ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು ನೆರಬೆಂಚಿ ಗ್ರಾಮದ ವೇ.ಸಂಗಯ್ಯ ಹಾಲಗಂಗಾಧರಮಠ ಹೇಳಿದರು.

ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನಲ್ಲಿ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಿಕ್ಷಣ ಕ್ಷೇತ್ರ ಇಂದು ವ್ಯಾಪಾರೀಕರಣಗೊಂಡಿದೆ.ಎಲ್.ಕೆ.ಜಿ.ಯುಕೆಜಿ ಮಕ್ಕಳಿಗೆ 50-60 ಸಾವಿರ ರೂ.ಶುಲ್ಕ ವಸೂಲಿ ಮಾಡುವ ಮೂಲಕ ಶಿಕ್ಷಣ ದುಬಾರಿಯೆನ್ನುವ ಭಾವನೆಯನ್ನು ಉಳ್ಳವರು ಪ್ರದರ್ಶನ ಮಾಡುತ್ತಿದ್ದಾರೆ.ಬಡ.ಮಧ್ಯಮ ವರ್ಗದ ಮಕ್ಕಳಿಗೆ ಶಿಕ್ಷಣ ಕೈಗೆಟುಕಬೇಕಾದರೆ ಸಾಮಾಜಿಕ ಮನೋಭಾವ ಹೊಂದಿರುವ ಶಿಕ್ಷಣ ಸಂಸ್ಥೆಗಳಿoದ ಸಾಧ್ಯವಿದೆ ಎಂದರು.

ಪತ್ರಕರ್ತ ಶಂಕರ ಈ.ಹೆಬ್ಬಾಳ ಮಾತನಾಡಿ, ಬಡ ಮತ್ತು ಮಧ್ಯಮ ವರ್ಗದವರ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಪರಿಣಾಮಕಾರಿಯಾಗಿ ದೊರಕಿಸಲು ಪರಿಶ್ರಮ ಪಡುತ್ತಿರುವ ಶಿಕ್ಷಣ ಪ್ರೇಮಿ ವೀರೇಶ ಗುರುಮಠ ಅವರ ನೇತೃತ್ವದಲ್ಲಿ ನಡೆದಿರುವ ಶಾಲೆಯಲ್ಲಿ ಮಕ್ಕಳು ಬಾಲ್ಯವನ್ನು ಅನುಭವಿಸುವ ಜೊತೆಗೆ ಆಟವಾಡುತ್ತ ಇಲ್ಲಿ ಕಲಿಕೆ ಆಗುತ್ತಿದೆ.ಎಲ್ಲ ಶಿಕ್ಷಣ ಸಂಸ್ಥೆಗಳ ಉದ್ದೇಶ ಮಕ್ಕಳಿಗೆ ಶಿಕ್ಷಣ ಕೊಡಬೇಕು ಎಂಬುದಾಗಿದ್ದು ಪರಸ್ಪರ ಸ್ನೇಹಪರವಾದ ಸಂಬoಧ ಇರಬೇಕು.ಕಾಲು ಹಿಡಿದು ಎಳೆಯುವ ಪ್ರವೃತ್ತಿ ಶಿಕ್ಷಣ ಸಂಸ್ಥೆಗಳ ಮಧ್ಯೆ ಇರಬಾರದು ಎಂದರು.

ಸಂಸ್ಥೆಯ ಕಾರ್ಯಾಧ್ಯಕ್ಷ ವೀರೇಶ ಗುರುಮಠ ಮಾತನಾಡಿ, ಹಲವಾರು ಸಂಕಷ್ಟಗಳ ಮಧ್ಯೆ ಶಾಲೆಯನ್ನು ಮುನ್ನಡೆಸಿದ್ದು ಅದಕ್ಕೆ ಸಹಕಾರಿಯಾಗಿರುವವರನ್ನು ಸ್ಮರಿಸಿದರು
.
ಫಕೀರೇಶ್ವರ ಡಯಗ್ನೂಸ್ಟಿಕ್ ಸೆಂಟರ್‌ನ ಡಾ.ಚಂದ್ರಶೇಖರ ಶಿವಯೋಗಿಮಠ, ಹುಲ್ಲೂರಿನ ನ್ಯಾಶನಲ್ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ,ಎA.ಜಿ.ಎA.ಕೆ ಕಾಲೇಜಿನ ಉಪನ್ಯಾಸಕಿ Vijayalaxmi ಪಾಟೀಲ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಶಿವಕುಮಾರ ಬಿಜಾಪೂರ, ಡಾ.ಹಣಮಂತ ತಿಡಗುಂದಿ,ನಿವೃತ್ತ ಶಿಕ್ಷಕ ಹಣಮಂತ ವಡಗೇರಿ,ಮಲ್ಲಿಕಾರ್ಜುನ ಪೋಲೇಶಿ,ಜ್ಯೋತಿ ಮಠಪತಿ,ಮಾರ್ಗದರ್ಶಕ ಶಿವಯ್ಯ ಗುರುಮಠ, ಮುಖ್ಯಗುರುಮಾತೆ ಪುಷ್ಪಾ ಗುರುಮಠ ಇದ್ದರು.ಸಂಗಮೇಶ ಶಿವಣಗಿ ಪ್ರಾರ್ಥಿಸಿದರು.ಬಸವರಾಜ ನಾಯಕ ನಿರೂಪಿಸಿದರು. ಬಸವರಜ ಕತ್ತಿ ವಂದಿಸಿದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ