The land records given to lease were altered and purchased by crooks: Veeranna Charantimath accused

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

ಹುನಗುಂದ: ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಶಾಲೆಯ ಆವರಣಕ್ಕೆ 99 ವರ್ಷ ಮೂರು ಎಕರೆ ಆರು ಗುಂಟೆ ಲೀಸ್ ನೀಡಿದ ಜಾಗೆಯನ್ನು ಖಾಸಗಿ ಇಬ್ಬರು ವ್ಯಕ್ತಿಗಳು ಅಧಿಕಾರ ದುರಪಯೋಗ ಪಡಿಸಿಕೊಂಡು ಲೀಸ್ ಅಂತ ಇದ್ದಿದನ್ನು ಅಳಿಸಿ ಖುಷ್ಕಿ ಜಮೀನು ಅಂತ ಜಾಗೆಯನ್ನು ಖರೀದಿ ಮಾಡಿಕೊಂಡಿದ್ದಾರೆ ಎಂದು ವಿ.ಮ.ವಿ.ವ ಸಂಘದ ಕಾಯಾಧ್ಯಕ್ಷ ವೀರಣ್ಣ ಚರಂತಿಮಠ ಆರೋಪಿಸಿದರು.

Join Our Telegram: https://t.me/dcgkannada

ಪಟ್ಟಣದ ವಿ.ಮ.ವಿ.ವ ಸಂಘದ ಕಾರ್ಯಾಲಯದಲ್ಲಿ ಗುರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಲಕಲ್ಲ ವಿಜಯ ಮಹಾಂತೇಶ ಸ್ವಾಮಿಗಳು ಅದರ ಅಧ್ಯಕ್ಷತೆಯಲ್ಲಿ ಮಾರ್ಗದರ್ಶನದಲ್ಲಿ ಈ ಸಂಸ್ಥೆಯು ನಡೆಯುತ್ತಿದ್ದು, ನೂರಾರು ವರ್ಷಗಳ ಇತಿಹಾಸ ಹೊಂದಿದ ಈ ಸಂಸ್ಥೆ ಒಂದು ಸಾರ್ವಜನಿಕವಾದ ಈ ಸಂಸ್ಥೆಯಾಗಿದೆ ಎಂದರು.

ನಾಲ್ಕು ಕ್ಯಾಂಪಸ್‌ಗಳನ್ನು ಹೊಂದಿದ್ದು ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘಕ್ಕೆ 99 ವರ್ಷಗಳ ವರೆಗೆ ಲೀಸ್ ನೀಡಿದ ಬಿಂದುರಾವ್ ಕುಲಕರ್ಣಿ ನೀಡಿದ ರಿ.ಸ.ನಂ ೪೫೮/೧ ಕ್ಷೇತ್ರ ೩ ಎಕರೆ ೬ ಗುಂಟೆ ಮೊದಲು ಲೀಸ್ ಜಮೀನು ಇದ್ದು, ಶಾಲೆಯ ಆಟದ ಮೈದಾನ ಎಂದು ನೊಂದನೆಯಾಗಿದೆ ಎಂದರು.

ಕುಲಕರ್ಣಿಯವರ ಕುಟುಂಬಸ್ಥರು ನಾಲ್ಕು ಜನರು ಸಂಸ್ಥೆಗೆ ೨೦೦೧ ರಲ್ಲಿ ೫೦ ಸಾವಿರವನ್ನು ತೆಗೆದುಕೊಂಡು ಸಂಸ್ಥೆಗೆ ಬಿಟ್ಟು ಕೊಟ್ಟಿದ್ದಾರೆ. ಇದರ ಮಧ್ಯೆ ಇಬ್ಬರು ಖಾಸಗಿ ವ್ಯಕ್ತಿಗಳು ಇನ್ನೂ ೨೨ ವರ್ಷ ಲೀಸ್ ಇದ್ದರೂ ಈ ರೀತಿಯಾಗಿ ಉದ್ದಟತನದ ಕೆಲಸವನ್ನು ಮಾಡಿದ್ದಾರೆ ಎಂದು ಆರೋಪಿಸಿದರು.

ಕೋರ್ಟನಲ್ಲಿ ರಾಜೀಯಾಗಿ ಡಿಗ್ರಿಯಾಗಿದೆ. ಸಂಸ್ಥೆಯ ಆವರಣ ಅಂತ ಆಗಿದೆ. ಅಧಿಕಾರ ಇದೆ ಅಂತ ಯಾವುದೇ ಉದ್ದಟತನ ಕೆಲಸವನ್ನು ಯಾರೂ ಮಾಡಬಾರದು ಈಗಾಗಲೇ ಕರ್ನಾಟಕ ಹೈಕೋಟ್ ತಡೆಯಾಜ್ಞೆಯನ್ನು ನೀಡಿದೆ ಎಂದು ಹೇಳಿದರು.

ಸಂಸ್ಥೆಯ ನಿರ್ದೇಶಕರಿಗೆ ಇಬ್ಬರಿಗೆ ಬೋಗಸ್ ಅಟ್ರಾಸಿಟಿ ಕೇಸ್ ಅವರು ಮಾಡಲಾಗಿದ್ದು. ಬೋಗಸ್ ಇದ್ದಾಗ ಯಾರನ್ನು ಅರೆಸ್ಟ್ ಮಾಡಲು ಬರುವುದಿಲ್ಲ ಕಾನೂನು ಕೇಳಿದ್ದೇವೆ. ಗುರವಾರ ರಾತ್ರಿ ಏಕಾಏಕಿಯಾಗಿ ಶಾಲೆಯ ಕೌಂಪೋಡನ್ನು ಎರಡು ಜೆಸಿಬಿ ಮತ್ತು ಹಿಟ್ಯಾಚಿಯಿಂದ ನಂಬರ ಪ್ಲೇಟ್ ತೆಗೆದು ಕೌಂಪೋಡ್ ಒಡೆಯುವ ಕೆಲಸವನ್ನು ಮಾಡಿದ್ದಾರೆ ಎಂದರು.

ಅವರ ಮೇಲೆ ನೂರಕ್ಕೆ ನೂರರಷ್ಟು ಮಾನನಷ್ಟ ಮೊಕದ್ದಮೆ ಕೇಸ್ ಹಾಕುತ್ತೇವೆ. ನ್ಯಾಯಾಲಯದ ತಡೆಯಾಜ್ಞೆ ಇರುವಾಗ ಈ ರೀತಿಯಾಗಿ ಮಾಡಿದಾಗ ಅವರ ಮೇಲೆ ಸೂಕ್ತ ಕ್ರಮವಹಿದ್ದೇವೆ ಎಂದರು.

ಅಧಿಕಾರಿಗಳು ಯಾರದೋ ಮಾತು ಕೇಳಿ ಕಾನೂನು ಬಿಟ್ಟು ಕೆಲಸ ಮಾಡಿದರೆ, ಅವರ ಮೇಲೆಯೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಬದ್ಧವಾದ ಕೆಲಸವನ್ನು ಮಾತ್ರ ಮಾಡಬೇಕು. ಅಧಿಕಾರ ಮತ್ತು ಸರ್ಕಾರ ಇಂದು ಇರುತ್ತೇ ನಾಳೆ ಹೋಗುತ್ತೆದೆ. ಆದ್ದರಿಂದ ಅಧಿಕಾರಿಗಳು ಕಾನೂನು ಮೀರಿ ಕೆಲಸವನ್ನು ಯಾವುದೇ ಕಾರಣಕ್ಕೆ ಮಾಡಬಾರದು ಎಂದರು.

ಬೇರೆಯವರ ಮಾತು ಕೇಳಿ ಕೆಲಸವನ್ನು ಮಾಡಿದರೆ ಅಧಿಕಾರಿಗಳೇ ನೇರ ಹೋಣೆಯನ್ನು ಮಾಡಲಾಗುವುದು. ಕಾನೂನು ಬಿಟ್ಟು ನಾವು ಏನು ಮಾಡುವುದಿಲ್ಲ ಕಾನೂನು ಪ್ರಕಾರ ಕ್ರಮವಹಿಸಿ ಕೆಲ¸ವನ್ನು ಸಂಸ್ಥೆಯ ಹಿತದೃಷ್ಟಿಯಿಂದ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: Astrology: ಹಣದ ವಿಚಾರದಲ್ಲಿ ಇಂದು ನೀವು ಜಾಗರೂಕರಾಗಿ ಇರುವುದು ಉತ್ತಮ

ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ, ನಿರ್ದೇಶಕರಾದ ಅರುಣೋದಯ ದುದ್ಗಿ, ರವಿ ಹುಚನೂರ , ಬಸವರಾಜ ಕೆಂದೂರ, ಮಹಾಂತೇಶ ಕತ್ತಿ ಇತರರು ಇದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು