The cricketing world is heartbroken by the game of a 14-year-old boy

14 ವರ್ಷದ ಹುಡಗನ ಆಟಕ್ಕೆ ಮನಸೋತ ಕ್ರಿಕೆಟ್ ಜಗತ್ತು

14 ವರ್ಷದ ಹುಡಗನ ಆಟಕ್ಕೆ ಮನಸೋತ ಕ್ರಿಕೆಟ್ ಜಗತ್ತು

ಜೈಪುರ್: ರಾಜಸ್ಥಾನ ರಾಯಲ್ಸ್‌ನ 14 ವರ್ಷದ ಆಟಗಾರ ವೈಭವ್ ಸೂರ್ಯವಂಶಿ ಅವರ ಅದ್ಭುತ ಆಟಕ್ಕೆ ಕ್ರಿಕೆಟ್‌ ಜಗತ್ತು ಮನಸೋತಿದೆ. ಕೇವಲ 14 ವರ್ಷದ ವೈಭವ್ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕ ಗಳಿಸಿ ಎಲ್ಲರ ಗಮನ ಸೆಳೆದರು. ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆದ ಗುಜರಾತ್‌ ಟೈಟನ್ಸ್‌ ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳ ನಡುವಿನ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್‌ ಟೈಟನ್ಸ್‌ ಶುಭ್‌ಮನ್‌ ಗಿಲ್‌ ಹಾಗೂ ಜೋಸ್‌ ಬಟ್ಲರ್‌ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 209 ರನ್‌ ಕಲೆಹಾಕಿತು.

210 ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್‌ ರಾಯಲ್ಸ್‌ ಗೆ ವೈಭವ್ ಸೂರ್ಯವಂಶಿ ಅಬ್ಬರದ ಶತಕ, ಯಶಸ್ವಿ ಜೈಸ್ವಾಲ್‌ ಹಾಗೂ ರಿಯಾನ್‌ ಪರಾಗ್‌ ಅಬ್ಬರದ ಅಜೇಯ ಆಟದ ನೆರವಿನಿಂದ 15.5 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 212 ರನ್‌ ಬಾರಿಸಿ ಇನ್ನೂ 25 ಎಸೆತಗಳಿರುವಾಗಲೇ ಗೆಲುವು ದಾಖಲಿಸಿತು.

ವೈಭವ್‌ ಸೂರ್ಯವಂಶಿ ಕೇವಲ 35 ಎಸೆತಗಳಲ್ಲಿ 7 ಬೌಂಡರಿ ಹಾಗೂ 11 ಸಿಕ್ಸರ್‌ ಸಹಿತ ಶತಕ ಪೂರೈಸಿ 38 ಎಸೆತಗಳಲ್ಲಿ 101 ರನ್‌ ಗಳಿಸಿ ಔಟ್‌ ಆದರು. ಕಡಿಮೆ ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವೈಭವ್ ಐಪಿಎಲ್‌ನಲ್ಲಿ ಎರಡನೇ ಅತಿವೇಗದ ಶತಕ ಬಾರಿಸಿದ ದಾಖಲೆ ಬರೆದರು. ಐಪಿಎಲ್‌ನಲ್ಲಿ ಅತಿವೇಗದ ಶತಕ ಬರೆದ ಭಾರತೀಯ ಆಟಗಾರ ಎಂಬ ದಾಖಲೆಗೆ ಪಾತ್ರರಾದರು. 2010 ರಲ್ಲಿ ಯೂಸುಫ್‌ ಪಠಾಣ್‌ ಮುಂಬೈ ಇಂಡಿಯನ್ಸ್‌ ವಿರುದ್ಧ ನಡೆದಿದ್ದ ಪಂದ್ಯದಲ್ಲಿ 37 ಎಸೆತಗಳಲ್ಲಿ ಶತಕ ಬಾರಿಸಿ ಐಪಿಎಲ್‌ನಲ್ಲಿ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರ. 35 ಎಸೆತಗಳಲ್ಲಿ ಶತಕ ಬಾರಿಸಿರುವ ವೈಭವ್‌ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಯೂಸುಫ್‌ ಪಠಾಣ್‌ ʼಐಪಿಎಲ್‌ನಲ್ಲಿ ವೇಗದ ಶತಕ ಬಾರಿಸಿದ ಭಾರತೀಯ ಎಂಬ ನನ್ನ ದಾಖಲೆ ಮುರಿದದ್ದಕ್ಕೆ ಅಭಿನಂದನೆಗಳು. ಅದೂ ಸಹ ರಾಜಸ್ಥಾನ್‌ ರಾಯಲ್ಸ್‌ ಪರ ಆಡುವಾಗ ಬಂದದ್ದು ನಾನು ಬಾರಿಸಿದಂತೆಯೇ ಅನುಭವವಾಗುತ್ತಿದೆ. ಈ ಫ್ರಾಂಚೈಸಿಯಲ್ಲಿ ಯುವ ಪ್ರತಿಭೆಗಳಿಗೆ ಅದೇನೋ ಮ್ಯಾಜಿಕ್‌ ಇದೆ. ಒಳ್ಳೆಯದಾಗಲಿ ಚಾಂಪ್‌ʼ ಎಂದು ಬರೆದುಕೊಂಡಿದ್ದಾರೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ