ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಬೆಂಗಳೂರು: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ ಮಂದಿರಗಳ ಮೇಲಿನ ದಾಳಿ ಕುರಿತು ಬಿಜೆಪಿ ಸರ್ಕಾರ ರಕ್ಷಣೆಗೆ ನಿಲ್ಲದೆ ಸುಮ್ಮನಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Mutalik) ಕಿಡಿಕಾರಿದ್ದಾರೆ.

ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀ ರಾಮ ಸೇನೆವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಿಂದೂಗಳು, ಶ್ರೀ ರಾಮನನ್ನು ನಂಬಿ ಅಧಿಕಾರಕ್ಕೆ ಬಂದ ಪಕ್ಷ, ಆದರೆ ಇದೀಗ ನೆರೆಯ ರಾಷ್ಟ್ರದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೂ ಕೂಡ ಕೈಕಟ್ಟಿ ಕುಳಿತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Join Our Telegram: https://t.me/dcgkannada

ಬಾಂಗ್ಲಾದಲ್ಲಿ ನಮ್ಮ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಕನಿಷ್ಠ ಎಚ್ಚರಿಕೆ ಕೊಡಲು ಮೋದಿ ಸರ್ಕಾರಕ್ಕೆ ಆಗ್ತಾಇಲ್ಲ ಅಂದ್ರೆ ಏನ್ ಅರ್ಥ..? ಇವತ್ ಬಾಂಗ್ಲಾ, ನಾಳೆ ಪಶ್ಚಿಮ ಬಂಗಾಳ, ನಾಡಿದ್ದು ದೆಹಲಿ,ಆಚೆ ನಾಡಿದ್ದು ಕರ್ನಾಟಕ. ಎಷ್ಟಂತ ಸಹಿಸಬೇಕು..? ಹಿಂದೂಗಳ ರಕ್ಷಣೆ ಮಾಡಬೇಕಾದವರು ಯಾರು ಎಂದು ಪ್ರಮೋದ್ ಮುತಾಲಿಕ್ (Pramod mutalik) ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಶ್ರೀಮತಿ ಇಂದಿರಾ ಗಾಂಧಿಯವರು ಇದೇ ರೀತಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದಾಗ, ಪಾಕಿಸ್ತಾನವನ್ನು ತುಂಡರಿಸಿ ಬಾಂಗ್ಲಾದೇವನ್ನು ರಚಿಸಿದರು. ಅಂತೆಯೇ ತ್ವರಿತವಾಗಿ ಕೇಂದ್ರ ಸರ್ಕಾರ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು.

ಎಷ್ಟಂತ ಸಹಿಸುವುದು, ಓಟಾಕಿದ್ದೀವಿ, ಅಧಿಕಾರಕ್ಕೆ ತಂದಿದ್ದೀವಿ.. ಆದರೂ ನಮ್ಮವರೇ ಸಾಯುತ್ತಿದ್ದಾರೆ.. ಇಡೀ ದೇಶ ಆಕ್ರೋಶದಿಂದ ಕುದಿಯುತ್ತಿದೆ. ಮೋದಿ ಅವರೇ ನಿಮ್ಮ ಕಡೆ ಇಡೀ ದೇಶ ನೋಡ್ತಾ ಇದೆ. ಆ ಹೆಣ್ಣುಮಕ್ಕಳ ಅಳಲು ನಿಮಗೂ ಕೇಳುಸ್ತಾ ಇದೆ. ಹೆಣ್ಣುಮಕ್ಕಳ ರಕ್ತಪಾತ ನಿಮಗೂ ಗೊತ್ತಾಗ್ತಾ ಇದೆ. ಆದರೂ ಕೂಡ ಏನೂ ಮಾಡ್ತಾ ಇಲ್ಲ.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಇಂದು ಕರ್ನಾಟಕ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ಮೂಲಕ ಮೋದಿ ಸರ್ಕಾರಕ್ಕೆ, ಕೇಂದ್ರ ಸರಕಾರಕ್ಕೆ ಒಂದು ಸಂದೇಶ ಕೊಡಲು ಇದು ಆರಂಭ.

ಒಂದು ವೇಳೆ ಕೇಂದ್ರ ಹಿಂದೂಗಳ ರಕ್ಷಣೆಗೆ ಹಿಂದೇಟು ಹಾಕಿದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಮುಖಂಡರಾದ ಸುಂದರೇಶ್, ಅಮರನಾಥ್, ಗಂಗಾಧರ್, ಕುಲಕರ್ಣಿ ಮತ್ತಿತರರಿದ್ದರು.

Latest News

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ