ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆ ಓಲ್ಡ್ ಈಸ್ ಗೋಲ್ಡ್ : ಮತ್ತೆ ಹಳೆಯ ಪೆನಲ್‌ಗೆ ಎಳ್ಳ ಅಮವಾಸ್ಯೆ ಶೇಂಗಾ ಹೋಳಿಗೆ..!

ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆ ಓಲ್ಡ್ ಈಸ್ ಗೋಲ್ಡ್ : ಮತ್ತೆ ಹಳೆಯ ಪೆನಲ್‌ಗೆ ಎಳ್ಳ ಅಮವಾಸ್ಯೆ ಶೇಂಗಾ ಹೋಳಿಗೆ..!

HEBBAL PUBLICITY

ಮುದ್ದೇಬಿಹಾಳ : ಪ್ರತಿಷ್ಠಿತ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆಯಲ್ಲಿ ಮತ್ತೆ ಹಳೆಯ ಪೆನಲ್‌ಗೆ ಭರ್ಜರಿ ಗೆಲುವು ದೊರಕಿದ್ದು ಬ್ಯಾಂಕಿನ ಮತದಾರರು ಓಲ್ಡ್ ಈಸ್ ಗೋಲ್ಡ್ ಪೆನಲ್‌ಗೆ ಶೇಂಗಾ ಹೋಳಿಗೆಯ ಸಿಹಿ ನೀಡಿದ್ದಾರೆ.

ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಶಾಲೆಯಲ್ಲಿ ರವಿವಾರ ನಡೆದ ಮತದಾನ ಪ್ರಕ್ರಿಯೆ ತೀವ್ರ ಪೊಲೀಸ್ ಭದ್ರತೆಯಲ್ಲಿ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಿತು.ಸಂಜೆ ಮತ ಎಣಿಕೆ ಆರಂಭಗೊAಡಾಗ ನಿರೀಕ್ಷಿತ ಗೆಲುವಿನ ಆತ್ಮವಿಶ್ವಾಸದಲ್ಲಿದ್ದ ಅಭ್ಯರ್ಥಿಗಳ ಚಿತ್ತ ಫಲಿತಾಂಶದತ್ತ ನೆಟ್ಟಿತ್ತು.
ಒಟ್ಟು ಬ್ಯಾಂಕಿನ 4115 ಮತದಾರರಲ್ಲಿ 2391 ಜನ ತಮ್ಮ ಹಕ್ಕು ಚಲಾಯಿಸಿದ್ದು ಅದರಲ್ಲಿ ಸಾಮಾನ್ಯ ವರ್ಗದ ಏಳು ಸ್ಥಾನಗಳಿಗೆ ಒಂಭತ್ತು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಹಳೆಯ ಪೆನಲ್‌ದಿಂದ ಕಣಕ್ಕಿಳಿದಿದ್ದ ಸಾಮಾನ್ಯ ವರ್ಗದಿಂದ ಪ್ರಭುರಾಜ ಕಲ್ಬುರ್ಗಿ 1333, ಸತೀಶಕುಮಾರ ಓಸ್ವಾಲ್ 1274, ನಿಂಗಪ್ಪ ಚಟ್ಟೇರ 1268, ರಾಜಶೇಖರ ಕರಡ್ಡಿ 1265, ಅಜೀತ ನಾಗಠಾಣ 1113, ಸಂಗನಗೌಡ ಬಿರಾದಾರ 1092, ಚಂದ್ರಶೇಖರ ಸಜ್ಜನ 998 ಅತೀ ಹೆಚ್ಚು ಮತಗಳನ್ನು ಪಡೆದುಕೊಂಡು ಆಯ್ಕೆಯಾದರೆ, ವೆಂಕನಗೌಡ ಪಾಟೀಲ್ 741 , ಸಂಗಪ್ಪ ನಾಶಿ 644, ಮಹಾಂತಗೌಡ ಪಾಟೀಲ್ 344, ಭೀಮನಗೌಡ ಪಾಟೀಲ 341 ಮತಗಳನ್ನು ಪಡೆದುಕೊಂಡು ಸೋಲನುಭವಿಸಿದರು.

ಹಿಂದುಳಿದ ಅ ವರ್ಗದಿಂದ ಚೆನ್ನಪ್ಪಗೌಡ ಬಿರಾದಾರ 1087 ಮತಗಳನ್ನು ಪಡೆದು ಆಯ್ಕೆಯಾದರೆ ರವೀಂದ್ರ ಬಿರಾದಾರ 350, ಪ್ರದೀಪ ಹೂಗಾರ 175, ವಿಜಯಕುಮಾರ ಬಡಿಗೇರ 68 ಮತಗಳನ್ನು ಪಡೆದು ಸೋಲನುಭವಿಸಿದರು. ಹಿಂದುಳಿದ ಬ ವರ್ಗದಿಂದ ಸ್ಪರ್ಧಿಸಿದ್ದ ಗುರುಲಿಂಗಪ್ಪಗೌಡ ಪಾಟೀಲ್ 948 ಮತಗಳನ್ನು ಪಡೆದು ಆಯ್ಕೆಯಾದರೆ ಅವರ ಪ್ರತಿಸ್ಪರ್ಧಿ 820 ಮತಗಳನ್ನು ಪಡೆದು ಸೋಲು ಅನುಭವಿಸಿದರು.
ಒಂದು ಹಂತದಲ್ಲಿ ಈ ವರ್ಗದ ಫಲಿತಾಂಶ ವಿಳಂಬವಾದಾಗ ಹಳೆಯ ಹಾಗೂ ಹೊಸದಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಗಳಲ್ಲಿ ಚಡಪಡಿಕೆ ಕಂಡು ಬಂದಿತು. ನಾಮಪತ್ರ ಹಿಂದಕ್ಕೆ ಪಡೆಯುವ ದಿನದಂದು ಒಟ್ಟು ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಅದರಲ್ಲಿ ಮಹಿಳಾ ವರ್ಗದಿಂದ Vijayalaxmi Budihalamath , ರಕ್ಷಿತಾ ಬಿದರಕುಂದಿ, ಪರಿಶಿಷ್ಟ ಜಾತಿ ವರ್ಗದಿಂದ ಶ್ರೀಕಾಂತ ಚಲವಾದಿ, ಪರಿಶಿಷ್ಟ ಪಂಗಡ ಸ್ಥಾನದಿಂದ ಶ್ರೀಶೈಲ ಪೂಜಾರಿ ಆಯ್ಕೆಯಾಗಿದ್ದರು.

ಚುನಾವಣಾಧಿಕಾರಿ ವಿಜಯಕುಮಾರ ಉತ್ನಾಳ, ಸಹಾಯಕ ಚುನಾವಣಾಧಿಕಾರಿ ಎಸ್.ಜಿ.ಕೂಡಗಿ, ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಸಹಾಯಕ ವ್ಯವಸ್ಥಾಪಕಿ ಸುಮಾ ನಾಗಠಾಣ ಕಾರ್ಯನಿರ್ವಹಿಸಿದರು.


ವಿಜಯೋತ್ಸವ :
ಹಳೆಯ ಪೆನಲ್‌ಗೆ ಭರ್ಜರಿ ಗೆಲುವು ಪಕ್ಕಾ ಆಗುತ್ತಿದ್ದಂತೆ ಹರ್ಷಗೊಂಡ ನೂತನ ಸದಸ್ಯರೆಲ್ಲರೂ ವಿಜಯೋತ್ಸವ ಆಚರಿಸಿದರು.ಪರಸ್ಪರ ಗುಲಾಲು ಎರಚಾಡಿಕೊಂಡು ಒಬ್ಬರನ್ನೊಬ್ಬರು ಎತ್ತಿಕೊಂಡು ಖುಷಿ ಹಂಚಿಕೊAಡರು.ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬ್ಯಾಂಕಿನ ನೂತನ ನಿರ್ದೇಶಕ ಸತೀಶಕುಮಾರ ಓಸ್ವಾಲ್ ಮಾತನಾಡಿ, ಇದು ನಮ್ಮ ಗೆಲುವು ಅಲ್ಲ.ಊರಿನ ಹಿರಿಯರ ಗೆಲುವು.ಅವರ ಆಶೀರ್ವಾದದಿಂದ ಮತ್ತೆ ಬ್ಯಾಂಕಿನ ಚುಕ್ಕಾಣಿ ಹಳೆಯ ಪೆನಲ್‌ಗೆ ಬರುವಂತಾಗಿದೆ.ನಮ್ಮ ಪೆನಲ್‌ದ ಎಲ್ಲ ಅಭ್ಯರ್ಥಿಗಳು ಜಯಭೇರಿ ಸಾಧಿಸಿರುವುದರ ಹಿಂದೆ ಕೆಲಸ ಮಾಡಿರುವ ಎಲ್ಲರಿಗೂ ಅಭಿನಂದಿಸುವುದಾಗಿ ಹೇಳಿದರು.
ಮುಖಂಡ ಎಂ.ಬಿ.ನಾವದಗಿ ಮಾತನಾಡಿ, ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಚುನಾವಣೆಯಲ್ಲಿ ಆಯ್ಕೆಯಾಗಿರುವ ಎಲ್ಲ ನೂತನ ನಿರ್ದೇಶಕರುಗಳಿಗೆ ಅಭಿನಂದಿಸುತ್ತಾ ಬ್ಯಾಂಕು ಇನ್ನಷ್ಟು ಪ್ರಗತಿಯತ್ತ ಸಾಗುವಂತಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗಣ್ಯರಾದ ಎ.ಗಣೇಶ ನಾರಾಯಣಸ್ವಾಮಿ, ದಾನಪ್ಪ ನಾಗಠಾಣ, ಶರಣು ಸಜ್ಜನ, ಸಿಕಂದರ್ ಜಾನ್ವೇಕರ,ಸುರೇಶಗೌಡ ಪಾಟೀಲ್, ಮಹಾಂತೇಶ ಬೂದಿಹಾಳಮಠ,ಅಶೋಕ ಚಟ್ಟೇರ,ಸತೀಶ ಕುಲಕರ್ಣಿ,ಮುತ್ತಣ್ಣ ಕಡಿ ಹಾಗೂ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳು, ಅವರ ಬೆಂಬಲಿಗರು ಇದ್ದರು.


ಭಾರೀ ಪೊಲೀಸ್ ಭದ್ರತೆ: ಬ್ಯಾಂಕಿನ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಚುನಾವಣೆಗಾಗಿ ಅತೀ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು.ಮತದಾನದ ವೇಳೆ ಪಿಎಸ್‌ಐ ಸಂಜಯ ತಿಪರೆಡ್ಡಿ, ತಾಳಿಕೋಟಿ ಪಿಎಸ್‌ಐ ರಾಮನಗೌಡ ಸಂಕನಾಳ,25ಕ್ಕೂ ಹೆಚ್ಚು ಪೊಲೀಸರು ಭದ್ರತೆ ಉಸ್ತುವಾರಿ ವಹಿಸಿದ್ದರು.


ಕೋರ್ಟ್ ಆದೇಶಕ್ಕೆ ಬದ್ಧರಾಗಿ ಮತಗಳನ್ನು ಅನುಮತಿಪಡೆದುಕೊಂಡು ಬಂದಿದ್ದ 1713 ಮತಗಳ ಫಲಿತಾಂಶವನ್ನು ನ್ಯಾಯಾಲಯದ ಆದೇಶಕ್ಕೆ ಒಳಪಟ್ಟು ಫಲಿತಾಂಶ ಪ್ರಕಟಿಸದೇ ಗೌಪ್ಯವಾಗಿಡಲಾಗಿದೆ ಎಂದು ಚುನಾವಣಾಧಿಕಾರಿ ವಿಜಯಕುಮಾರ ಉತ್ನಾಳ ತಿಳಿಸಿದರು.
ಮತ ಹಾಕುವಲ್ಲಿ ಎಡವಿದ ಗ್ರಾಹಕರು : ಸಾಮಾನ್ಯ ವರ್ಗದಿಂದ 86, ಹಿಂದುಳಿದ ಅ ವರ್ಗದಲ್ಲಿ 274, ಹಿಂದುಳಿದ ಬ ವರ್ಗದಿಂದ 224 ಮತಗಳು ತಿರಸ್ಕೃತಗೊಂಡಿದ್ದು ನೋಡಿದರೆ ಮತ ಚಲಾಯಿಸುವಲ್ಲಿ ಗ್ರಾಹಕರು ಗೊಂದಲಕ್ಕೆ ಒಳಗಾದವರಂತೆ ಕಂಡು ಬಂದಿತು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು