ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಬೆಂಗಳೂರು: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ ಮಂದಿರಗಳ ಮೇಲಿನ ದಾಳಿ ಕುರಿತು ಬಿಜೆಪಿ ಸರ್ಕಾರ ರಕ್ಷಣೆಗೆ ನಿಲ್ಲದೆ ಸುಮ್ಮನಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Mutalik) ಕಿಡಿಕಾರಿದ್ದಾರೆ.

ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀ ರಾಮ ಸೇನೆವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಿಂದೂಗಳು, ಶ್ರೀ ರಾಮನನ್ನು ನಂಬಿ ಅಧಿಕಾರಕ್ಕೆ ಬಂದ ಪಕ್ಷ, ಆದರೆ ಇದೀಗ ನೆರೆಯ ರಾಷ್ಟ್ರದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೂ ಕೂಡ ಕೈಕಟ್ಟಿ ಕುಳಿತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Join Our Telegram: https://t.me/dcgkannada

ಬಾಂಗ್ಲಾದಲ್ಲಿ ನಮ್ಮ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಕನಿಷ್ಠ ಎಚ್ಚರಿಕೆ ಕೊಡಲು ಮೋದಿ ಸರ್ಕಾರಕ್ಕೆ ಆಗ್ತಾಇಲ್ಲ ಅಂದ್ರೆ ಏನ್ ಅರ್ಥ..? ಇವತ್ ಬಾಂಗ್ಲಾ, ನಾಳೆ ಪಶ್ಚಿಮ ಬಂಗಾಳ, ನಾಡಿದ್ದು ದೆಹಲಿ,ಆಚೆ ನಾಡಿದ್ದು ಕರ್ನಾಟಕ. ಎಷ್ಟಂತ ಸಹಿಸಬೇಕು..? ಹಿಂದೂಗಳ ರಕ್ಷಣೆ ಮಾಡಬೇಕಾದವರು ಯಾರು ಎಂದು ಪ್ರಮೋದ್ ಮುತಾಲಿಕ್ (Pramod mutalik) ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಶ್ರೀಮತಿ ಇಂದಿರಾ ಗಾಂಧಿಯವರು ಇದೇ ರೀತಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದಾಗ, ಪಾಕಿಸ್ತಾನವನ್ನು ತುಂಡರಿಸಿ ಬಾಂಗ್ಲಾದೇವನ್ನು ರಚಿಸಿದರು. ಅಂತೆಯೇ ತ್ವರಿತವಾಗಿ ಕೇಂದ್ರ ಸರ್ಕಾರ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು.

ಎಷ್ಟಂತ ಸಹಿಸುವುದು, ಓಟಾಕಿದ್ದೀವಿ, ಅಧಿಕಾರಕ್ಕೆ ತಂದಿದ್ದೀವಿ.. ಆದರೂ ನಮ್ಮವರೇ ಸಾಯುತ್ತಿದ್ದಾರೆ.. ಇಡೀ ದೇಶ ಆಕ್ರೋಶದಿಂದ ಕುದಿಯುತ್ತಿದೆ. ಮೋದಿ ಅವರೇ ನಿಮ್ಮ ಕಡೆ ಇಡೀ ದೇಶ ನೋಡ್ತಾ ಇದೆ. ಆ ಹೆಣ್ಣುಮಕ್ಕಳ ಅಳಲು ನಿಮಗೂ ಕೇಳುಸ್ತಾ ಇದೆ. ಹೆಣ್ಣುಮಕ್ಕಳ ರಕ್ತಪಾತ ನಿಮಗೂ ಗೊತ್ತಾಗ್ತಾ ಇದೆ. ಆದರೂ ಕೂಡ ಏನೂ ಮಾಡ್ತಾ ಇಲ್ಲ.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಇಂದು ಕರ್ನಾಟಕ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ಮೂಲಕ ಮೋದಿ ಸರ್ಕಾರಕ್ಕೆ, ಕೇಂದ್ರ ಸರಕಾರಕ್ಕೆ ಒಂದು ಸಂದೇಶ ಕೊಡಲು ಇದು ಆರಂಭ.

ಒಂದು ವೇಳೆ ಕೇಂದ್ರ ಹಿಂದೂಗಳ ರಕ್ಷಣೆಗೆ ಹಿಂದೇಟು ಹಾಕಿದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಮುಖಂಡರಾದ ಸುಂದರೇಶ್, ಅಮರನಾಥ್, ಗಂಗಾಧರ್, ಕುಲಕರ್ಣಿ ಮತ್ತಿತರರಿದ್ದರು.

Latest News

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ