The children carried the father's dead body on the bike

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

Ad
Ad

ಪಾವಗಡ: ಸಾವು ಒಂದು ಕಡೆಯಾದರೆ, ಕೊನೆಯ ಕ್ಷಣದಲ್ಲಿ ಗೌರವಯುತವಾಗಿ ಬೀಳ್ಕೊಡಲು ಆಗುತ್ತಿಲ್ಲ ಎಂಬ ಕೊರಗಿನಿಂದಲೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸದ ದೃಶ್ಯ ಮನ ಕಲಕುವಂತಿತ್ತು.

Ad
Ad

ಹೌದು, ಸೂಕ್ತ ಸಮಯದಲ್ಲಿ ಆಂಬುಲೆನ್ಸ್ ದೊರೆಯದೆ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್​ನಲ್ಲೇ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ನಡೆದಿದೆ.

ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವ್ಯಕ್ತಿ ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳು, ಹೊನ್ನೊರಪ್ಪನವರನ್ನ 108 ಆಂಬ್ಯುಲೆನ್ಸ್ ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಅಷ್ಟರಾಗಲೇ ಹೊನ್ನೂರಪ್ಪನ ಜೀವ ಹೋಗಿದೆ.

ಬಳಿಕ ಮೃತ ಶರೀರವನ್ನು ಮನೆಗೆ ಸಾಗಿಸಲು 108 ಆಂಬ್ಯುಲೆನ್ಸ್ ಸಿಬ್ಬಂದಿ ನಿರಾಕರಿಸಿದ್ದಾರೆ. ಮೃತದೇಹವನ್ನು ಆಂಬ್ಯುಲೆನ್ಸ್​​ನಲ್ಲಿ ಸಾಗಿಸುವಂತಿಲ್ಲ ಎಂದಿದ್ದಾರೆ.

ಕೈಯಲ್ಲಿ ಹಣವಿಲ್ಲದೇ ಕೊನೆಗೆ ಹೊನ್ನೂರಪ್ಪ ಮಕ್ಕಳಾದ ಗೋಪಾಲಪ್ಪ ತಮ್ಮ ತಂದೆಯ ಮೃತದೇಹವನ್ನು ಭುಜದ ಮೇಲೆ ಹೊತ್ತು ಕಣ್ಣೀರು ಸುರಿಸುತ್ತ ಆಸ್ಪತ್ರೆಯಿಂದ ಹೊರ ಬಂದರು.ವಿಧಿಯಿಲ್ಲದೆ ತಂದೆ ಶವವನ್ನು ಬೈಕ್ ನಲ್ಲೇ ತೆಗೆದುಕೊಂಡು ಮನೆಗೆ ಹೋಗಿದ್ದಾರೆ.

ವೈದ್ಯರಿಗೆ ಹಿಡಿಶಾಪ:

ಇಂತಹ ಪರಿಸ್ಥಿತಿ ಮತ್ತೊಬ್ಬರಿಗೆ ಬರಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರಿಗೆ ಬದುಕಿದ್ದಾಗ ಉತ್ತಮ ಚಿಕಿತ್ಸೆ ಸಿಗುವುದಿಲ್ಲ. ಸತ್ತಮೇಲಾದರೂ ಕನಿಷ್ಠ ಸೌಲಭ್ಯ ಕೊಡಿ. ನೀವು ಮನುಷ್ಯರು ಎಂಬುವುದನ್ನು ಮರೆಯದಿರಿ ಎಂದು ಆಸ್ಪತ್ರೆಯಲ್ಲಿ ನೆರೆದಿದ್ದವರು ಆಂಬುಲೆನ್ಸ್ ವ್ಯವಸ್ಥೆ ಮಾಡದ ಸಿಬ್ಬಂದಿ, ವೈದ್ಯರಿಗೆ ಹಿಡಿಶಾಪ ಹಾಕಿದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500