ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಬೆಂಗಳೂರು: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ ಮಂದಿರಗಳ ಮೇಲಿನ ದಾಳಿ ಕುರಿತು ಬಿಜೆಪಿ ಸರ್ಕಾರ ರಕ್ಷಣೆಗೆ ನಿಲ್ಲದೆ ಸುಮ್ಮನಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Mutalik) ಕಿಡಿಕಾರಿದ್ದಾರೆ.

ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀ ರಾಮ ಸೇನೆವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಿಂದೂಗಳು, ಶ್ರೀ ರಾಮನನ್ನು ನಂಬಿ ಅಧಿಕಾರಕ್ಕೆ ಬಂದ ಪಕ್ಷ, ಆದರೆ ಇದೀಗ ನೆರೆಯ ರಾಷ್ಟ್ರದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೂ ಕೂಡ ಕೈಕಟ್ಟಿ ಕುಳಿತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Join Our Telegram: https://t.me/dcgkannada

ಬಾಂಗ್ಲಾದಲ್ಲಿ ನಮ್ಮ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಕನಿಷ್ಠ ಎಚ್ಚರಿಕೆ ಕೊಡಲು ಮೋದಿ ಸರ್ಕಾರಕ್ಕೆ ಆಗ್ತಾಇಲ್ಲ ಅಂದ್ರೆ ಏನ್ ಅರ್ಥ..? ಇವತ್ ಬಾಂಗ್ಲಾ, ನಾಳೆ ಪಶ್ಚಿಮ ಬಂಗಾಳ, ನಾಡಿದ್ದು ದೆಹಲಿ,ಆಚೆ ನಾಡಿದ್ದು ಕರ್ನಾಟಕ. ಎಷ್ಟಂತ ಸಹಿಸಬೇಕು..? ಹಿಂದೂಗಳ ರಕ್ಷಣೆ ಮಾಡಬೇಕಾದವರು ಯಾರು ಎಂದು ಪ್ರಮೋದ್ ಮುತಾಲಿಕ್ (Pramod mutalik) ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಶ್ರೀಮತಿ ಇಂದಿರಾ ಗಾಂಧಿಯವರು ಇದೇ ರೀತಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದಾಗ, ಪಾಕಿಸ್ತಾನವನ್ನು ತುಂಡರಿಸಿ ಬಾಂಗ್ಲಾದೇವನ್ನು ರಚಿಸಿದರು. ಅಂತೆಯೇ ತ್ವರಿತವಾಗಿ ಕೇಂದ್ರ ಸರ್ಕಾರ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು.

ಎಷ್ಟಂತ ಸಹಿಸುವುದು, ಓಟಾಕಿದ್ದೀವಿ, ಅಧಿಕಾರಕ್ಕೆ ತಂದಿದ್ದೀವಿ.. ಆದರೂ ನಮ್ಮವರೇ ಸಾಯುತ್ತಿದ್ದಾರೆ.. ಇಡೀ ದೇಶ ಆಕ್ರೋಶದಿಂದ ಕುದಿಯುತ್ತಿದೆ. ಮೋದಿ ಅವರೇ ನಿಮ್ಮ ಕಡೆ ಇಡೀ ದೇಶ ನೋಡ್ತಾ ಇದೆ. ಆ ಹೆಣ್ಣುಮಕ್ಕಳ ಅಳಲು ನಿಮಗೂ ಕೇಳುಸ್ತಾ ಇದೆ. ಹೆಣ್ಣುಮಕ್ಕಳ ರಕ್ತಪಾತ ನಿಮಗೂ ಗೊತ್ತಾಗ್ತಾ ಇದೆ. ಆದರೂ ಕೂಡ ಏನೂ ಮಾಡ್ತಾ ಇಲ್ಲ.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಇಂದು ಕರ್ನಾಟಕ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ಮೂಲಕ ಮೋದಿ ಸರ್ಕಾರಕ್ಕೆ, ಕೇಂದ್ರ ಸರಕಾರಕ್ಕೆ ಒಂದು ಸಂದೇಶ ಕೊಡಲು ಇದು ಆರಂಭ.

ಒಂದು ವೇಳೆ ಕೇಂದ್ರ ಹಿಂದೂಗಳ ರಕ್ಷಣೆಗೆ ಹಿಂದೇಟು ಹಾಕಿದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಮುಖಂಡರಾದ ಸುಂದರೇಶ್, ಅಮರನಾಥ್, ಗಂಗಾಧರ್, ಕುಲಕರ್ಣಿ ಮತ್ತಿತರರಿದ್ದರು.

Latest News

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಜಿಲ್ಲೆಯ ರಾಜಕಾರಣದಲ್ಲಿ ಸಾಸನೂರ ಬಿ.ಎಸ್.ಪಾಟೀಲ,ಪ್ರಕಾಶ ರಾಠೋಡ ,ಶರಣಪ್ಪ ಸುಣಗಾರ,ಮನೋಹರ ಐನಾಪೂರ ಅವರನ್ನು

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ ನಾಮಪತ್ರಗಳನ್ನು ಕ್ರಮಬದ್ಧಗೊಳಿಸಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಕಲ್ಬುರ್ಗಿ ಉಚ್ಛ ನ್ಯಾಯಾಲಯ ಮಧ್ಯಂತರ ಆದೇಶ ನೀಡಿರುವ ಬೆಳವಣಿಗೆ ಮಂಗಳವಾರ ಜರುಗಿದೆ. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತ ವಿವರಣೆ ನೀಡಿದ ಮುಖಂಡ ಹಾಗೂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ ಅವರು, ಚುನಾವಣಾಧಿಕಾರಿಗಳು ನಮ್ಮ ನಾಮಪತ್ರಗಳನ್ನು ತಿರಸ್ಕರಿಸಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ ರಚನೆಯಲ್ಲಿ ಅಕ್ರಮ ನಡೆದಿದ್ದು ತನಿಖೆ ನಡೆಸಿ ನಿಯಮಾನುಸಾರ ಸಮೀತಿಯನ್ನು ಮರು ರಚಿಸಬೇಕು ಎಂದು ಆಗ್ರಹಿಸಿ ಗ್ರಾಮದ ಯುವಕರು,ಕೆಲ ಮುಖಂಡರು ಬಿಇಓಗೆ ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಪಟ್ಟಣದ ಬಿಇಓ ಕಚೇರಿಗೆ ಆಗಮಿಸಿದ್ದ ಗ್ರಾಮದ ಯುವಕರು,ಮುಖಂಡರು ಬಿಇಓ ಬಿ.ಎಸ್.ಸಾವಳಗಿ ಅವರಿಗೆ ಮನವಿ ಸಲ್ಲಿಸಿದರು.ಈ ಕುರಿತು ಸಲ್ಲಿಸಿದ ಮನವಿಯಲ್ಲಿ, ಕುಂಟೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ