಳಬೇಕು.ನಮ್ಮ ಹಿಂದೆ ಮಾತನಾಡುವವರು ಇದ್ದೇ ಇರುತ್ತಾರೆ.ಇನ್ನೊಬ್ಬರ ಟೀಕೆಗಳಿಗೆ ಹೆದರುವುದು ಸಲ್ಲದು.ನಾನು ನಮ್ಮ ಮನೆಯವರು ಇನ್ನೊಬ್ಬರ ಉಸಾಬರಿ ಮಾಡುವುದು ಬಿಡುತ್ತೇವೆ ಎಂದು ಹೇಳಿದರೆ ಸಂಸಾರ,ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂದರು.

ಹೊಸ ವರ್ಷ ಎಂದರೆ ಭಾರತೀಯ ಸಂಸ್ಕೃತಿಯಲ್ಲಿ ಯುಗಾದಿ ಹೊಸ ವರುಷವಾಗಿದೆ.ಅಂದು ಭಾರತೀಯರು ಮೈಗೆ ಎಣ್ಣಿ ಹಚ್ಚಿಕೊಂಡು ಪರಸ್ಪರ ಕೈಮುಗಿಯುತ್ತೇವೆ.ಆದರೆ ಪಾಶ್ಚಿಮಾತ್ಯರ ಸಂಸ್ಕೃತಿಯಲ್ಲಿ ಹೊಟ್ಟೆಗೆ ಎಣ್ಣಿ ಹಾಕಿಕೊಂಡು ರಸ್ತೆ ಬದಿ ಬಿದ್ದುಕೊಂಡರೆ ಅದು ಇಂಗ್ಲಿಷ್‌ರ ಹೊಸ ವರ್ಷ ಎಂದು ತಿಳಿದುಕೊಳ್ಳುವಂತಾಗಿದೆ.ನಾವು ಪಾಶ್ಚಿಮಾತ್ಯ ಸಂಸ್ಕೃತಿ ಅಳವಡಿಸಿಕೊಂಡರೆ ಸುಧಾರಿಸವುದಿಲ್ಲ.ಪಾಶ್ಚಿಮಾತ್ಯರು ನಮ್ಮ ದೇಶೀಯ ಸಂಸ್ಕೃತಿ ಅಳವಡಿಸಿಕೊಳ್ಳುತ್ತಿದ್ದಾರೆ ಎಂದರು. ಬಸವನ ಬಾಗೇವಾಡಿ ಒಡೆಯ ಶಿವಪ್ರಕಾಶ ಶಿವಾಚಾರ್ಯರು ಮಾತನಾಡಿ, ಈ ಭಾಗದಲ್ಲಿ ತಾಳಿಕೋಟಿ ಮಠದ ಕೀರ್ತಿಯನ್ನು ಉನ್ನತ ಮಟ್ಟಕ್ಕೆ ಬೆಳೆಸುತ್ತಿರುವ ಸಿದ್ಧಲಿಂಗ ದೇವರು ನಮ್ಮ ಭಾಗದಲ್ಲಿ ಒಳ್ಳೆಯ ಹೆಸರು ಗಳಿಸುತ್ತಿರುವುದು ಸಂತಸದ ಸಂಗತಿ ಎಂದರು.ಜAಗಮ ಸಮಾಜದ ಮಾಜಿ ಅಧ್ಯಕ್ಷ ಸಿದ್ಧಲಿಂಗಯ್ಯ ಕಲ್ಯಾಣಮಠ, ವೇ.ಮುರುಗೇಶ ವಿರಕ್ತಮಠ,ಕೋಳೂರಿನ ಸಂತೋಷ ಹಿರೇಮಠ ಇದ್ದರು.

ನನ್ನ ಉಸಿರು ಇರುವರೆಗೂ ಖಾಸ್ಗತೇಶ್ವರ ಮಠದಲ್ಲಿಯೇ ಇರುವೆ-ಸಿದ್ಧಲಿಂಗ ದೇವರು :
ಖಾಸ್ಗತೇಶ್ವರ ಮಠದಲ್ಲಿ ಹುಟ್ಟಿ ಬೆಳೆದಿರುವ ನನಗೆ ದೊಡ್ಡ ದೊಡ್ಡ ಮಠದ ಆಹ್ವಾನ ಬಂದಿತ್ತು.ಜಗದ್ಗುರು ಪಟ್ಟವು ಇದೆ ಎಂದು ಹೇಳಿದ್ದರು.ಆದರೆ ನನ್ನ ಉಸಿರು ಇರುವರೆಗೂ ಖಾಸ್ಗತೇಶ್ವರ ಮಠದಲ್ಲಿಯೇ ಇರುವೆ. ವಿರಕ್ತ ಶ್ರೀಗಳ ಆಶಯದಂತೆ ತಾಳಿಕೋಟೆ ಖಾಸ್ಗತೇಶ್ವರ ಭಾಗದಲ್ಲಿ ಬಹುದೊಡ್ಡ ಸಂಗೀತ ಪಾಠಶಾಲೆ, ನಿರಂತರ ನಿತ್ಯ ದಾಸೋಹ, ಶಿಕ್ಷಣದ ದಾಸೋಹ,ಮಹಿಳೆಯರಿಂದಲೇ ಶಾಖಾ ಮಠಗಳಲ್ಲಿ ರಥೋತ್ಸವದ ಕಾರ್ಯಗಳ ಸಂಕಲ್ಪ ಹೊಂದಿದ್ದು ಅದನ್ನು ಈಡೇರಿಸುವರೆಗೂ ವಿರಮಿಸುವುದಿಲ್ಲ ಎಂದು ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ನುಡಿದರು.

Latest News

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ ಒಳ್ಳೆಯ ಸ್ನೇಹ ಬಾಂಧವ್ಯದೊoದಿಗೆ ಸಾರ್ವಜನಿಕರಿಗೆ ಜನಸ್ನೇಹಿ ಸೇವೆ ನೀಡಬೇಕು ಎಂದು ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಮಂಡಳಿ ಸಂಘದ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೈನೂದ್ದೀನ ಜಹಾಗೀರದಾರ ಹೇಳಿದರು. ಪಟ್ಟಣದ ದಿ ಬಾಗವಾನ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ಸೇವೆ ಸಲ್ಲಿಸುವುದು ಸಾರ್ವಜನಿಕರು,ರೈತರಿಗಾಗಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ