The land records given to lease were altered and purchased by crooks: Veeranna Charantimath accused

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

Hunagund: ಲೀಸ್ ಗೆ ನೀಡಿದ್ದ ಭೂ ದಾಖಲೆ ತಿದ್ದಿ ಖರೀದಿಸಿದ ದುರುಳರು: ವೀರಣ್ಣ ಚರಂತಿಮಠ ಆರೋಪ

ಹುನಗುಂದ: ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಶಾಲೆಯ ಆವರಣಕ್ಕೆ 99 ವರ್ಷ ಮೂರು ಎಕರೆ ಆರು ಗುಂಟೆ ಲೀಸ್ ನೀಡಿದ ಜಾಗೆಯನ್ನು ಖಾಸಗಿ ಇಬ್ಬರು ವ್ಯಕ್ತಿಗಳು ಅಧಿಕಾರ ದುರಪಯೋಗ ಪಡಿಸಿಕೊಂಡು ಲೀಸ್ ಅಂತ ಇದ್ದಿದನ್ನು ಅಳಿಸಿ ಖುಷ್ಕಿ ಜಮೀನು ಅಂತ ಜಾಗೆಯನ್ನು ಖರೀದಿ ಮಾಡಿಕೊಂಡಿದ್ದಾರೆ ಎಂದು ವಿ.ಮ.ವಿ.ವ ಸಂಘದ ಕಾಯಾಧ್ಯಕ್ಷ ವೀರಣ್ಣ ಚರಂತಿಮಠ ಆರೋಪಿಸಿದರು.

Join Our Telegram: https://t.me/dcgkannada

ಪಟ್ಟಣದ ವಿ.ಮ.ವಿ.ವ ಸಂಘದ ಕಾರ್ಯಾಲಯದಲ್ಲಿ ಗುರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಲಕಲ್ಲ ವಿಜಯ ಮಹಾಂತೇಶ ಸ್ವಾಮಿಗಳು ಅದರ ಅಧ್ಯಕ್ಷತೆಯಲ್ಲಿ ಮಾರ್ಗದರ್ಶನದಲ್ಲಿ ಈ ಸಂಸ್ಥೆಯು ನಡೆಯುತ್ತಿದ್ದು, ನೂರಾರು ವರ್ಷಗಳ ಇತಿಹಾಸ ಹೊಂದಿದ ಈ ಸಂಸ್ಥೆ ಒಂದು ಸಾರ್ವಜನಿಕವಾದ ಈ ಸಂಸ್ಥೆಯಾಗಿದೆ ಎಂದರು.

ನಾಲ್ಕು ಕ್ಯಾಂಪಸ್‌ಗಳನ್ನು ಹೊಂದಿದ್ದು ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘಕ್ಕೆ 99 ವರ್ಷಗಳ ವರೆಗೆ ಲೀಸ್ ನೀಡಿದ ಬಿಂದುರಾವ್ ಕುಲಕರ್ಣಿ ನೀಡಿದ ರಿ.ಸ.ನಂ ೪೫೮/೧ ಕ್ಷೇತ್ರ ೩ ಎಕರೆ ೬ ಗುಂಟೆ ಮೊದಲು ಲೀಸ್ ಜಮೀನು ಇದ್ದು, ಶಾಲೆಯ ಆಟದ ಮೈದಾನ ಎಂದು ನೊಂದನೆಯಾಗಿದೆ ಎಂದರು.

ಕುಲಕರ್ಣಿಯವರ ಕುಟುಂಬಸ್ಥರು ನಾಲ್ಕು ಜನರು ಸಂಸ್ಥೆಗೆ ೨೦೦೧ ರಲ್ಲಿ ೫೦ ಸಾವಿರವನ್ನು ತೆಗೆದುಕೊಂಡು ಸಂಸ್ಥೆಗೆ ಬಿಟ್ಟು ಕೊಟ್ಟಿದ್ದಾರೆ. ಇದರ ಮಧ್ಯೆ ಇಬ್ಬರು ಖಾಸಗಿ ವ್ಯಕ್ತಿಗಳು ಇನ್ನೂ ೨೨ ವರ್ಷ ಲೀಸ್ ಇದ್ದರೂ ಈ ರೀತಿಯಾಗಿ ಉದ್ದಟತನದ ಕೆಲಸವನ್ನು ಮಾಡಿದ್ದಾರೆ ಎಂದು ಆರೋಪಿಸಿದರು.

ಕೋರ್ಟನಲ್ಲಿ ರಾಜೀಯಾಗಿ ಡಿಗ್ರಿಯಾಗಿದೆ. ಸಂಸ್ಥೆಯ ಆವರಣ ಅಂತ ಆಗಿದೆ. ಅಧಿಕಾರ ಇದೆ ಅಂತ ಯಾವುದೇ ಉದ್ದಟತನ ಕೆಲಸವನ್ನು ಯಾರೂ ಮಾಡಬಾರದು ಈಗಾಗಲೇ ಕರ್ನಾಟಕ ಹೈಕೋಟ್ ತಡೆಯಾಜ್ಞೆಯನ್ನು ನೀಡಿದೆ ಎಂದು ಹೇಳಿದರು.

ಸಂಸ್ಥೆಯ ನಿರ್ದೇಶಕರಿಗೆ ಇಬ್ಬರಿಗೆ ಬೋಗಸ್ ಅಟ್ರಾಸಿಟಿ ಕೇಸ್ ಅವರು ಮಾಡಲಾಗಿದ್ದು. ಬೋಗಸ್ ಇದ್ದಾಗ ಯಾರನ್ನು ಅರೆಸ್ಟ್ ಮಾಡಲು ಬರುವುದಿಲ್ಲ ಕಾನೂನು ಕೇಳಿದ್ದೇವೆ. ಗುರವಾರ ರಾತ್ರಿ ಏಕಾಏಕಿಯಾಗಿ ಶಾಲೆಯ ಕೌಂಪೋಡನ್ನು ಎರಡು ಜೆಸಿಬಿ ಮತ್ತು ಹಿಟ್ಯಾಚಿಯಿಂದ ನಂಬರ ಪ್ಲೇಟ್ ತೆಗೆದು ಕೌಂಪೋಡ್ ಒಡೆಯುವ ಕೆಲಸವನ್ನು ಮಾಡಿದ್ದಾರೆ ಎಂದರು.

ಅವರ ಮೇಲೆ ನೂರಕ್ಕೆ ನೂರರಷ್ಟು ಮಾನನಷ್ಟ ಮೊಕದ್ದಮೆ ಕೇಸ್ ಹಾಕುತ್ತೇವೆ. ನ್ಯಾಯಾಲಯದ ತಡೆಯಾಜ್ಞೆ ಇರುವಾಗ ಈ ರೀತಿಯಾಗಿ ಮಾಡಿದಾಗ ಅವರ ಮೇಲೆ ಸೂಕ್ತ ಕ್ರಮವಹಿದ್ದೇವೆ ಎಂದರು.

ಅಧಿಕಾರಿಗಳು ಯಾರದೋ ಮಾತು ಕೇಳಿ ಕಾನೂನು ಬಿಟ್ಟು ಕೆಲಸ ಮಾಡಿದರೆ, ಅವರ ಮೇಲೆಯೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಬದ್ಧವಾದ ಕೆಲಸವನ್ನು ಮಾತ್ರ ಮಾಡಬೇಕು. ಅಧಿಕಾರ ಮತ್ತು ಸರ್ಕಾರ ಇಂದು ಇರುತ್ತೇ ನಾಳೆ ಹೋಗುತ್ತೆದೆ. ಆದ್ದರಿಂದ ಅಧಿಕಾರಿಗಳು ಕಾನೂನು ಮೀರಿ ಕೆಲಸವನ್ನು ಯಾವುದೇ ಕಾರಣಕ್ಕೆ ಮಾಡಬಾರದು ಎಂದರು.

ಬೇರೆಯವರ ಮಾತು ಕೇಳಿ ಕೆಲಸವನ್ನು ಮಾಡಿದರೆ ಅಧಿಕಾರಿಗಳೇ ನೇರ ಹೋಣೆಯನ್ನು ಮಾಡಲಾಗುವುದು. ಕಾನೂನು ಬಿಟ್ಟು ನಾವು ಏನು ಮಾಡುವುದಿಲ್ಲ ಕಾನೂನು ಪ್ರಕಾರ ಕ್ರಮವಹಿಸಿ ಕೆಲ¸ವನ್ನು ಸಂಸ್ಥೆಯ ಹಿತದೃಷ್ಟಿಯಿಂದ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: Astrology: ಹಣದ ವಿಚಾರದಲ್ಲಿ ಇಂದು ನೀವು ಜಾಗರೂಕರಾಗಿ ಇರುವುದು ಉತ್ತಮ

ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ, ನಿರ್ದೇಶಕರಾದ ಅರುಣೋದಯ ದುದ್ಗಿ, ರವಿ ಹುಚನೂರ , ಬಸವರಾಜ ಕೆಂದೂರ, ಮಹಾಂತೇಶ ಕತ್ತಿ ಇತರರು ಇದ್ದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600