ಹೂಗಾರ ಸಮಾಜದವರಿಗೆ ಮಳಿಗೆ ಸ್ಥಾಪಿಸಿ: ಪ್ರದೀಪ ಹೂಗಾರ

ಹೂಗಾರ ಸಮಾಜದವರಿಗೆ ಮಳಿಗೆ ಸ್ಥಾಪಿಸಿ: ಪ್ರದೀಪ ಹೂಗಾರ

ಮುದ್ದೇಬಿಹಾಳ : ಹೂಗಾರರ ಕುಲಕಸುಬು ಹೂವಿನ ವ್ಯಾಪಾರ ಮಾಡಲು ಪುರಸಭೆಯಿಂದ ಮಳಿಗೆಗಳನ್ನು ಸ್ಥಾಪಿಸಿ ಅನುಕೂಲ ಒದಗಿಸಿಕೊಡಬೇಕು ಎಂದು ಹೂಗಾರ ಸಮಾಜದ ಪ್ರಧಾನ ಕಾರ್ಯದರ್ಶಿ ಪ್ರದೀಪ ಹೂಗಾರ ಹೇಳಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪೊಲೀಸ್ ಸ್ಟೇಷನ್ ಹತ್ತಿರ ಇರುವ ಶಿವಶರಣ ಹೂಗಾರ ಮಾದಯ್ಯನವರ ವೃತ್ತದಲ್ಲಿ ಹೂಗಾರ ಮಾದಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿವಶರಣ ಹೂಗಾರ ಮಾದಯ್ಯನವರ ಬಗ್ಗೆ ಬೆಳಕು ಚೆಲ್ಲುವ ಅಗತ್ಯವಿದೆ. ಅವರ ಬಗ್ಗೆ ಸಂಶೋಧನಾ ವಿದ್ಯಾರ್ಥಿಗಳು ಅಧ್ಯಯನ ಮಾಡಲು ವಿಪುಲ ಅವಕಾಶಗಳಿವೆ. ವಿಶ್ವವಿದ್ಯಾಲಯಗಳಲ್ಲಿ ಹೂಗಾರ ಮಾದಯ್ಯ ಅವರ ಬಗ್ಗೆ ಅಧ್ಯಯನ ಕೇಂದ್ರ ಆರಂಭಿಸಬೇಕು ಎಂದರು.

ಪ್ರೋ.ಎಸ್.ಎಸ್.ಹೂಗಾರ ಮಾತನಾಡಿ, ಬಸವಣ್ಣನವರು ಸಾರಿದ ಕಾಯಕವೇ ಕೈಲಾಸ ಎಂಬುದಕ್ಕೆ ಮಾದಯ್ಯ ಉತ್ತಮ ನಿದರ್ಶನವಾಗಿದ್ದರು. ಅವರು ರಚಿಸಿದ ಕೆಲವೇ ವಚನಗಳು ಲಭ್ಯವಾಗಿವೆ. ಆ ವಚನಗಳಲ್ಲಿ ಅವರು ಸಾಮಾಜಿಕ ಸಮಾನತೆ, ಮೂಢನಂಬಿಕೆ, ಅಂಧಶ್ರದ್ಧೆಯ ಬಗ್ಗೆ ಉಲ್ಲೇಖಿಸಿದ್ದಾರೆ’ ಎಂದರು.

ಮುಖಂಡರಾದ ಬಸವರಾಜ್ ಹೂಗಾರ, ಚಂದ್ರಶೇಖರ ಹೂಗಾರ, ಎಚ್ ಕೆ ಪೂಜಾರಿ, ಮಾಂತೇಶ ವಡವಡಗಿ, ಬಸವರಾಜ ವಡವಡಗಿ, ವಿಜಯಕುಮಾರ ವಡವಡಗಿ, ಸಂತೋಷ ಹೂಗಾರ, ಸಂತೋಷ ಹೂಗಾರ,ಶಿವರಾಜ ಹೂಗಾರ, ಶರಣು ಹೂಗಾರ, ಪ್ರಕಾಶ ಹೂಗಾರ ,ಮುತ್ತಣ್ಣ ಹೂಗಾರ,ಡಾ.ಚಂದ್ರಶೇಖರ ಹೂಗಾರ, ಅಜಿತ ಹೂಗಾರ ಇದ್ದರು.

ಇದನ್ನೂ ಓದಿ: Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ