The body of the farmer who was carrying the crocodile was found after five hours of operation

ಮೊಸಳೆ ಹೊತ್ತೊಯ್ದಿದ್ದ ರೈತನ ಶವ ಐದು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ

ಮೊಸಳೆ ಹೊತ್ತೊಯ್ದಿದ್ದ ರೈತನ ಶವ ಐದು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ

ಮುದ್ದೇಬಿಹಾಳ : ಅಮವಾಸ್ಯೆಯ ಪ್ರಯುಕ್ತ ಎತ್ತುಗಳನ್ನು ತೊಳೆಯಲು ಕೃಷ್ಣಾ ನದಿ ತೀರಕ್ಕೆ ಹೋಗಿದ್ದ ರೈತರೊಬ್ಬರನ್ನು ಮೊಸಳೆಯೊಂದು ಎಳೆದುಕೊಂಡು ಹೋಗಿದ್ದು ಐದು ಗಂಟೆಗಳ ಕಾರ್ಯಾಚರಣೆ ನಂತರ ರೈತ ಶವ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ಕುಂಚಗನೂರ ಗ್ರಾಮದಲ್ಲಿ ಶನಿವಾರ ನಡೆದಿದೆ.

ತಂಗಡಗಿ ಗ್ರಾ.ಪಂ ವ್ಯಾಪ್ತಿಯ ಕುಂಚಗನೂರ ಗ್ರಾಮದ ಪಂಪಹೌಸ್ ಬಳಿ ಈ ಘಟನೆ ನಡೆದಿದೆ. ಕುಂಚಗನೂರ ಗ್ರಾಮದ ಕಾಶಪ್ಪ ಹಣಮಂತ ಕಂಬಳಿ(38) ಎಂಬ ರೈತನೇ ಮೊಸಳೆ ದಾಳಿಗೆ ಒಳಗಾದವರು. ಕುಂಚಗನೂರ ಗ್ರಾಮದ ಕೆಲವರು ಮೊಸಳೆ ಕಾಶಪ್ಪನನ್ನು ಎಳೆದೊಯ್ಯುವುದನ್ನು ನೋಡಿದ್ದಾರೆ ಎನ್ನಲಾಗಿದ್ದು ಕಾರ್ಯಾಚರಣೆ ಬಳಿಕ ಶವ ಪತ್ತೆ ಆಗಿದೆ.

ಜಂಟಿ ಕಾರ್ಯಾಚರಣೆ: ಕಂದಾಯ, ಪೊಲೀಸ್, ಅಗ್ನಿಶಾಮಕ ಹಾಗೂ ಗ್ರಾಪಂ ಅಧಿಕಾರಿಗಳು ಮೊಸಳೆ ಹೊತ್ತೊಯ್ದಿದ್ದ ರೈತನ ಶವ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದರು. ಆರಂಭದಲ್ಲಿ ಶವ ಪತ್ತೆ ಆಗದ ಕಾರಣ ಕೂಡಲಸಂಗಮದಿಂದ ಬೋಟ್ ತರಿಸಿಕೊಂಡು ಕಾರ್ಯಾಚರಣೆ ಮುಂದುವರೆಸಿದಾಗ ಶವ ಪತ್ತೆ ಆಗಿದೆ ಎಂದು ಪೊಲೀಸ ಮೂಲಗಳು ತಿಳಿಸಿವೆ.

ಈ ಕುರಿತು ಮೃತ ರೈತನ ಪತ್ನಿ ಯಲ್ಲವ್ವ ಕಂಬಳಿ ತನ್ನ ಪತಿ ಮೊಸಳೆ ದಾಳಿಯಿಂದಲೇ ಅಸುನೀಗಿದ್ದಾರೆ ಎಂದು ಪೊಲೀಸ ಠಾಣೆಗೆ ದೂರು ನೀಡಿದ್ದಾಗಿ ಪಿಎಸ್‌ಐ ಸಂಜಯ ತಿಪರೆಡ್ಡಿ ತಿಳಿಸಿದ್ದಾರೆ.

ಕಾರ್ಯಾಚರಣೆ ಸಮಯದಲ್ಲಿ ಅಗ್ನಿಶಾಮಕ ಠಾಣೆಯ ಪ್ರಭಾರ ಠಾಣಾಧಿಕಾರಿ ನಾಗೇಶ ರಾಠೋಡ, ಕಂದಾಯ ನಿರೀಕ್ಷಕ ಪವನ್ ತಳವಾರ, ಗ್ರಾಮ ಆಡಳಿತ ಅಧಿಕಾರಿ ಎಚ್.ಸಿ.ಕೊರಬು, ಅಗ್ನಿಶಾಮಕ ಇಲಾಖೆಯ ಶಿವಾನಂದ ವಾಲೀಕಾರ, ಶಕೀಲ್ ಅಹ್ಮದ ಅವಟಿ,ಕಾರ್ತಿಕ ಅಜಮನಿ, ಬಸವರಾಜ ಭಜಂತ್ರಿ, ರಾಜು ರಾಥೋಡ್, ಸುನೀಲ ನಾಯಕ, ವಿರೂಪಾಕ್ಷಿ ಪೂಜಾರಿ ಮೊದಲಾದವರು ಪಾಲ್ಗೊಂಡಿದ್ದರು.

ತಹಸೀಲ್ದಾರ್, ಪಿಎಸೈ ಭೇಟಿ: ಘಟನೆಯ ವಿಷಯ ತಿಳಿದ ನಂತರ ಕೆಲ ಗಂಟೆಗಳಲ್ಲಿ ತಹಸೀಲ್ದಾರ್ ಕೀರ್ತಿ ಚಾಲಕ, ಪಿಎಸೈ ಸಂಜಯ ತಿಪರೆಡ್ಡಿ ಭೇಟಿ ನೀಡಿ ಕಾರ್ಯಾಚರಣೆ ವೀಕ್ಷಿಸಿದರು. ಅಲ್ಲದೇ ರೈತನ ಕುಟುಂಬದವರಿಂದ ಮಾಹಿತಿ ಪಡೆದುಕೊಂಡರು.

50 ಲಕ್ಷ ರೂ. ಪರಿಹಾರಕ್ಕೆ ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಕುಂಚಗನೂರು ಗ್ರಾಮದಲ್ಲಿ ಮೊಸಳೆ ದಾಳಿಗೆ ಒಳಗಾಗಿ ಪ್ರಾಣ ಕಳೆದುಕೊಂಡಿರುವ ರೈತ ಕಾಶಪ್ಪ ಕಂಬಳಿ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ.ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು.

ಕುಂಚಗನೂರದ ಪಂಪಹೌಸ್ ಬಳಿ ಮೊಸಳೆ ದಾಳಿಗೆ ಬಲಿಯಾದ ರೈತನ ಕುಟುಂಬದವರನ್ನು ಭೇಟಿ ಮಾಡಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಶಪ್ಪ ಕಂಬಳಿಯವರದ್ದು ಬಡ ರೈತನ ಕುಟುಂಬವಾಗಿದ್ದು ಆತನಿಗೆ ನಾಲ್ವರು ಮಕ್ಕಳಿದ್ದಾರೆ. ಸಣ್ಣ ವಯಸ್ಸಿನಲ್ಲಿಯೇ ಮೊಸಳೆ ದಾಳಿಗೆ ಜೀವ ಕಳೆದುಕೊಂಡಿರುವ ಅವರ ಕುಟುಂಬದ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ಒತ್ತಾಯಿಸಿದರು.

ಕೃಷ್ಣಾ ನದಿ ಪಾತ್ರದಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ನದಿ ದಂಡೆ ಗ್ರಾಮದ ಜನರಿಗೆ ಪ್ರವಾಹದ ಸಮಯದಲ್ಲಿ ಪೊಲೀಸ್ ಇಲಾಖೆಯವರು ನಿರಂತರವಾಗಿ ಕಣ್ಗಾವಲು ಇರಿಸಬೇಕು.ನದಿಯತ್ತ ತೆರಳದಂತೆ ಜನರಿಗೆ ಅರಿವು ಮೂಡಿಸಬೇಕು. ಆದರೆ ಘಟನೆ ನಡೆದ ಎರಡೂವರೆ ಗಂಟೆಗಳ ಬಳಿಕ ಪಿಎಸೈ ಸ್ಥಳಕ್ಕೆ ಬರುತ್ತಾರೆ. ರೈತರು ಠಾಣೆಗೆ ಬಂದೇ ಕೇಸ್ ಕೊಡಬೇಕು ಎಂದು ಹೇಳುತ್ತಾರೆ. ಮನೆಯ ಸದಸ್ಯನನ್ನು ಕಳೆದುಕೊಂಡಿದ್ದ ರೈತನ ಕುಟುಂಬದವರು ಠಾಣೆಗೆ ಹೋಗಿ ಕೇಸು ಕೊಡಲು ಸಾಧ್ಯವೇ? ಎಂದು ಪ್ರಶ್ನಿಸಿದರು. ಮೊಸಳೆಗಳ ಹಾವಳಿ ತಪ್ಪಿಸಲು ಹಿಂದಿನ ಅವಧಿಯಲ್ಲಿ 620 ಕೋಟಿ ರೂ.ಗಳ ಪ್ರಸ್ತಾವನೆಯನ್ನು 40 ಹಳ್ಳಿಗಳಿಗೆ ರಕ್ಷಣೆಗಾಗಿ ರಕ್ಷಣಾ ಗೋಡೆ ನಿರ್ಮಾಣಕ್ಕೆ ಸಲ್ಲಿಸಲಾಗಿತ್ತು. ಆದರೆ ಈ ಸರ್ಕಾರ ಏನೂ ಮಾಡುತ್ತಿಲ್ಲ ಎಂದು ನಡಹಳ್ಳಿ ದೂರಿದರು. ಮುಖಂಡ ಎನ್. ಎಸ್. ದೇಶಮುಖ (ಕುಂಚಗನೂರ), ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಪ್ರಧಾನ ಕಾರ್ಯದರ್ಶಿ ಸಂಜೀವ ಬಾಗೇವಾಡಿ, ಗ್ರಾಪಂ ಮಾಜಿ ಅಧ್ಯಕ್ಷ ಶಿವಾನಂದ ಮಂಕಣಿ ಮೊದಲಾದವರು ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ