ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ**

ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ.

ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ.

ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ ನಿರಂತರವಾಗಿ ಸುರಿದು ಬೆಳೆ ಹಾನಿಯಾಗಿದ್ದರೂ ಯಾವ ಅಧಿಕಾರಿಯೂ ನಮ್ಮತ್ತ ಬಂದಿಲ್ಲ.ಗ್ರಾಮಲೆಕ್ಕಾಧಿಕಾರಿಗಳಿಗೆ ಕರೆ ಮಾಡಿದರೆ ಫೋನ್ ಕರೆ ಸ್ವೀಕರಿಸುವುದಿಲ್ಲ.ರೈತನಿಗೆ ಹಾನಿ ಆಗಿದೆ ಎಂದು ಹೇಗೆ ಯಾರು ಬಂದು ಕೇಳುತ್ತಾರೆ ಎಂದು ಪ್ರಶ್ನಿಸಿದರಲ್ಲದೇ ಸಾಲ ಸೋಲ ಮಾಡಿ ಹೊಲಕ್ಕೆ ಮಾಡಿದ ಖರ್ಚು ಮಳೆಯಿಂದ ಕೊಚ್ಚಿ ಹೋಗಿದೆ.ರೈತರ ಬದುಕು ನೀರಲ್ಲಿ ಬೆಳೆ ಮುಳುಗಿದಂತಾಗಿದೆ ಎಂದು ಹೇಳಿದರು.

ರೈತರಾದ ಹಣಮಂತ ಚಲವಾದಿ,ಬಸವರಾಜ ಹಿರೇಕುರುಬರ,ವಿಠ್ಠಪ್ಪ ಚನ್ನದಾಸರ,ಶಂಕರಗೌಡ ಪಾಟೀಲ,ಮಲ್ಲಣ್ಣ ಕೋಳೂರ,ಪ್ರಭುಗೌಡ ಗುರೆಡ್ಡಿ, ಸಿದ್ದಣ್ಣ ದಿಡ್ಡಿ, ಗುರಣ್ಣ ಕಡ್ಡಿ, ಸಾಹೇಬಗೌಡ ಹರನಾಳ,ಶಂಕ್ರಪ್ಪ ಕುಂಟೋಜಿ ಮೊದಲಾದವರು ಮಾತನಾಡಿ, ಅತೀವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು ಈವರೆಗೂ ಒಬ್ಬರೆ ಒಬ್ಬ ತಾಲ್ಲೂಕು ಮಟ್ಟದ ಅಧಿಕಾರಿಗಳು ನಮ್ಮ ಭಾಗದಲ್ಲಿ ಬಂದಿಲ್ಲ.ಅಳಲು ಯಾರಿಗೆ ಹೇಳಬೇಕು ಎಂದು ಅಲವತ್ತುಕೊಂಡರು.

ಸರ್ವೆ ಮಾಡದ ಅಧಿಕಾರಿಗಳು: ತಾಲ್ಲೂಕು ಆಡಳಿತವೇನೋ ಜಂಟಿ ಸಮೀಕ್ಷೆ ಆರಂಭಿಸಲಾಗಿದೆ ಎಂದು ಹೇಳುತ್ತಿದ್ದಾರೆ.ಆದರೆ ಈವರೆಗೂ ಕೃಷಿ,ಕಂದಾಯ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸರ್ವೆಗೆ ಹೋಗಿರುವುದು ಕಂಡಿಲ್ಲ ಎನ್ನುತ್ತಿದ್ದಾರೆ ಇಂಗಳಗೇರಿ ಭಾಗದ ರೈತರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ