The children carried the father's dead body on the bike

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ಪಾವಗಡ: ಸಾವು ಒಂದು ಕಡೆಯಾದರೆ, ಕೊನೆಯ ಕ್ಷಣದಲ್ಲಿ ಗೌರವಯುತವಾಗಿ ಬೀಳ್ಕೊಡಲು ಆಗುತ್ತಿಲ್ಲ ಎಂಬ ಕೊರಗಿನಿಂದಲೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸದ ದೃಶ್ಯ ಮನ ಕಲಕುವಂತಿತ್ತು.

ಹೌದು, ಸೂಕ್ತ ಸಮಯದಲ್ಲಿ ಆಂಬುಲೆನ್ಸ್ ದೊರೆಯದೆ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್​ನಲ್ಲೇ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ನಡೆದಿದೆ.

ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವ್ಯಕ್ತಿ ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳು, ಹೊನ್ನೊರಪ್ಪನವರನ್ನ 108 ಆಂಬ್ಯುಲೆನ್ಸ್ ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಅಷ್ಟರಾಗಲೇ ಹೊನ್ನೂರಪ್ಪನ ಜೀವ ಹೋಗಿದೆ.

ಬಳಿಕ ಮೃತ ಶರೀರವನ್ನು ಮನೆಗೆ ಸಾಗಿಸಲು 108 ಆಂಬ್ಯುಲೆನ್ಸ್ ಸಿಬ್ಬಂದಿ ನಿರಾಕರಿಸಿದ್ದಾರೆ. ಮೃತದೇಹವನ್ನು ಆಂಬ್ಯುಲೆನ್ಸ್​​ನಲ್ಲಿ ಸಾಗಿಸುವಂತಿಲ್ಲ ಎಂದಿದ್ದಾರೆ.

ಕೈಯಲ್ಲಿ ಹಣವಿಲ್ಲದೇ ಕೊನೆಗೆ ಹೊನ್ನೂರಪ್ಪ ಮಕ್ಕಳಾದ ಗೋಪಾಲಪ್ಪ ತಮ್ಮ ತಂದೆಯ ಮೃತದೇಹವನ್ನು ಭುಜದ ಮೇಲೆ ಹೊತ್ತು ಕಣ್ಣೀರು ಸುರಿಸುತ್ತ ಆಸ್ಪತ್ರೆಯಿಂದ ಹೊರ ಬಂದರು.ವಿಧಿಯಿಲ್ಲದೆ ತಂದೆ ಶವವನ್ನು ಬೈಕ್ ನಲ್ಲೇ ತೆಗೆದುಕೊಂಡು ಮನೆಗೆ ಹೋಗಿದ್ದಾರೆ.

ವೈದ್ಯರಿಗೆ ಹಿಡಿಶಾಪ:

ಇಂತಹ ಪರಿಸ್ಥಿತಿ ಮತ್ತೊಬ್ಬರಿಗೆ ಬರಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರಿಗೆ ಬದುಕಿದ್ದಾಗ ಉತ್ತಮ ಚಿಕಿತ್ಸೆ ಸಿಗುವುದಿಲ್ಲ. ಸತ್ತಮೇಲಾದರೂ ಕನಿಷ್ಠ ಸೌಲಭ್ಯ ಕೊಡಿ. ನೀವು ಮನುಷ್ಯರು ಎಂಬುವುದನ್ನು ಮರೆಯದಿರಿ ಎಂದು ಆಸ್ಪತ್ರೆಯಲ್ಲಿ ನೆರೆದಿದ್ದವರು ಆಂಬುಲೆನ್ಸ್ ವ್ಯವಸ್ಥೆ ಮಾಡದ ಸಿಬ್ಬಂದಿ, ವೈದ್ಯರಿಗೆ ಹಿಡಿಶಾಪ ಹಾಕಿದರು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ