ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಬೆಂಗಳೂರು: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ ಮಂದಿರಗಳ ಮೇಲಿನ ದಾಳಿ ಕುರಿತು ಬಿಜೆಪಿ ಸರ್ಕಾರ ರಕ್ಷಣೆಗೆ ನಿಲ್ಲದೆ ಸುಮ್ಮನಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Mutalik) ಕಿಡಿಕಾರಿದ್ದಾರೆ.

ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀ ರಾಮ ಸೇನೆವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಿಂದೂಗಳು, ಶ್ರೀ ರಾಮನನ್ನು ನಂಬಿ ಅಧಿಕಾರಕ್ಕೆ ಬಂದ ಪಕ್ಷ, ಆದರೆ ಇದೀಗ ನೆರೆಯ ರಾಷ್ಟ್ರದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೂ ಕೂಡ ಕೈಕಟ್ಟಿ ಕುಳಿತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Join Our Telegram: https://t.me/dcgkannada

ಬಾಂಗ್ಲಾದಲ್ಲಿ ನಮ್ಮ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಕನಿಷ್ಠ ಎಚ್ಚರಿಕೆ ಕೊಡಲು ಮೋದಿ ಸರ್ಕಾರಕ್ಕೆ ಆಗ್ತಾಇಲ್ಲ ಅಂದ್ರೆ ಏನ್ ಅರ್ಥ..? ಇವತ್ ಬಾಂಗ್ಲಾ, ನಾಳೆ ಪಶ್ಚಿಮ ಬಂಗಾಳ, ನಾಡಿದ್ದು ದೆಹಲಿ,ಆಚೆ ನಾಡಿದ್ದು ಕರ್ನಾಟಕ. ಎಷ್ಟಂತ ಸಹಿಸಬೇಕು..? ಹಿಂದೂಗಳ ರಕ್ಷಣೆ ಮಾಡಬೇಕಾದವರು ಯಾರು ಎಂದು ಪ್ರಮೋದ್ ಮುತಾಲಿಕ್ (Pramod mutalik) ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಶ್ರೀಮತಿ ಇಂದಿರಾ ಗಾಂಧಿಯವರು ಇದೇ ರೀತಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದಾಗ, ಪಾಕಿಸ್ತಾನವನ್ನು ತುಂಡರಿಸಿ ಬಾಂಗ್ಲಾದೇವನ್ನು ರಚಿಸಿದರು. ಅಂತೆಯೇ ತ್ವರಿತವಾಗಿ ಕೇಂದ್ರ ಸರ್ಕಾರ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು.

ಎಷ್ಟಂತ ಸಹಿಸುವುದು, ಓಟಾಕಿದ್ದೀವಿ, ಅಧಿಕಾರಕ್ಕೆ ತಂದಿದ್ದೀವಿ.. ಆದರೂ ನಮ್ಮವರೇ ಸಾಯುತ್ತಿದ್ದಾರೆ.. ಇಡೀ ದೇಶ ಆಕ್ರೋಶದಿಂದ ಕುದಿಯುತ್ತಿದೆ. ಮೋದಿ ಅವರೇ ನಿಮ್ಮ ಕಡೆ ಇಡೀ ದೇಶ ನೋಡ್ತಾ ಇದೆ. ಆ ಹೆಣ್ಣುಮಕ್ಕಳ ಅಳಲು ನಿಮಗೂ ಕೇಳುಸ್ತಾ ಇದೆ. ಹೆಣ್ಣುಮಕ್ಕಳ ರಕ್ತಪಾತ ನಿಮಗೂ ಗೊತ್ತಾಗ್ತಾ ಇದೆ. ಆದರೂ ಕೂಡ ಏನೂ ಮಾಡ್ತಾ ಇಲ್ಲ.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಇಂದು ಕರ್ನಾಟಕ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ಮೂಲಕ ಮೋದಿ ಸರ್ಕಾರಕ್ಕೆ, ಕೇಂದ್ರ ಸರಕಾರಕ್ಕೆ ಒಂದು ಸಂದೇಶ ಕೊಡಲು ಇದು ಆರಂಭ.

ಒಂದು ವೇಳೆ ಕೇಂದ್ರ ಹಿಂದೂಗಳ ರಕ್ಷಣೆಗೆ ಹಿಂದೇಟು ಹಾಕಿದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಮುಖಂಡರಾದ ಸುಂದರೇಶ್, ಅಮರನಾಥ್, ಗಂಗಾಧರ್, ಕುಲಕರ್ಣಿ ಮತ್ತಿತರರಿದ್ದರು.

Latest News

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಆರಂಭೋತ್ಸವ ಸರಳವಾಗಿ ನಡೆಸಲಾಯಿತು. ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಅವರ ನೇತೃತ್ವದಲ್ಲಿ ಶಿಕ್ಷಕರು ಸರಸ್ವತಿ ದೇವಿ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಇದೇ ವೇಳೆ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು, ಸರಸ್ವತಿ ದೇವಿಗೆ ನಮಿಸಿ ಶಾಲಾ ಮಕ್ಕಳಿಗೆ ಹೂವು ನೀಡಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದೇ ವೇಳೆ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ ಟಿಸಿ ಒದಗಿಸುವಲ್ಲಿ ವಿಳಂಬ ಧೋರಣೆ ಖಂಡಿಸಿದ ರೈತರು ಸೋಮವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಅನೇಕ ಗ್ರಾಮಗಳಿಂದ ಬಂದಿದ್ದ ರೈತರು ತಮ್ಮೂರುಗಳಲ್ಲಿ ಎದುರಿಸುತ್ತಿರುವ ವಿದ್ಯುತ್ ಸಂಬoಧಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ