ಹೂಗಾರ ಸಮಾಜದವರಿಗೆ ಮಳಿಗೆ ಸ್ಥಾಪಿಸಿ: ಪ್ರದೀಪ ಹೂಗಾರ

ಹೂಗಾರ ಸಮಾಜದವರಿಗೆ ಮಳಿಗೆ ಸ್ಥಾಪಿಸಿ: ಪ್ರದೀಪ ಹೂಗಾರ

ಮುದ್ದೇಬಿಹಾಳ : ಹೂಗಾರರ ಕುಲಕಸುಬು ಹೂವಿನ ವ್ಯಾಪಾರ ಮಾಡಲು ಪುರಸಭೆಯಿಂದ ಮಳಿಗೆಗಳನ್ನು ಸ್ಥಾಪಿಸಿ ಅನುಕೂಲ ಒದಗಿಸಿಕೊಡಬೇಕು ಎಂದು ಹೂಗಾರ ಸಮಾಜದ ಪ್ರಧಾನ ಕಾರ್ಯದರ್ಶಿ ಪ್ರದೀಪ ಹೂಗಾರ ಹೇಳಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪೊಲೀಸ್ ಸ್ಟೇಷನ್ ಹತ್ತಿರ ಇರುವ ಶಿವಶರಣ ಹೂಗಾರ ಮಾದಯ್ಯನವರ ವೃತ್ತದಲ್ಲಿ ಹೂಗಾರ ಮಾದಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿವಶರಣ ಹೂಗಾರ ಮಾದಯ್ಯನವರ ಬಗ್ಗೆ ಬೆಳಕು ಚೆಲ್ಲುವ ಅಗತ್ಯವಿದೆ. ಅವರ ಬಗ್ಗೆ ಸಂಶೋಧನಾ ವಿದ್ಯಾರ್ಥಿಗಳು ಅಧ್ಯಯನ ಮಾಡಲು ವಿಪುಲ ಅವಕಾಶಗಳಿವೆ. ವಿಶ್ವವಿದ್ಯಾಲಯಗಳಲ್ಲಿ ಹೂಗಾರ ಮಾದಯ್ಯ ಅವರ ಬಗ್ಗೆ ಅಧ್ಯಯನ ಕೇಂದ್ರ ಆರಂಭಿಸಬೇಕು ಎಂದರು.

ಪ್ರೋ.ಎಸ್.ಎಸ್.ಹೂಗಾರ ಮಾತನಾಡಿ, ಬಸವಣ್ಣನವರು ಸಾರಿದ ಕಾಯಕವೇ ಕೈಲಾಸ ಎಂಬುದಕ್ಕೆ ಮಾದಯ್ಯ ಉತ್ತಮ ನಿದರ್ಶನವಾಗಿದ್ದರು. ಅವರು ರಚಿಸಿದ ಕೆಲವೇ ವಚನಗಳು ಲಭ್ಯವಾಗಿವೆ. ಆ ವಚನಗಳಲ್ಲಿ ಅವರು ಸಾಮಾಜಿಕ ಸಮಾನತೆ, ಮೂಢನಂಬಿಕೆ, ಅಂಧಶ್ರದ್ಧೆಯ ಬಗ್ಗೆ ಉಲ್ಲೇಖಿಸಿದ್ದಾರೆ’ ಎಂದರು.

ಮುಖಂಡರಾದ ಬಸವರಾಜ್ ಹೂಗಾರ, ಚಂದ್ರಶೇಖರ ಹೂಗಾರ, ಎಚ್ ಕೆ ಪೂಜಾರಿ, ಮಾಂತೇಶ ವಡವಡಗಿ, ಬಸವರಾಜ ವಡವಡಗಿ, ವಿಜಯಕುಮಾರ ವಡವಡಗಿ, ಸಂತೋಷ ಹೂಗಾರ, ಸಂತೋಷ ಹೂಗಾರ,ಶಿವರಾಜ ಹೂಗಾರ, ಶರಣು ಹೂಗಾರ, ಪ್ರಕಾಶ ಹೂಗಾರ ,ಮುತ್ತಣ್ಣ ಹೂಗಾರ,ಡಾ.ಚಂದ್ರಶೇಖರ ಹೂಗಾರ, ಅಜಿತ ಹೂಗಾರ ಇದ್ದರು.

ಇದನ್ನೂ ಓದಿ: Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Latest News

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಮುದ್ದೇಬಿಹಾಳ : ಯಾರು ರಂಜಾನ್ ಮಾಸದಲ್ಲಿ ಶ್ರದ್ಧೆಯಿಂದ ನಮಾಜ್, ರೋಜಾ, ಕುರಾನ್ ತಿಲಾವತ್ ಹಾಗೂ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ಮಾ.19 ರಿಂದ ಬೈಲಕೂರ ಬೈಲಾದ್ರೇಶ್ವರ ಜಾತ್ರೋತ್ಸವ

ಮಾ.19 ರಿಂದ ಬೈಲಕೂರ ಬೈಲಾದ್ರೇಶ್ವರ ಜಾತ್ರೋತ್ಸವ

ಮುದ್ದೇಬಿಹಾಳ : ತಾಲ್ಲೂಕಿನ ಬೈಲಕೂರ ಗ್ರಾಮದ ಬೈಲಾದ್ರೇಶ್ವರ ಜಾತ್ರಾ ಮಹೋತ್ಸವ ಮಾ.19 ರಿಂದ 21ರವರೆಗೆ ಹಮ್ಮಿಕೊಳ್ಳಲಾಗಿದ್ದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಾ.19 ರಂದು ಬೆಳಗ್ಗೆ 8ಕ್ಕೆ ಮ್ಯಾಟ್ ಮೇಲೆ ಕಬಡ್ಡಿ ಪಂದ್ಯಾವಳಿ,ಮದ್ಯಾಹ್ನ 3ಕ್ಕೆ ಗಡಿಗೆ ಒಡೆಯುವ ಸ್ಪರ್ಧೆ, ರಾತ್ರಿ 9.30ಕ್ಕೆ ಸನ್ಮಾನ ಸಮಾರಂಭ, ರಾತ್ರಿ 10.30ಕ್ಕೆ ಅರುಣೋದಯ ಸಾಂಸ್ಕೃತಿಕ ಜಾನಪದ ನೃತ್ಯ ನಡೆಯಲಿದೆ. ಮಾ.20 ರಂದು ಬೆಳಗ್ಗೆ 10ಕ್ಕೆ ಸಕಲ ವಾದ್ಯ ವೈಭವಗಳೊಂದಿಗೆ ಬೈಲಾದ್ರೇಶ್ವರ ಬೆಳ್ಳಿ ಮೂರ್ತಿ ಹಾಗೂ ಗಂಗಸ್ಥಳಕ್ಕೆ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಗಳು ಅತ್ಯಂತ ಬಿಗಿ ಭದ್ರತೆಯಲ್ಲಿ ಕಟ್ಟುನಿಟ್ಟಾಗಿ ನಡೆದಿರುವುದಾಗಿ ವರದಿಯಾಗಿದೆ. ಪಟ್ಟಣದ ವಿಬಿಸಿ ಪ್ರೌಢಶಾಲೆ,ಜ್ಞಾನ ಭಾರತಿ ವಿದ್ಯಾಮಂದಿರ, ಚಿನ್ಮಯ ಜೆ.ಸಿ.ಆಂಗ್ಲಮಾಧ್ಯಮ ಪ್ರೌಢಶಾಲೆ,ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಶಿರೋಳ,ಅಭ್ಯುದಯ ಆಂಗ್ಲಮಾಧ್ಯಮ ಪ್ರೌಢಶಾಲೆ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಗೊಂದಲವಿಲ್ಲದೇ ಕಟ್ಟುನಿಟ್ಟಾಗಿ ಪರೀಕ್ಷೆಗಳು ನಡೆದಿವೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಧ್ಯಕ್ಷರು,ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದರು.