ಆ.14ರಂದು ಸಭೆ.. ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ನಡೆದ ರೈತರ ಪ್ರತಿಭಟನೆ ಯಶಸ್ವಿ

ಆ.14ರಂದು ಸಭೆ.. ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ನಡೆದ ರೈತರ ಪ್ರತಿಭಟನೆ ಯಶಸ್ವಿ


ಮುಧೋಳ : ಘಟಪ್ರಭಾ ನದಿ‌ ಪ್ರವಾಹಕ್ಕೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಸೋಮವಾರ ನಡೆದ ರೈತರ ಪ್ರತಿಭಟನೆ (farmers protest) ಯಶಸ್ವಿಯಾಯಿತು.


ಬೆಳಗ್ಗೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಯಾದವಾಡ ವೃತ್ತಕ್ಕೆ ಆಗಮಿಸಿ ಜಮಖಂಡಿ-ಧಾರವಾಡ ರಾಜ್ಯ ಹೆದ್ದಾರಿ ಸಂಪರ್ಕ‌ ಅ್ಥಗಿತಗೊಳಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

Join Our Telegram: https://t.me/dcgkannada


ಈ ವೇಳೆ ಮಾತಾನಾಡಿದ ಬಸವಂತ ಕಾಂಬಳೆ, ಜನಪ್ರತಿನಿಧಿಗಳಾದವರು ಜನರ ಸಮಸ್ಯೆ ಆಲಿಸುವ ಕೆಲಸ ಮಾಡಬೇಕು. ನೆರೆಯಲ್ಲಿ ಮನೆ, ಬೆಳೆ ಕಳೆದುಕೊಂಡ ಸಂತ್ರಸ್ಥರಿಗೆ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಪರಿಕ್ಷರಣೆ ಮಾಡಬೇಕು. ಇದರಿಂದ ಹೆಚ್ಚಿನ ಪರಿಹಾರ ಒದಗಿಸಿ ಸಂತ್ರಸ್ಥರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.


ಪ್ರವಾಹದಿಂದ ಜನರ ಬದುಕು ಬೀದಿಗೆ ಬಿದ್ದಿದೆ. ಜನಪ್ರತಿನಿಧಿಗಳಾದವರು ನಮ್ಮ ಸಮಸ್ಯೆ ಬಗ್ಗೆ ವಿಧಾನಸೌಧದಲ್ಲಿ ಬೆಳಕು ಚೆಲ್ಲುವ ಕೆಲಸ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ


ಸರ್ಕಾರ ಕೂಡಲೇ ನಮ್ಮ ಅಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ‌ ನಮ್ಮ ಹೋರಾಟ ಉಗ್ರರೂಪ‌ ಪಡೆಯಲಿದೆ ಎಂದು ಎಚ್ಚರಿಸಿದರು.


ರೈತಮುಖಂಡ ದುಂಡಪ್ಪ ಲಿಂಗರಡ್ಡಿ ಮಾತನಾಡಿ, ಮುಧೋಳ ತಾಲೂಕಿನಲ್ಲಿ‌ ಘಟಪ್ರಭಾ ಪ್ರವಾಹದಿಂದ ಪ್ರತಿವರ್ಷ ಬೆಳೆಹಾನಿಯುಂಟಾಗುತ್ತಿದೆ. ಸರ್ಕಾರ ನಮ್ಮ ತಾಲೂಕಿನ ಪ್ರವಾಹಪೀಡಿತ ಹಳ್ಳಿಗಳನ್ನು ಮುಳುಗಡೆ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.


ಪ್ರವಾಹದಲ್ಲಿ ಹಾನಿಯಾದ ಕಬ್ಬು ಬೆಳೆಗೆ ಎಕರೆಗೆ 1ಲಕ್ಷ ಹಾಗೂ ಇತರೆ ಬೆಳೆಗೆ 50ಸಾವಿರ ರೂ. ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.
ವೆಂಕಣ್ಣ ಮಳಲಿ‌ ಮಾತನಾಡಿ, ಪ್ರವಾಹ ಸಮಸ್ಯೆ ಬಹಳ ವರ್ಷಗಳಿಂದ ನಮ್ಮನ್ನು ಬಾಧಿಸುತ್ತಿದೆ. ಮುಖ್ಯಮಂತ್ರಿಗಳು ಮುಧೋಳಕ್ಕೆ‌ ಆಗಮಿಸಿ ಸಮಸ್ಯೆಯನ್ನು ಕಣ್ಣಾರೆ ನೋಡಿ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು ಎಂದರು.


ಹೋರಾಟದ ನಾಡಾಗಿರುವ ಮುಧೋಳದಲ್ಲಿ‌ ರೈತ ಮುಖಂಡ ರಮೇಶ ಗಡದನ್ನವರ ರೈತರಿಗೆ ಹೋರಾಟದ ಹೊಸ ರೂಪುರೇಷೆ ಹಾಕೊಕೊಟ್ಟಿದ್ದಾರೆ. ನಾವೆಲ್ಲರು ಅವರ ಮಾರ್ಗದರ್ಶನದಲ್ಲಿ ನಿರಂತರವಾಗಿ ಹೋರಾಟ ಮಾಡುತ್ತ ನಮಗೆ ಸಿಗಬೇಕಾದ ನ್ಯಾಯ ದೊರೆಕಿಸಿಕೊಳ್ಳೋಣ ಎಂದರು.


ಜಿಲ್ಲಾಧಿಕಾರಿ ಭೇಟಿ : ರೈತರ ಪ್ರತಿಭಟನೆ (farmers protest) ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ರೈತರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿದ ಅವರು, ಶಾಶ್ವರ ಪರಿಹಾರಕ್ಕಾಗಿ ಮುಂದಿಟ್ಟರುವ ನಿಮ್ಮ‌ ಬೇಡಿಕೆ ಪರಿಗಣಿಸಿ ಮುಧೋಳ ತಾಲೂಕಿನ 34 ಹಳ್ಳಿಗಳ ಕುರಿತು ಸರ್ವೇ ನಡೆಸಿ ಯಾವ ಗ್ರಾಮಗಳು ಸ್ಥಳಾಂತರಕ್ಕೆ ಅರ್ಹವಾಗಿವೆ ಎಂಬುದರ ಬಗ್ಗೆ ಸರ್ವೇ ನಡೆಸಿ ವರದಿ ಕೊಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುತಗತೇನೆ ಎಂದು ಭರವಸೆ ನೀಡಿದರು.


ಇನ್ನು ಎನ್ ಡಿಆರ್ ಎಫ್ ಹಾಗೂ ಎಸ್ ಡಿಆರ್ ಎಫ್ ಪರಿಹಾರ ಪರಿಷ್ಕರಣೆ ಕಾರ್ಯ ಸರ್ಕಾರದಮಟ್ಟದಲ್ಲಿ ಆಗಬೇಕು. ಆದರೂ ನಿಮ್ಮ ಬೇಡಿಕೆ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳ‌‌ ಮಾತಿಗೆ ತೃಪ್ತರಾಗದ ಹೋರಾಟಗಾರರು ಜಿಲ್ಲಾ ಉಸ್ತುವಾರಿ ಸಚಿವರು ನಮ್ಮೊಂದಿಗೆ ಮಾತನಾಡಬೇಕು ಸಭೆ ನಡೆಸಿ‌ ನಮ್ಮ ಸಮಸ್ಯೆ ಆಲಿಸಬೇಕು ಎಂದು ಪಟ್ಟು‌ಹಿಡಿದರು. ಈ ವೇಳೆ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರೊಂದಿಗೆ ದೂರವಾಣಿ‌ ಮೂಲಕ‌ ಮಾತನಾಡಿ‌ ರೈತರ ಬೇಡಿಕೆ ಬಗ್ಗೆ ಮನವರಿಕೆ‌ ಮಾಡಿಕೊಟ್ಟರು.


ಸಚಿವರು ಆ.14ರಂದು ರೈತರೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಿದರು. ಸಚಿವರ ಮಾತಿಗೆ ಮನ್ನಣೆ ನೀಡಿದ ಹೋರಾಟಗಾರರು ಆ.14ರವರೆಗೆ ಹೋರಾಟವನ್ನು‌ ಮುಂದೂಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್ ವಿನೋದ ಹತ್ತಳ್ಳಿ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳು ಇದ್ದರು.

ಇದನ್ನೂ‌ ಓದಿ: Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)


ಸುಭಾಷ ಶಿರಬೂರ, ಹನಮಂತ ಅಡವಿ, ದುಂಡಪ್ಪ ಲಿಗರಡ್ಡಿ, ದುಂಡಪ್ಪ ಯರಗಟ್ಟಿ, ನಾಗಪ್ಪ ಅಂಬಿ, ಸದಪ್ಪ ತೇಲಿ, ಯಲ್ಲಪ್ಪ‌ ಲೋಗಾವಿ, ಮುತ್ತಪ್ಪ‌ ಕೋಮಾರ, ಸಂಗಣ್ಣ ಕಾತರಕಿ, ಪರಶು ನಿಗಡೆ, ಬಂಡು ಘಾಟಗೆ ಸೇರಿದಂತೆ ಇತರರು ಹೋರಾಟದಲ್ಲಿ‌ ಪಾಲ್ಗೊಂಡಿದ್ದರು.


ಹೆಚ್ಚವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿತ್ತು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ