The children carried the father's dead body on the bike

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ಪಾವಗಡ: ಸಾವು ಒಂದು ಕಡೆಯಾದರೆ, ಕೊನೆಯ ಕ್ಷಣದಲ್ಲಿ ಗೌರವಯುತವಾಗಿ ಬೀಳ್ಕೊಡಲು ಆಗುತ್ತಿಲ್ಲ ಎಂಬ ಕೊರಗಿನಿಂದಲೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸದ ದೃಶ್ಯ ಮನ ಕಲಕುವಂತಿತ್ತು.

ಹೌದು, ಸೂಕ್ತ ಸಮಯದಲ್ಲಿ ಆಂಬುಲೆನ್ಸ್ ದೊರೆಯದೆ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್​ನಲ್ಲೇ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ನಡೆದಿದೆ.

ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವ್ಯಕ್ತಿ ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳು, ಹೊನ್ನೊರಪ್ಪನವರನ್ನ 108 ಆಂಬ್ಯುಲೆನ್ಸ್ ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಅಷ್ಟರಾಗಲೇ ಹೊನ್ನೂರಪ್ಪನ ಜೀವ ಹೋಗಿದೆ.

ಬಳಿಕ ಮೃತ ಶರೀರವನ್ನು ಮನೆಗೆ ಸಾಗಿಸಲು 108 ಆಂಬ್ಯುಲೆನ್ಸ್ ಸಿಬ್ಬಂದಿ ನಿರಾಕರಿಸಿದ್ದಾರೆ. ಮೃತದೇಹವನ್ನು ಆಂಬ್ಯುಲೆನ್ಸ್​​ನಲ್ಲಿ ಸಾಗಿಸುವಂತಿಲ್ಲ ಎಂದಿದ್ದಾರೆ.

ಕೈಯಲ್ಲಿ ಹಣವಿಲ್ಲದೇ ಕೊನೆಗೆ ಹೊನ್ನೂರಪ್ಪ ಮಕ್ಕಳಾದ ಗೋಪಾಲಪ್ಪ ತಮ್ಮ ತಂದೆಯ ಮೃತದೇಹವನ್ನು ಭುಜದ ಮೇಲೆ ಹೊತ್ತು ಕಣ್ಣೀರು ಸುರಿಸುತ್ತ ಆಸ್ಪತ್ರೆಯಿಂದ ಹೊರ ಬಂದರು.ವಿಧಿಯಿಲ್ಲದೆ ತಂದೆ ಶವವನ್ನು ಬೈಕ್ ನಲ್ಲೇ ತೆಗೆದುಕೊಂಡು ಮನೆಗೆ ಹೋಗಿದ್ದಾರೆ.

ವೈದ್ಯರಿಗೆ ಹಿಡಿಶಾಪ:

ಇಂತಹ ಪರಿಸ್ಥಿತಿ ಮತ್ತೊಬ್ಬರಿಗೆ ಬರಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರಿಗೆ ಬದುಕಿದ್ದಾಗ ಉತ್ತಮ ಚಿಕಿತ್ಸೆ ಸಿಗುವುದಿಲ್ಲ. ಸತ್ತಮೇಲಾದರೂ ಕನಿಷ್ಠ ಸೌಲಭ್ಯ ಕೊಡಿ. ನೀವು ಮನುಷ್ಯರು ಎಂಬುವುದನ್ನು ಮರೆಯದಿರಿ ಎಂದು ಆಸ್ಪತ್ರೆಯಲ್ಲಿ ನೆರೆದಿದ್ದವರು ಆಂಬುಲೆನ್ಸ್ ವ್ಯವಸ್ಥೆ ಮಾಡದ ಸಿಬ್ಬಂದಿ, ವೈದ್ಯರಿಗೆ ಹಿಡಿಶಾಪ ಹಾಕಿದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ