ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಬೆಂಗಳೂರು: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ ಮಂದಿರಗಳ ಮೇಲಿನ ದಾಳಿ ಕುರಿತು ಬಿಜೆಪಿ ಸರ್ಕಾರ ರಕ್ಷಣೆಗೆ ನಿಲ್ಲದೆ ಸುಮ್ಮನಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Mutalik) ಕಿಡಿಕಾರಿದ್ದಾರೆ.

ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀ ರಾಮ ಸೇನೆವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಿಂದೂಗಳು, ಶ್ರೀ ರಾಮನನ್ನು ನಂಬಿ ಅಧಿಕಾರಕ್ಕೆ ಬಂದ ಪಕ್ಷ, ಆದರೆ ಇದೀಗ ನೆರೆಯ ರಾಷ್ಟ್ರದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೂ ಕೂಡ ಕೈಕಟ್ಟಿ ಕುಳಿತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Join Our Telegram: https://t.me/dcgkannada

ಬಾಂಗ್ಲಾದಲ್ಲಿ ನಮ್ಮ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಕನಿಷ್ಠ ಎಚ್ಚರಿಕೆ ಕೊಡಲು ಮೋದಿ ಸರ್ಕಾರಕ್ಕೆ ಆಗ್ತಾಇಲ್ಲ ಅಂದ್ರೆ ಏನ್ ಅರ್ಥ..? ಇವತ್ ಬಾಂಗ್ಲಾ, ನಾಳೆ ಪಶ್ಚಿಮ ಬಂಗಾಳ, ನಾಡಿದ್ದು ದೆಹಲಿ,ಆಚೆ ನಾಡಿದ್ದು ಕರ್ನಾಟಕ. ಎಷ್ಟಂತ ಸಹಿಸಬೇಕು..? ಹಿಂದೂಗಳ ರಕ್ಷಣೆ ಮಾಡಬೇಕಾದವರು ಯಾರು ಎಂದು ಪ್ರಮೋದ್ ಮುತಾಲಿಕ್ (Pramod mutalik) ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಶ್ರೀಮತಿ ಇಂದಿರಾ ಗಾಂಧಿಯವರು ಇದೇ ರೀತಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದಾಗ, ಪಾಕಿಸ್ತಾನವನ್ನು ತುಂಡರಿಸಿ ಬಾಂಗ್ಲಾದೇವನ್ನು ರಚಿಸಿದರು. ಅಂತೆಯೇ ತ್ವರಿತವಾಗಿ ಕೇಂದ್ರ ಸರ್ಕಾರ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು.

ಎಷ್ಟಂತ ಸಹಿಸುವುದು, ಓಟಾಕಿದ್ದೀವಿ, ಅಧಿಕಾರಕ್ಕೆ ತಂದಿದ್ದೀವಿ.. ಆದರೂ ನಮ್ಮವರೇ ಸಾಯುತ್ತಿದ್ದಾರೆ.. ಇಡೀ ದೇಶ ಆಕ್ರೋಶದಿಂದ ಕುದಿಯುತ್ತಿದೆ. ಮೋದಿ ಅವರೇ ನಿಮ್ಮ ಕಡೆ ಇಡೀ ದೇಶ ನೋಡ್ತಾ ಇದೆ. ಆ ಹೆಣ್ಣುಮಕ್ಕಳ ಅಳಲು ನಿಮಗೂ ಕೇಳುಸ್ತಾ ಇದೆ. ಹೆಣ್ಣುಮಕ್ಕಳ ರಕ್ತಪಾತ ನಿಮಗೂ ಗೊತ್ತಾಗ್ತಾ ಇದೆ. ಆದರೂ ಕೂಡ ಏನೂ ಮಾಡ್ತಾ ಇಲ್ಲ.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಇಂದು ಕರ್ನಾಟಕ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ಮೂಲಕ ಮೋದಿ ಸರ್ಕಾರಕ್ಕೆ, ಕೇಂದ್ರ ಸರಕಾರಕ್ಕೆ ಒಂದು ಸಂದೇಶ ಕೊಡಲು ಇದು ಆರಂಭ.

ಒಂದು ವೇಳೆ ಕೇಂದ್ರ ಹಿಂದೂಗಳ ರಕ್ಷಣೆಗೆ ಹಿಂದೇಟು ಹಾಕಿದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಮುಖಂಡರಾದ ಸುಂದರೇಶ್, ಅಮರನಾಥ್, ಗಂಗಾಧರ್, ಕುಲಕರ್ಣಿ ಮತ್ತಿತರರಿದ್ದರು.

Latest News

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ   ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ಪಟ್ಟಣದ ಎಸ್.ಎಸ್.ವಿ.ವಿ ಸಂಘದ ಅಡಿಯಲ್ಲಿ ನಡೆಯುತ್ತಿರುವ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್ ಇಂಗ್ಲಿಷ್

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ಹಾಗೂ ಅವರಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿದ್ಯಾಸ್ಪೂರ್ತಿ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ:                                            3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು‌‌ ಮೂರು‌ ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ‌ ಕೆ. ಅವರು‌ ಅಧಿಕಾರಿಗಳಿಗೆ‌ ಸೂಚಿಸಿದರು.‌ ಕೃಷಿ, ತೋಟಗಾರಿಕೆ ಹಾಗೂ‌ ಕಂದಾಯ ಇಲಾಖೆ‌ ಅಧಿಕಾರಿಗಳು ಹಾಗೂ ಬೆಳೆ ವಿಮಾ ಕಂಪನಿಯ ಅಧಿಕಾರಿಗಳೊಂದಿಗೆ‌ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಈ ಸೂಚನೆ‌ ನೀಡಿದರು. ಕಂದಾಯ, ಕೃಷಿ ಹಾಗೂ

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ ಬೆಳವಣಿಗೆಯನ್ನು ನೋಡಿ ಹೊಟ್ಟೆ ಉರಿದುಕೊಳ್ಳಬೇಡಿ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು. ತಾಲ್ಲೂಕಿನ ಖಿಲಾರಹಟ್ಟಿ ಗ್ರಾಮದಲ್ಲಿ ಸಮಾಜ ಸೇವಕ ಎಂ.ಎನ್.ಮದರಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಬೈದವರು,ಹೊಗಳಿದವರನ್ನು ಅಪ್ಪಿಕೊಳ್ಳುವ ಸಮಾಜ ಕುರುಬ ಸಮಾಜವಾಗಿದೆ.ಅತೀ ಹೆಚ್ಚು ಭಕ್ತಿಯಿಂದ ನಡೆದುಕೊಳ್ಳುವ ಸಮಾಜವೂ ಕುರುಬ ಸಮಾಜವಾಗಿದೆ.ನಿಮ್ಮ