The land records given to lease were altered and purchased by crooks: Veeranna Charantimath accused

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

ಹುನಗುಂದ: ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಶಾಲೆಯ ಆವರಣಕ್ಕೆ 99 ವರ್ಷ ಮೂರು ಎಕರೆ ಆರು ಗುಂಟೆ ಲೀಸ್ ನೀಡಿದ ಜಾಗೆಯನ್ನು ಖಾಸಗಿ ಇಬ್ಬರು ವ್ಯಕ್ತಿಗಳು ಅಧಿಕಾರ ದುರಪಯೋಗ ಪಡಿಸಿಕೊಂಡು ಲೀಸ್ ಅಂತ ಇದ್ದಿದನ್ನು ಅಳಿಸಿ ಖುಷ್ಕಿ ಜಮೀನು ಅಂತ ಜಾಗೆಯನ್ನು ಖರೀದಿ ಮಾಡಿಕೊಂಡಿದ್ದಾರೆ ಎಂದು ವಿ.ಮ.ವಿ.ವ ಸಂಘದ ಕಾಯಾಧ್ಯಕ್ಷ ವೀರಣ್ಣ ಚರಂತಿಮಠ ಆರೋಪಿಸಿದರು.

Join Our Telegram: https://t.me/dcgkannada

ಪಟ್ಟಣದ ವಿ.ಮ.ವಿ.ವ ಸಂಘದ ಕಾರ್ಯಾಲಯದಲ್ಲಿ ಗುರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಲಕಲ್ಲ ವಿಜಯ ಮಹಾಂತೇಶ ಸ್ವಾಮಿಗಳು ಅದರ ಅಧ್ಯಕ್ಷತೆಯಲ್ಲಿ ಮಾರ್ಗದರ್ಶನದಲ್ಲಿ ಈ ಸಂಸ್ಥೆಯು ನಡೆಯುತ್ತಿದ್ದು, ನೂರಾರು ವರ್ಷಗಳ ಇತಿಹಾಸ ಹೊಂದಿದ ಈ ಸಂಸ್ಥೆ ಒಂದು ಸಾರ್ವಜನಿಕವಾದ ಈ ಸಂಸ್ಥೆಯಾಗಿದೆ ಎಂದರು.

ನಾಲ್ಕು ಕ್ಯಾಂಪಸ್‌ಗಳನ್ನು ಹೊಂದಿದ್ದು ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘಕ್ಕೆ 99 ವರ್ಷಗಳ ವರೆಗೆ ಲೀಸ್ ನೀಡಿದ ಬಿಂದುರಾವ್ ಕುಲಕರ್ಣಿ ನೀಡಿದ ರಿ.ಸ.ನಂ ೪೫೮/೧ ಕ್ಷೇತ್ರ ೩ ಎಕರೆ ೬ ಗುಂಟೆ ಮೊದಲು ಲೀಸ್ ಜಮೀನು ಇದ್ದು, ಶಾಲೆಯ ಆಟದ ಮೈದಾನ ಎಂದು ನೊಂದನೆಯಾಗಿದೆ ಎಂದರು.

ಕುಲಕರ್ಣಿಯವರ ಕುಟುಂಬಸ್ಥರು ನಾಲ್ಕು ಜನರು ಸಂಸ್ಥೆಗೆ ೨೦೦೧ ರಲ್ಲಿ ೫೦ ಸಾವಿರವನ್ನು ತೆಗೆದುಕೊಂಡು ಸಂಸ್ಥೆಗೆ ಬಿಟ್ಟು ಕೊಟ್ಟಿದ್ದಾರೆ. ಇದರ ಮಧ್ಯೆ ಇಬ್ಬರು ಖಾಸಗಿ ವ್ಯಕ್ತಿಗಳು ಇನ್ನೂ ೨೨ ವರ್ಷ ಲೀಸ್ ಇದ್ದರೂ ಈ ರೀತಿಯಾಗಿ ಉದ್ದಟತನದ ಕೆಲಸವನ್ನು ಮಾಡಿದ್ದಾರೆ ಎಂದು ಆರೋಪಿಸಿದರು.

ಕೋರ್ಟನಲ್ಲಿ ರಾಜೀಯಾಗಿ ಡಿಗ್ರಿಯಾಗಿದೆ. ಸಂಸ್ಥೆಯ ಆವರಣ ಅಂತ ಆಗಿದೆ. ಅಧಿಕಾರ ಇದೆ ಅಂತ ಯಾವುದೇ ಉದ್ದಟತನ ಕೆಲಸವನ್ನು ಯಾರೂ ಮಾಡಬಾರದು ಈಗಾಗಲೇ ಕರ್ನಾಟಕ ಹೈಕೋಟ್ ತಡೆಯಾಜ್ಞೆಯನ್ನು ನೀಡಿದೆ ಎಂದು ಹೇಳಿದರು.

ಸಂಸ್ಥೆಯ ನಿರ್ದೇಶಕರಿಗೆ ಇಬ್ಬರಿಗೆ ಬೋಗಸ್ ಅಟ್ರಾಸಿಟಿ ಕೇಸ್ ಅವರು ಮಾಡಲಾಗಿದ್ದು. ಬೋಗಸ್ ಇದ್ದಾಗ ಯಾರನ್ನು ಅರೆಸ್ಟ್ ಮಾಡಲು ಬರುವುದಿಲ್ಲ ಕಾನೂನು ಕೇಳಿದ್ದೇವೆ. ಗುರವಾರ ರಾತ್ರಿ ಏಕಾಏಕಿಯಾಗಿ ಶಾಲೆಯ ಕೌಂಪೋಡನ್ನು ಎರಡು ಜೆಸಿಬಿ ಮತ್ತು ಹಿಟ್ಯಾಚಿಯಿಂದ ನಂಬರ ಪ್ಲೇಟ್ ತೆಗೆದು ಕೌಂಪೋಡ್ ಒಡೆಯುವ ಕೆಲಸವನ್ನು ಮಾಡಿದ್ದಾರೆ ಎಂದರು.

ಅವರ ಮೇಲೆ ನೂರಕ್ಕೆ ನೂರರಷ್ಟು ಮಾನನಷ್ಟ ಮೊಕದ್ದಮೆ ಕೇಸ್ ಹಾಕುತ್ತೇವೆ. ನ್ಯಾಯಾಲಯದ ತಡೆಯಾಜ್ಞೆ ಇರುವಾಗ ಈ ರೀತಿಯಾಗಿ ಮಾಡಿದಾಗ ಅವರ ಮೇಲೆ ಸೂಕ್ತ ಕ್ರಮವಹಿದ್ದೇವೆ ಎಂದರು.

ಅಧಿಕಾರಿಗಳು ಯಾರದೋ ಮಾತು ಕೇಳಿ ಕಾನೂನು ಬಿಟ್ಟು ಕೆಲಸ ಮಾಡಿದರೆ, ಅವರ ಮೇಲೆಯೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಬದ್ಧವಾದ ಕೆಲಸವನ್ನು ಮಾತ್ರ ಮಾಡಬೇಕು. ಅಧಿಕಾರ ಮತ್ತು ಸರ್ಕಾರ ಇಂದು ಇರುತ್ತೇ ನಾಳೆ ಹೋಗುತ್ತೆದೆ. ಆದ್ದರಿಂದ ಅಧಿಕಾರಿಗಳು ಕಾನೂನು ಮೀರಿ ಕೆಲಸವನ್ನು ಯಾವುದೇ ಕಾರಣಕ್ಕೆ ಮಾಡಬಾರದು ಎಂದರು.

ಬೇರೆಯವರ ಮಾತು ಕೇಳಿ ಕೆಲಸವನ್ನು ಮಾಡಿದರೆ ಅಧಿಕಾರಿಗಳೇ ನೇರ ಹೋಣೆಯನ್ನು ಮಾಡಲಾಗುವುದು. ಕಾನೂನು ಬಿಟ್ಟು ನಾವು ಏನು ಮಾಡುವುದಿಲ್ಲ ಕಾನೂನು ಪ್ರಕಾರ ಕ್ರಮವಹಿಸಿ ಕೆಲ¸ವನ್ನು ಸಂಸ್ಥೆಯ ಹಿತದೃಷ್ಟಿಯಿಂದ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: Astrology: ಹಣದ ವಿಚಾರದಲ್ಲಿ ಇಂದು ನೀವು ಜಾಗರೂಕರಾಗಿ ಇರುವುದು ಉತ್ತಮ

ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ, ನಿರ್ದೇಶಕರಾದ ಅರುಣೋದಯ ದುದ್ಗಿ, ರವಿ ಹುಚನೂರ , ಬಸವರಾಜ ಕೆಂದೂರ, ಮಹಾಂತೇಶ ಕತ್ತಿ ಇತರರು ಇದ್ದರು.

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ