ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ**

ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ.

ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ.

ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ ನಿರಂತರವಾಗಿ ಸುರಿದು ಬೆಳೆ ಹಾನಿಯಾಗಿದ್ದರೂ ಯಾವ ಅಧಿಕಾರಿಯೂ ನಮ್ಮತ್ತ ಬಂದಿಲ್ಲ.ಗ್ರಾಮಲೆಕ್ಕಾಧಿಕಾರಿಗಳಿಗೆ ಕರೆ ಮಾಡಿದರೆ ಫೋನ್ ಕರೆ ಸ್ವೀಕರಿಸುವುದಿಲ್ಲ.ರೈತನಿಗೆ ಹಾನಿ ಆಗಿದೆ ಎಂದು ಹೇಗೆ ಯಾರು ಬಂದು ಕೇಳುತ್ತಾರೆ ಎಂದು ಪ್ರಶ್ನಿಸಿದರಲ್ಲದೇ ಸಾಲ ಸೋಲ ಮಾಡಿ ಹೊಲಕ್ಕೆ ಮಾಡಿದ ಖರ್ಚು ಮಳೆಯಿಂದ ಕೊಚ್ಚಿ ಹೋಗಿದೆ.ರೈತರ ಬದುಕು ನೀರಲ್ಲಿ ಬೆಳೆ ಮುಳುಗಿದಂತಾಗಿದೆ ಎಂದು ಹೇಳಿದರು.

ರೈತರಾದ ಹಣಮಂತ ಚಲವಾದಿ,ಬಸವರಾಜ ಹಿರೇಕುರುಬರ,ವಿಠ್ಠಪ್ಪ ಚನ್ನದಾಸರ,ಶಂಕರಗೌಡ ಪಾಟೀಲ,ಮಲ್ಲಣ್ಣ ಕೋಳೂರ,ಪ್ರಭುಗೌಡ ಗುರೆಡ್ಡಿ, ಸಿದ್ದಣ್ಣ ದಿಡ್ಡಿ, ಗುರಣ್ಣ ಕಡ್ಡಿ, ಸಾಹೇಬಗೌಡ ಹರನಾಳ,ಶಂಕ್ರಪ್ಪ ಕುಂಟೋಜಿ ಮೊದಲಾದವರು ಮಾತನಾಡಿ, ಅತೀವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು ಈವರೆಗೂ ಒಬ್ಬರೆ ಒಬ್ಬ ತಾಲ್ಲೂಕು ಮಟ್ಟದ ಅಧಿಕಾರಿಗಳು ನಮ್ಮ ಭಾಗದಲ್ಲಿ ಬಂದಿಲ್ಲ.ಅಳಲು ಯಾರಿಗೆ ಹೇಳಬೇಕು ಎಂದು ಅಲವತ್ತುಕೊಂಡರು.

ಸರ್ವೆ ಮಾಡದ ಅಧಿಕಾರಿಗಳು: ತಾಲ್ಲೂಕು ಆಡಳಿತವೇನೋ ಜಂಟಿ ಸಮೀಕ್ಷೆ ಆರಂಭಿಸಲಾಗಿದೆ ಎಂದು ಹೇಳುತ್ತಿದ್ದಾರೆ.ಆದರೆ ಈವರೆಗೂ ಕೃಷಿ,ಕಂದಾಯ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸರ್ವೆಗೆ ಹೋಗಿರುವುದು ಕಂಡಿಲ್ಲ ಎನ್ನುತ್ತಿದ್ದಾರೆ ಇಂಗಳಗೇರಿ ಭಾಗದ ರೈತರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ