The children carried the father's dead body on the bike

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ಪಾವಗಡ: ಸಾವು ಒಂದು ಕಡೆಯಾದರೆ, ಕೊನೆಯ ಕ್ಷಣದಲ್ಲಿ ಗೌರವಯುತವಾಗಿ ಬೀಳ್ಕೊಡಲು ಆಗುತ್ತಿಲ್ಲ ಎಂಬ ಕೊರಗಿನಿಂದಲೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸದ ದೃಶ್ಯ ಮನ ಕಲಕುವಂತಿತ್ತು.

ಹೌದು, ಸೂಕ್ತ ಸಮಯದಲ್ಲಿ ಆಂಬುಲೆನ್ಸ್ ದೊರೆಯದೆ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್​ನಲ್ಲೇ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ನಡೆದಿದೆ.

ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವ್ಯಕ್ತಿ ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳು, ಹೊನ್ನೊರಪ್ಪನವರನ್ನ 108 ಆಂಬ್ಯುಲೆನ್ಸ್ ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಅಷ್ಟರಾಗಲೇ ಹೊನ್ನೂರಪ್ಪನ ಜೀವ ಹೋಗಿದೆ.

ಬಳಿಕ ಮೃತ ಶರೀರವನ್ನು ಮನೆಗೆ ಸಾಗಿಸಲು 108 ಆಂಬ್ಯುಲೆನ್ಸ್ ಸಿಬ್ಬಂದಿ ನಿರಾಕರಿಸಿದ್ದಾರೆ. ಮೃತದೇಹವನ್ನು ಆಂಬ್ಯುಲೆನ್ಸ್​​ನಲ್ಲಿ ಸಾಗಿಸುವಂತಿಲ್ಲ ಎಂದಿದ್ದಾರೆ.

ಕೈಯಲ್ಲಿ ಹಣವಿಲ್ಲದೇ ಕೊನೆಗೆ ಹೊನ್ನೂರಪ್ಪ ಮಕ್ಕಳಾದ ಗೋಪಾಲಪ್ಪ ತಮ್ಮ ತಂದೆಯ ಮೃತದೇಹವನ್ನು ಭುಜದ ಮೇಲೆ ಹೊತ್ತು ಕಣ್ಣೀರು ಸುರಿಸುತ್ತ ಆಸ್ಪತ್ರೆಯಿಂದ ಹೊರ ಬಂದರು.ವಿಧಿಯಿಲ್ಲದೆ ತಂದೆ ಶವವನ್ನು ಬೈಕ್ ನಲ್ಲೇ ತೆಗೆದುಕೊಂಡು ಮನೆಗೆ ಹೋಗಿದ್ದಾರೆ.

ವೈದ್ಯರಿಗೆ ಹಿಡಿಶಾಪ:

ಇಂತಹ ಪರಿಸ್ಥಿತಿ ಮತ್ತೊಬ್ಬರಿಗೆ ಬರಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರಿಗೆ ಬದುಕಿದ್ದಾಗ ಉತ್ತಮ ಚಿಕಿತ್ಸೆ ಸಿಗುವುದಿಲ್ಲ. ಸತ್ತಮೇಲಾದರೂ ಕನಿಷ್ಠ ಸೌಲಭ್ಯ ಕೊಡಿ. ನೀವು ಮನುಷ್ಯರು ಎಂಬುವುದನ್ನು ಮರೆಯದಿರಿ ಎಂದು ಆಸ್ಪತ್ರೆಯಲ್ಲಿ ನೆರೆದಿದ್ದವರು ಆಂಬುಲೆನ್ಸ್ ವ್ಯವಸ್ಥೆ ಮಾಡದ ಸಿಬ್ಬಂದಿ, ವೈದ್ಯರಿಗೆ ಹಿಡಿಶಾಪ ಹಾಕಿದರು.

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,