The land records given to lease were altered and purchased by crooks: Veeranna Charantimath accused

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

ಹುನಗುಂದ: ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಶಾಲೆಯ ಆವರಣಕ್ಕೆ 99 ವರ್ಷ ಮೂರು ಎಕರೆ ಆರು ಗುಂಟೆ ಲೀಸ್ ನೀಡಿದ ಜಾಗೆಯನ್ನು ಖಾಸಗಿ ಇಬ್ಬರು ವ್ಯಕ್ತಿಗಳು ಅಧಿಕಾರ ದುರಪಯೋಗ ಪಡಿಸಿಕೊಂಡು ಲೀಸ್ ಅಂತ ಇದ್ದಿದನ್ನು ಅಳಿಸಿ ಖುಷ್ಕಿ ಜಮೀನು ಅಂತ ಜಾಗೆಯನ್ನು ಖರೀದಿ ಮಾಡಿಕೊಂಡಿದ್ದಾರೆ ಎಂದು ವಿ.ಮ.ವಿ.ವ ಸಂಘದ ಕಾಯಾಧ್ಯಕ್ಷ ವೀರಣ್ಣ ಚರಂತಿಮಠ ಆರೋಪಿಸಿದರು.

Join Our Telegram: https://t.me/dcgkannada

ಪಟ್ಟಣದ ವಿ.ಮ.ವಿ.ವ ಸಂಘದ ಕಾರ್ಯಾಲಯದಲ್ಲಿ ಗುರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಲಕಲ್ಲ ವಿಜಯ ಮಹಾಂತೇಶ ಸ್ವಾಮಿಗಳು ಅದರ ಅಧ್ಯಕ್ಷತೆಯಲ್ಲಿ ಮಾರ್ಗದರ್ಶನದಲ್ಲಿ ಈ ಸಂಸ್ಥೆಯು ನಡೆಯುತ್ತಿದ್ದು, ನೂರಾರು ವರ್ಷಗಳ ಇತಿಹಾಸ ಹೊಂದಿದ ಈ ಸಂಸ್ಥೆ ಒಂದು ಸಾರ್ವಜನಿಕವಾದ ಈ ಸಂಸ್ಥೆಯಾಗಿದೆ ಎಂದರು.

ನಾಲ್ಕು ಕ್ಯಾಂಪಸ್‌ಗಳನ್ನು ಹೊಂದಿದ್ದು ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘಕ್ಕೆ 99 ವರ್ಷಗಳ ವರೆಗೆ ಲೀಸ್ ನೀಡಿದ ಬಿಂದುರಾವ್ ಕುಲಕರ್ಣಿ ನೀಡಿದ ರಿ.ಸ.ನಂ ೪೫೮/೧ ಕ್ಷೇತ್ರ ೩ ಎಕರೆ ೬ ಗುಂಟೆ ಮೊದಲು ಲೀಸ್ ಜಮೀನು ಇದ್ದು, ಶಾಲೆಯ ಆಟದ ಮೈದಾನ ಎಂದು ನೊಂದನೆಯಾಗಿದೆ ಎಂದರು.

ಕುಲಕರ್ಣಿಯವರ ಕುಟುಂಬಸ್ಥರು ನಾಲ್ಕು ಜನರು ಸಂಸ್ಥೆಗೆ ೨೦೦೧ ರಲ್ಲಿ ೫೦ ಸಾವಿರವನ್ನು ತೆಗೆದುಕೊಂಡು ಸಂಸ್ಥೆಗೆ ಬಿಟ್ಟು ಕೊಟ್ಟಿದ್ದಾರೆ. ಇದರ ಮಧ್ಯೆ ಇಬ್ಬರು ಖಾಸಗಿ ವ್ಯಕ್ತಿಗಳು ಇನ್ನೂ ೨೨ ವರ್ಷ ಲೀಸ್ ಇದ್ದರೂ ಈ ರೀತಿಯಾಗಿ ಉದ್ದಟತನದ ಕೆಲಸವನ್ನು ಮಾಡಿದ್ದಾರೆ ಎಂದು ಆರೋಪಿಸಿದರು.

ಕೋರ್ಟನಲ್ಲಿ ರಾಜೀಯಾಗಿ ಡಿಗ್ರಿಯಾಗಿದೆ. ಸಂಸ್ಥೆಯ ಆವರಣ ಅಂತ ಆಗಿದೆ. ಅಧಿಕಾರ ಇದೆ ಅಂತ ಯಾವುದೇ ಉದ್ದಟತನ ಕೆಲಸವನ್ನು ಯಾರೂ ಮಾಡಬಾರದು ಈಗಾಗಲೇ ಕರ್ನಾಟಕ ಹೈಕೋಟ್ ತಡೆಯಾಜ್ಞೆಯನ್ನು ನೀಡಿದೆ ಎಂದು ಹೇಳಿದರು.

ಸಂಸ್ಥೆಯ ನಿರ್ದೇಶಕರಿಗೆ ಇಬ್ಬರಿಗೆ ಬೋಗಸ್ ಅಟ್ರಾಸಿಟಿ ಕೇಸ್ ಅವರು ಮಾಡಲಾಗಿದ್ದು. ಬೋಗಸ್ ಇದ್ದಾಗ ಯಾರನ್ನು ಅರೆಸ್ಟ್ ಮಾಡಲು ಬರುವುದಿಲ್ಲ ಕಾನೂನು ಕೇಳಿದ್ದೇವೆ. ಗುರವಾರ ರಾತ್ರಿ ಏಕಾಏಕಿಯಾಗಿ ಶಾಲೆಯ ಕೌಂಪೋಡನ್ನು ಎರಡು ಜೆಸಿಬಿ ಮತ್ತು ಹಿಟ್ಯಾಚಿಯಿಂದ ನಂಬರ ಪ್ಲೇಟ್ ತೆಗೆದು ಕೌಂಪೋಡ್ ಒಡೆಯುವ ಕೆಲಸವನ್ನು ಮಾಡಿದ್ದಾರೆ ಎಂದರು.

ಅವರ ಮೇಲೆ ನೂರಕ್ಕೆ ನೂರರಷ್ಟು ಮಾನನಷ್ಟ ಮೊಕದ್ದಮೆ ಕೇಸ್ ಹಾಕುತ್ತೇವೆ. ನ್ಯಾಯಾಲಯದ ತಡೆಯಾಜ್ಞೆ ಇರುವಾಗ ಈ ರೀತಿಯಾಗಿ ಮಾಡಿದಾಗ ಅವರ ಮೇಲೆ ಸೂಕ್ತ ಕ್ರಮವಹಿದ್ದೇವೆ ಎಂದರು.

ಅಧಿಕಾರಿಗಳು ಯಾರದೋ ಮಾತು ಕೇಳಿ ಕಾನೂನು ಬಿಟ್ಟು ಕೆಲಸ ಮಾಡಿದರೆ, ಅವರ ಮೇಲೆಯೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಬದ್ಧವಾದ ಕೆಲಸವನ್ನು ಮಾತ್ರ ಮಾಡಬೇಕು. ಅಧಿಕಾರ ಮತ್ತು ಸರ್ಕಾರ ಇಂದು ಇರುತ್ತೇ ನಾಳೆ ಹೋಗುತ್ತೆದೆ. ಆದ್ದರಿಂದ ಅಧಿಕಾರಿಗಳು ಕಾನೂನು ಮೀರಿ ಕೆಲಸವನ್ನು ಯಾವುದೇ ಕಾರಣಕ್ಕೆ ಮಾಡಬಾರದು ಎಂದರು.

ಬೇರೆಯವರ ಮಾತು ಕೇಳಿ ಕೆಲಸವನ್ನು ಮಾಡಿದರೆ ಅಧಿಕಾರಿಗಳೇ ನೇರ ಹೋಣೆಯನ್ನು ಮಾಡಲಾಗುವುದು. ಕಾನೂನು ಬಿಟ್ಟು ನಾವು ಏನು ಮಾಡುವುದಿಲ್ಲ ಕಾನೂನು ಪ್ರಕಾರ ಕ್ರಮವಹಿಸಿ ಕೆಲ¸ವನ್ನು ಸಂಸ್ಥೆಯ ಹಿತದೃಷ್ಟಿಯಿಂದ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: Astrology: ಹಣದ ವಿಚಾರದಲ್ಲಿ ಇಂದು ನೀವು ಜಾಗರೂಕರಾಗಿ ಇರುವುದು ಉತ್ತಮ

ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ, ನಿರ್ದೇಶಕರಾದ ಅರುಣೋದಯ ದುದ್ಗಿ, ರವಿ ಹುಚನೂರ , ಬಸವರಾಜ ಕೆಂದೂರ, ಮಹಾಂತೇಶ ಕತ್ತಿ ಇತರರು ಇದ್ದರು.

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ