ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ; ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ; ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಮುದ್ದೇಬಿಹಾಳ : ಸಾಮಾಜಿಕ ಜಾಲತಾಣಗಳ ಮೂಲಕ ಮದರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನಲಾದ ಫೋಟೋ ಕೃತಕವಾಗಿ ಚಿತ್ರಿಸಿದ್ದು ಆ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿಲ್ಲ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ಸ್ಪಷ್ಟಪಡಿಸಿದ್ದಾರೆ.

ಚಿರತೆ ಕಾಣಿಸಿಕೊಂಡಿದ ಎಂದು ಗ್ರಾಮದ ಯುವಕ ಶಿವು ಕನ್ನೊಳ್ಳಿ ಎಂಬುವರು ತಮ್ಮ ಸ್ನೇಹಿತರ ಮೂಲಕ ಮಾಹಿತಿ ಪಡೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊoಡಿದ್ದ ಫೋಟೋ ಅಸಲಿ ಅಲ್ಲ.ಸದರಿ ಸ್ಥಳಕ್ಕೆ ನಮ್ಮ ಇಲಾಖೆಯ ಗಸ್ತು ಪಾಲಕ ವಿಠಲ ಬೋರಟಗಿ ಅವರನ್ನು ಕಳಿಸಿ ಪರಿಶೀಲನೆ ನಡೆಸಿದ್ದು ಅಲ್ಲಿ ಚಿರತೆ ಓಡಾಡಿದ ಯಾವುದೇ ಕುರುಹುಗಳಿಲ್ಲ.ಅಲ್ಲದೇ ಸದರಿ ಸ್ಥಳದ ಕಿರುಸೇತುವೆ ಹಿಂದೆ ಆಳವಾದ ಗುಂಡಿ ಇದ್ದು ಏಳೆಂಟು ಫೂಟ ಎತ್ತರ ಇರುವ ವ್ಯಕ್ತಿ ನಿಂತರೂ ಕಾಣುವುದಿಲ್ಲ.ಚಿರತೆ ಕಾಣಿಸಿಕೊಂಡಿರುವ ಕುರಿತು ಸ್ಪಷ್ಟವಾಗಿ ಯಾರೂ ಹೇಳುತ್ತಿಲ್ಲ.ಹೀಗಾಗಿ ಗ್ರಾಮಸ್ಥರು ಚಿರತೆ ಕಂಡಿದೆ ಎಂಬ ಸುದ್ದಿ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಸುಳ್ಳು ವದಂತಿ ಹರಡಿಸಿದವರ ಮೇಲೆ ಕ್ರಮ: ಚಿರತೆ ಬಂದಿದೆ ಎಂದು ಸುಳ್ಳು ವದಂತಿ ಹಬ್ಬಿಸಿ ಅರಣ್ಯ ಇಲಾಖೆಯವರಿಗೆ ಹಾಗೂ ಗ್ರಾಮಸ್ಥರಿಗೆ ಆತಂಕವನ್ನುoಟು ಮಾಡುವ ವ್ಯಕ್ತಿಗಳ ಮೇಲೆ ಅರಣ್ಯ ಇಲಾಖೆಯ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.ಮಾಹಿತಿ ಹಂಚಿಕೊoಡವರಿಗೆ ಮೊದಲು ನೋಟಿಸ್ ನೀಡಿ ಲಿಖಿತ ಹೇಳಿಕೆ ಪಡೆದುಕೊಳ್ಳುತ್ತೇವೆ.ಹೇಳಿಕೆ ಅಸ್ಪಷ್ಟವಾಗಿದ್ದರೆ ಅವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡುತ್ತೇವೆ ಎಂದು ಹೇಳಿದರು.


ಗ್ರಾಮಸ್ಥರ ಸ್ಪಷ್ಟನೆ: ಚಿರತೆ ಕಂಡಿದೆ ಎಂದು ಹಂಚಿಕೊಳ್ಳಲಾದ ಫೋಟೋ ಅಸಲಿ ಅಲ್ಲ ಎಂಬುದು ನಮಗೆ ತಡವಾಗಿ ಗೊತ್ತಾಯಿತು.ಕೆಲವು ಕಿಡಿಗೇಡಿಗಳು ಚಿರತೆ ಕಂಡಿದೆ ಎಂದು ಮಾತನಾಡಿದ್ದನ್ನೆ ಫೋಟೋ ಎಡಿಟ್ ಮಾಡಿ ಗ್ರಾಮಸ್ಥರಲ್ಲಿ ವಿನಾಕಾರಣ ಆತಂಕ ಹರಡುವಂತೆ ಮಾಡಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊAಡಿರುವ ಫೋಟೋ ಅಸಲಿ ಅಲ್ಲ.ಆದರೆ ಈ ಭಾಗದಲ್ಲಿ ಚಿರತೆ ಓಡಾಡಿರುವುದನ್ನು ಹಲವರು ಕಂಡಿದ್ದಾರೆ.ಹಳ್ಳದ ಬಳಿ ನೀರುನಾಯಿಗಳಿದ್ದು ಅವುಗಳ ಬೇಟೆಗೆ ಚಿರತೆ ಬಂದು ಹೋಗಿರುವ ಉದಾಹರಣೆಗಳು ಇವೆ ಎಂದು ಮದರಿ ಗ್ರಾಮದ ಮುಖಂಡ ಶಿವು ಕನ್ನೊಳ್ಳಿ ಸ್ಪಷ್ಟಪಡಿಸಿದ್ದಾರೆ.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,