The children carried the father's dead body on the bike

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ಪಾವಗಡ: ಸಾವು ಒಂದು ಕಡೆಯಾದರೆ, ಕೊನೆಯ ಕ್ಷಣದಲ್ಲಿ ಗೌರವಯುತವಾಗಿ ಬೀಳ್ಕೊಡಲು ಆಗುತ್ತಿಲ್ಲ ಎಂಬ ಕೊರಗಿನಿಂದಲೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸದ ದೃಶ್ಯ ಮನ ಕಲಕುವಂತಿತ್ತು.

ಹೌದು, ಸೂಕ್ತ ಸಮಯದಲ್ಲಿ ಆಂಬುಲೆನ್ಸ್ ದೊರೆಯದೆ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್​ನಲ್ಲೇ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ನಡೆದಿದೆ.

ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವ್ಯಕ್ತಿ ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳು, ಹೊನ್ನೊರಪ್ಪನವರನ್ನ 108 ಆಂಬ್ಯುಲೆನ್ಸ್ ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಅಷ್ಟರಾಗಲೇ ಹೊನ್ನೂರಪ್ಪನ ಜೀವ ಹೋಗಿದೆ.

ಬಳಿಕ ಮೃತ ಶರೀರವನ್ನು ಮನೆಗೆ ಸಾಗಿಸಲು 108 ಆಂಬ್ಯುಲೆನ್ಸ್ ಸಿಬ್ಬಂದಿ ನಿರಾಕರಿಸಿದ್ದಾರೆ. ಮೃತದೇಹವನ್ನು ಆಂಬ್ಯುಲೆನ್ಸ್​​ನಲ್ಲಿ ಸಾಗಿಸುವಂತಿಲ್ಲ ಎಂದಿದ್ದಾರೆ.

ಕೈಯಲ್ಲಿ ಹಣವಿಲ್ಲದೇ ಕೊನೆಗೆ ಹೊನ್ನೂರಪ್ಪ ಮಕ್ಕಳಾದ ಗೋಪಾಲಪ್ಪ ತಮ್ಮ ತಂದೆಯ ಮೃತದೇಹವನ್ನು ಭುಜದ ಮೇಲೆ ಹೊತ್ತು ಕಣ್ಣೀರು ಸುರಿಸುತ್ತ ಆಸ್ಪತ್ರೆಯಿಂದ ಹೊರ ಬಂದರು.ವಿಧಿಯಿಲ್ಲದೆ ತಂದೆ ಶವವನ್ನು ಬೈಕ್ ನಲ್ಲೇ ತೆಗೆದುಕೊಂಡು ಮನೆಗೆ ಹೋಗಿದ್ದಾರೆ.

ವೈದ್ಯರಿಗೆ ಹಿಡಿಶಾಪ:

ಇಂತಹ ಪರಿಸ್ಥಿತಿ ಮತ್ತೊಬ್ಬರಿಗೆ ಬರಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರಿಗೆ ಬದುಕಿದ್ದಾಗ ಉತ್ತಮ ಚಿಕಿತ್ಸೆ ಸಿಗುವುದಿಲ್ಲ. ಸತ್ತಮೇಲಾದರೂ ಕನಿಷ್ಠ ಸೌಲಭ್ಯ ಕೊಡಿ. ನೀವು ಮನುಷ್ಯರು ಎಂಬುವುದನ್ನು ಮರೆಯದಿರಿ ಎಂದು ಆಸ್ಪತ್ರೆಯಲ್ಲಿ ನೆರೆದಿದ್ದವರು ಆಂಬುಲೆನ್ಸ್ ವ್ಯವಸ್ಥೆ ಮಾಡದ ಸಿಬ್ಬಂದಿ, ವೈದ್ಯರಿಗೆ ಹಿಡಿಶಾಪ ಹಾಕಿದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ